Homeಮುಖಪುಟಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ...

ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ, ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಆತನಿಗೆ ಈ ವರ್ಷ ಚುನಾವಣೆಗಳು ಹತ್ತಿರವಿದ್ದಾಗ ಮೂರು ಬಾರಿ ಪೆರೋಲ್ ನೀಡಲಾಗಿದೆ!

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಅಪರಾಧಿ, ಡೇರಾ ಸಚ್ಚಾ ಸೌಧದ ವಿವಾದಾತ್ಮಕ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ನಲ್ಲಿರುವಾಗ ಆನ್‌ಲೈನ್ ಸತ್ಸಂಗ (ಪ್ರವಚನ) ನಡೆಸಲು ಪ್ರಾರಂಭಿಸಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಮತ್ತು ಕರ್ನಾಲ್‌ನ ಮಾಜಿ ಮೇಯರ್ ರೇಣು ಬಾಲ ಗುಪ್ತಾ ಕೂಡ ಅವರ ಆರ್ಶಿವಾದ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬರ್ಸಾದಿಂದ ನಡೆಸಿದ ಸುಮಾರು ಎರಡು ಗಂಟೆಗಳ ಸತ್ಸಂಗದಲ್ಲಿ ಹಲವಾರು ಇತರ ಸ್ಥಳೀಯ ರಾಜಕಾರಣಿಗಳು ಸಹ ಭಾಗವಹಿಸಿದ್ದರು. ಅಲ್ಲಿ ಗುಪ್ತಾ ಡೇರಾ ಮುಖ್ಯಸ್ಥರನ್ನು “ಪಿತಾಜಿ” ಎಂದು ಸಂಬೋಧಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹರಿಯಾಣದಲ್ಲಿ ಪಂಚಾಯತ್ ಚುನಾವಣೆಗಳು ಮತ್ತು ಆದಂಪುರ ಉಪಚುನಾವಣೆ ಕೆಲವೆ ದಿನಗಳಲ್ಲಿ ನಡೆಯುವ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಿಗೆ ಪೆರೋಲ್ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ  ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕಾರಾಗೃಹಗ ಸಚಿವ ರಂಜಿತ್ ಸಿಂಗ್ ಪೆರೋಲ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದೊಂದು “ವಾಡಿಕೆಯ ಕಾರ್ಯವಿಧಾನ” ಮತ್ತು “ಅಪರಾಧಿಯ ಕಾನೂನುಬದ್ಧ ಹಕ್ಕು” ಎಂದು ಬಣ್ಣಿಸಿದ್ದಾರೆ.

ರೇಪ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪೆರೋಲ್ ಮೇಲೆ ಹೊರಬಂದು ಸತ್ಸಂಗ ನಡೆಸುತ್ತಾರೆ. ಸ್ಥಳೀಯ ಚುನಾವಣೆಗಳು ಹತ್ತಿರವಿರುವುದರಿಂದ ಕರ್ನಾಲ್ ಮಾಜಿ ಮೇಯರ್ ಮತ್ತು ಹಿಸ್ಸಾ ಮೇಯರ್ ಅಪರಾಧಿಯ ಆರ್ಶಿವಾದ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದ್ರುವ್ ರಾಠೀ ಟ್ವೀಟ್ ಮಾಡಿದ್ದಾರೆ.

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪಂಚಕುಲ ವಿಶೇ‍ಷ ಸಿಬಿಐ ನ್ಯಾಯಾಲಯವು 2017ರಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಿ 20 ವರ್ಷಗಳ ಶಿಕ್ಷೆ ವಿಧಿಸಿದೆ. ಅಲ್ಲದೆ ಪತ್ರಕರ್ತನ ಹತ್ಯೆ ಮತ್ತು ಮಾಜಿ ಮ್ಯಾನೇಜರ್‌ನ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಗುರ್ಮೀತ್ ರಾಮ್ ರಹೀಮ್‌ನನ್ನು ಅಪರಾಧಿ ಎಂದು ಘೋಷಿಸಲಾಗಿದೆ. ಆದರೆ ಈ ಒಂದು ವರ್ಷದಲ್ಲಿ ಚುನಾವಣೆಗಳು ಹತ್ತಿರವಿದ್ದಾಗ ಆತನಿಗೆ ಮೂರು ಬಾರಿ ಪೆರೋಲ್ ನೀಡಲಾಗಿದೆ! ಫೆಬ್ರವರಿಯಲ್ಲಿ ಪಂಜಾಬ್ ಚುನಾವಣೆಗಿದ್ದಾಗ, ಜೂನ್‌ನಲ್ಲಿ ಮತ್ತು ಅಕ್ಟೋಬರ್ 14 ರಂದು ಆತನಿಗೆ ಪೆರೋಲ್ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನು ಆಶ್ರಮವನ್ನು ತಲುಪಿದ್ದೇನೆ. ದೇವರು ಎಲ್ಲರಿಗೂ ಸಂತೋಷ ನೀಡಲಿ. ಮೊದಲೇ ಹೇಳಿದಂತೆ ನಂಬಿಕೆ ಇರಲಿ. ನನ್ನ ಮಕ್ಕಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಪರಮ ತಂದೆ, ಪರಮಾತ್ಮ, ನಿಮಗೆ ಬಹಳಷ್ಟು ಸಂತೋಷವನ್ನು ನೀಡಲಿ. ಸ್ವಲ್ಪ ಸಮಯದ ಹಿಂದೆ ಇಲ್ಲಿ ಬಂದರು. ನೀವು ಆ ಸಮುದ್ರಗಳನ್ನು ನೆನಪಿಸಿಕೊಳ್ಳುತ್ತೀರಿ. ಸಮುದ್ರಗಳು ಹೆಚ್ಚು ಏರಿವೆ. ನೀವೆಲ್ಲರೂ ಅದನ್ನು ನೋಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುತ್ತಲೇ ಇರುತ್ತೇನೆ. ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಆಶೀರ್ವಾದ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಭಾರತದ ಸ್ವಧರ್ಮದ ಮೇಲೆ ಅತ್ಯಂತ ಘೋರ ದಾಳಿಯಾಗುತ್ತಿದೆಯೇ? – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....