Homeಕರ್ನಾಟಕಬಾಲಕಿಯರ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಪೊಲೀಸ್‌ ವಶಕ್ಕೆ

ಬಾಲಕಿಯರ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಪೊಲೀಸ್‌ ವಶಕ್ಕೆ

- Advertisement -
- Advertisement -

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆದೊಯ್ಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ. ಆರೋಪಿ ಕಾರಿನಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮುರುಘಾ ಶರಣರ ವಿರುದ್ಧ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಮತ್ತುಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಭಾವಿ ಮಠಾಧೀಶರಾದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಯಾದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ತಪ್ಪು ಮಾಡಿರುವ ಸಾಧ್ಯತೆ ಇರುವುದರಿಂದಲೇ ಮಹಾರಾಷ್ಟ್ರ ರಾಜ್ಯ ಕ್ಕೆ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಸಿಕ್ಕಿಬಿದ್ದಿರುವುದು, ಇಂತಹವರು ತೋರಿಕೆಗಾಗಿ ಬಸವ ಪ್ರಶಸ್ತಿ ಯನ್ನು ನೀಡುತ್ತಿದ್ದರೆಂದು ತೋರುತ್ತದೆ,‌ .
    ಇವರನ್ನು ಗೋಮುಖ ವ್ಯಾಘ್ರ ‌‌‌ಗಳೆಂದು ಕರೆಯಬಹುದು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...