Homeಕರ್ನಾಟಕಬಾಲಕಿಯರ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಪೊಲೀಸ್‌ ವಶಕ್ಕೆ

ಬಾಲಕಿಯರ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಪೊಲೀಸ್‌ ವಶಕ್ಕೆ

- Advertisement -
- Advertisement -

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆದೊಯ್ಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ. ಆರೋಪಿ ಕಾರಿನಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮುರುಘಾ ಶರಣರ ವಿರುದ್ಧ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಮತ್ತುಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಭಾವಿ ಮಠಾಧೀಶರಾದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಯಾದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ತಪ್ಪು ಮಾಡಿರುವ ಸಾಧ್ಯತೆ ಇರುವುದರಿಂದಲೇ ಮಹಾರಾಷ್ಟ್ರ ರಾಜ್ಯ ಕ್ಕೆ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಸಿಕ್ಕಿಬಿದ್ದಿರುವುದು, ಇಂತಹವರು ತೋರಿಕೆಗಾಗಿ ಬಸವ ಪ್ರಶಸ್ತಿ ಯನ್ನು ನೀಡುತ್ತಿದ್ದರೆಂದು ತೋರುತ್ತದೆ,‌ .
    ಇವರನ್ನು ಗೋಮುಖ ವ್ಯಾಘ್ರ ‌‌‌ಗಳೆಂದು ಕರೆಯಬಹುದು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...