Homeಮುಖಪುಟಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ...

ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ, ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಆತನಿಗೆ ಈ ವರ್ಷ ಚುನಾವಣೆಗಳು ಹತ್ತಿರವಿದ್ದಾಗ ಮೂರು ಬಾರಿ ಪೆರೋಲ್ ನೀಡಲಾಗಿದೆ!

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಅಪರಾಧಿ, ಡೇರಾ ಸಚ್ಚಾ ಸೌಧದ ವಿವಾದಾತ್ಮಕ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ನಲ್ಲಿರುವಾಗ ಆನ್‌ಲೈನ್ ಸತ್ಸಂಗ (ಪ್ರವಚನ) ನಡೆಸಲು ಪ್ರಾರಂಭಿಸಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಮತ್ತು ಕರ್ನಾಲ್‌ನ ಮಾಜಿ ಮೇಯರ್ ರೇಣು ಬಾಲ ಗುಪ್ತಾ ಕೂಡ ಅವರ ಆರ್ಶಿವಾದ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬರ್ಸಾದಿಂದ ನಡೆಸಿದ ಸುಮಾರು ಎರಡು ಗಂಟೆಗಳ ಸತ್ಸಂಗದಲ್ಲಿ ಹಲವಾರು ಇತರ ಸ್ಥಳೀಯ ರಾಜಕಾರಣಿಗಳು ಸಹ ಭಾಗವಹಿಸಿದ್ದರು. ಅಲ್ಲಿ ಗುಪ್ತಾ ಡೇರಾ ಮುಖ್ಯಸ್ಥರನ್ನು “ಪಿತಾಜಿ” ಎಂದು ಸಂಬೋಧಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹರಿಯಾಣದಲ್ಲಿ ಪಂಚಾಯತ್ ಚುನಾವಣೆಗಳು ಮತ್ತು ಆದಂಪುರ ಉಪಚುನಾವಣೆ ಕೆಲವೆ ದಿನಗಳಲ್ಲಿ ನಡೆಯುವ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಿಗೆ ಪೆರೋಲ್ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ  ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕಾರಾಗೃಹಗ ಸಚಿವ ರಂಜಿತ್ ಸಿಂಗ್ ಪೆರೋಲ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದೊಂದು “ವಾಡಿಕೆಯ ಕಾರ್ಯವಿಧಾನ” ಮತ್ತು “ಅಪರಾಧಿಯ ಕಾನೂನುಬದ್ಧ ಹಕ್ಕು” ಎಂದು ಬಣ್ಣಿಸಿದ್ದಾರೆ.

ರೇಪ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪೆರೋಲ್ ಮೇಲೆ ಹೊರಬಂದು ಸತ್ಸಂಗ ನಡೆಸುತ್ತಾರೆ. ಸ್ಥಳೀಯ ಚುನಾವಣೆಗಳು ಹತ್ತಿರವಿರುವುದರಿಂದ ಕರ್ನಾಲ್ ಮಾಜಿ ಮೇಯರ್ ಮತ್ತು ಹಿಸ್ಸಾ ಮೇಯರ್ ಅಪರಾಧಿಯ ಆರ್ಶಿವಾದ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದ್ರುವ್ ರಾಠೀ ಟ್ವೀಟ್ ಮಾಡಿದ್ದಾರೆ.

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪಂಚಕುಲ ವಿಶೇ‍ಷ ಸಿಬಿಐ ನ್ಯಾಯಾಲಯವು 2017ರಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಿ 20 ವರ್ಷಗಳ ಶಿಕ್ಷೆ ವಿಧಿಸಿದೆ. ಅಲ್ಲದೆ ಪತ್ರಕರ್ತನ ಹತ್ಯೆ ಮತ್ತು ಮಾಜಿ ಮ್ಯಾನೇಜರ್‌ನ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಗುರ್ಮೀತ್ ರಾಮ್ ರಹೀಮ್‌ನನ್ನು ಅಪರಾಧಿ ಎಂದು ಘೋಷಿಸಲಾಗಿದೆ. ಆದರೆ ಈ ಒಂದು ವರ್ಷದಲ್ಲಿ ಚುನಾವಣೆಗಳು ಹತ್ತಿರವಿದ್ದಾಗ ಆತನಿಗೆ ಮೂರು ಬಾರಿ ಪೆರೋಲ್ ನೀಡಲಾಗಿದೆ! ಫೆಬ್ರವರಿಯಲ್ಲಿ ಪಂಜಾಬ್ ಚುನಾವಣೆಗಿದ್ದಾಗ, ಜೂನ್‌ನಲ್ಲಿ ಮತ್ತು ಅಕ್ಟೋಬರ್ 14 ರಂದು ಆತನಿಗೆ ಪೆರೋಲ್ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನು ಆಶ್ರಮವನ್ನು ತಲುಪಿದ್ದೇನೆ. ದೇವರು ಎಲ್ಲರಿಗೂ ಸಂತೋಷ ನೀಡಲಿ. ಮೊದಲೇ ಹೇಳಿದಂತೆ ನಂಬಿಕೆ ಇರಲಿ. ನನ್ನ ಮಕ್ಕಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಪರಮ ತಂದೆ, ಪರಮಾತ್ಮ, ನಿಮಗೆ ಬಹಳಷ್ಟು ಸಂತೋಷವನ್ನು ನೀಡಲಿ. ಸ್ವಲ್ಪ ಸಮಯದ ಹಿಂದೆ ಇಲ್ಲಿ ಬಂದರು. ನೀವು ಆ ಸಮುದ್ರಗಳನ್ನು ನೆನಪಿಸಿಕೊಳ್ಳುತ್ತೀರಿ. ಸಮುದ್ರಗಳು ಹೆಚ್ಚು ಏರಿವೆ. ನೀವೆಲ್ಲರೂ ಅದನ್ನು ನೋಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುತ್ತಲೇ ಇರುತ್ತೇನೆ. ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಆಶೀರ್ವಾದ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಭಾರತದ ಸ್ವಧರ್ಮದ ಮೇಲೆ ಅತ್ಯಂತ ಘೋರ ದಾಳಿಯಾಗುತ್ತಿದೆಯೇ? – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...