Homeಮುಖಪುಟಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

- Advertisement -
- Advertisement -

ಕೇರಳದ ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಬಿಷಪ್‌ ಫ್ರಾಂಕೋ ಮುಲಕ್ಕಲ್‌ ಅವರನ್ನು ರಾಜ್ಯದ ಕಾನ್ವೆಂಟ್‌ನಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರದ ಆರೋಪದಿಂದ ಇತ್ತಿಚೆಗೆ ಖುಲಾಸೆಗೊಳಿಸಿತ್ತು. ಇದಾಗಿ ಒಂದು ದಿನದ ನಂತರ, ಕೇರಳ ಪೊಲೀಸರು ಶನಿವಾರ ಹೈಕೋರ್ಟ್‌ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ಸಲಹೆಯನ್ನು ಕೋರಿದ್ದಾರೆ.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಪೊಲೀಸರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ನಿಂದ ಕಾನೂನು ಅಭಿಪ್ರಾಯ ಕೇಳಿದ್ದಾರೆ ಎಂದು ಕೊಟ್ಟಾಯಂ ಎಸ್‌ಪಿಡಿ ಶಿಲ್ಪಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ನಾವು ಶುಕ್ರವಾರದಂದು ತಡವಾಗಿ ವಿವರವಾದ ತೀರ್ಪನ್ನು ಪಡೆದುಕೊಂಡಿದ್ದೇವೆ. ಮೇಲ್ಮನವಿ ಸಲ್ಲಿಸಲು ನಾವು ಕಾನೂನು ಅಭಿಪ್ರಾಯವನ್ನು ಕೇಳಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಈ ಮಧ್ಯೆ, ಬಿಷಪ್ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಮಾಜಿ ಶಾಸಕ ಪಿ ಸಿ ಜಾರ್ಜ್ ಅವರನ್ನು ಭೇಟಿಯಾಗಿದ್ದಾರೆ. ಆರೋಪದಿಂದ ಖುಲಾಸೆಗೊಂಡ ನಂತರ ಪಿಸಿ ಜಾರ್ಜ್ ಅವರು ಪ್ರಾಂಕೋ ಅವರನ್ನು ಬೆಂಬಲಿಸಿದ್ದಾರೆ.

ಬಿಷಪ್‌ ಪ್ರಾಂಕೋ ಅವರು ಪಿಸಿ ಜಾರ್ಜ್ ಅವರೊಂದಿಗಿನ ಸಭೆ ನಡೆಸಿ, ಹತ್ತಿರದ ಚರ್ಚ್‌ಗಳಿಗೆ ಭೇಟಿ ಮಾಡಿದ್ದಾರೆ. ಆದರೆ ಈ ವೇಳೆ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಈ ಸಭೆಯ ನಂತರ ಮಾಧ್ಯಮದ ಜೊತಗೆ ಮಾತನಾಡಿದ ಅವರು, “ಈ ಪ್ರಕರಣವು ಚರ್ಚ್‌ ಮತ್ತು ಭಕ್ತರನ್ನು ಗುರಿಯಾಗಿಸುವ ಪಿತೂರಿಯ ಭಾಗವಾಗಿ ಮಾಡಿದ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ:ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿದೆ.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು. ಅಂತಿಮವಾಗಿ ಜನವರಿ 14 ರಂದು ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಇದನ್ನೂ ಓದಿ:ಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಮುಲಕ್ಕಲ್‌ನ ಅರ್ಜಿ ವಜಾ ಮಾಡಿದ ಸುಪ್ರೀಂ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...