Homeಮುಖಪುಟಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

- Advertisement -
- Advertisement -

ಕೇರಳದ ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಬಿಷಪ್‌ ಫ್ರಾಂಕೋ ಮುಲಕ್ಕಲ್‌ ಅವರನ್ನು ರಾಜ್ಯದ ಕಾನ್ವೆಂಟ್‌ನಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರದ ಆರೋಪದಿಂದ ಇತ್ತಿಚೆಗೆ ಖುಲಾಸೆಗೊಳಿಸಿತ್ತು. ಇದಾಗಿ ಒಂದು ದಿನದ ನಂತರ, ಕೇರಳ ಪೊಲೀಸರು ಶನಿವಾರ ಹೈಕೋರ್ಟ್‌ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ಸಲಹೆಯನ್ನು ಕೋರಿದ್ದಾರೆ.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಪೊಲೀಸರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ನಿಂದ ಕಾನೂನು ಅಭಿಪ್ರಾಯ ಕೇಳಿದ್ದಾರೆ ಎಂದು ಕೊಟ್ಟಾಯಂ ಎಸ್‌ಪಿಡಿ ಶಿಲ್ಪಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ನಾವು ಶುಕ್ರವಾರದಂದು ತಡವಾಗಿ ವಿವರವಾದ ತೀರ್ಪನ್ನು ಪಡೆದುಕೊಂಡಿದ್ದೇವೆ. ಮೇಲ್ಮನವಿ ಸಲ್ಲಿಸಲು ನಾವು ಕಾನೂನು ಅಭಿಪ್ರಾಯವನ್ನು ಕೇಳಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಈ ಮಧ್ಯೆ, ಬಿಷಪ್ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಮಾಜಿ ಶಾಸಕ ಪಿ ಸಿ ಜಾರ್ಜ್ ಅವರನ್ನು ಭೇಟಿಯಾಗಿದ್ದಾರೆ. ಆರೋಪದಿಂದ ಖುಲಾಸೆಗೊಂಡ ನಂತರ ಪಿಸಿ ಜಾರ್ಜ್ ಅವರು ಪ್ರಾಂಕೋ ಅವರನ್ನು ಬೆಂಬಲಿಸಿದ್ದಾರೆ.

ಬಿಷಪ್‌ ಪ್ರಾಂಕೋ ಅವರು ಪಿಸಿ ಜಾರ್ಜ್ ಅವರೊಂದಿಗಿನ ಸಭೆ ನಡೆಸಿ, ಹತ್ತಿರದ ಚರ್ಚ್‌ಗಳಿಗೆ ಭೇಟಿ ಮಾಡಿದ್ದಾರೆ. ಆದರೆ ಈ ವೇಳೆ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಈ ಸಭೆಯ ನಂತರ ಮಾಧ್ಯಮದ ಜೊತಗೆ ಮಾತನಾಡಿದ ಅವರು, “ಈ ಪ್ರಕರಣವು ಚರ್ಚ್‌ ಮತ್ತು ಭಕ್ತರನ್ನು ಗುರಿಯಾಗಿಸುವ ಪಿತೂರಿಯ ಭಾಗವಾಗಿ ಮಾಡಿದ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ:ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿದೆ.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು. ಅಂತಿಮವಾಗಿ ಜನವರಿ 14 ರಂದು ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಇದನ್ನೂ ಓದಿ:ಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಮುಲಕ್ಕಲ್‌ನ ಅರ್ಜಿ ವಜಾ ಮಾಡಿದ ಸುಪ್ರೀಂ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...