Homeಮುಖಪುಟಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

- Advertisement -
- Advertisement -

ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹರ್ಯಾಣದ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ ಮತ್ತೆ ಪೆರೋಲ್‌ ಮಂಜೂರಾಗಿದೆ.

ಈ ಬಾರಿ ಗುರ್ಮೀತ್ ಸಿಂಗ್‌ಗೆ 50 ದಿನಗಳ ಪೆರೋಲ್ ನೀಡಲಾಗಿದೆ. ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಈತ, ಕಳೆದ 24 ತಿಂಗಳಲ್ಲಿ ಏಳನೇ ಬಾರಿ ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ಒಂಬತ್ತನೇ ಬಾರಿ ಪೆರೋಲ್ ಪಡೆದಿದ್ದಾನೆ.

ಹರ್ಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರುವ ಗುರ್ಮೀತ್ ಸಿಂಗ್‌ಗೆ ಕಳೆದ ವರ್ಷ ನವೆಂಬರ್‌ನಲ್ಲಿ 21 ದಿನ, ಜುಲೈನಲ್ಲಿ 30 ದಿನ ಮತ್ತು ಜನವರಿಯಲ್ಲಿ ಡೇರಾ ಸಚ್ಚಾ ಸೌಧದ ಮಾಜಿ ಮುಖ್ಯಸ್ಥ ಶಾ ಸತ್ನಾಮ್ ಅವರ ಜನ್ಮ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು 40 ದಿನ ಸೇರಿ, ಒಟ್ಟು 91 ದಿನಗಳ ಪೆರೋಲ್ ನೀಡಲಾಗಿತ್ತು.

ಕಳೆದ ವರ್ಷ ಪೆರೋಲ್‌ ಮೇಲೆ ಜೈಲಿನಿಂದ ಹೊರಗಿದ್ದಾಗಲೇ ಗುರ್ಮೀತ್ ಸಿಂಗ್ ತಲವಾರಿನಿಂದ ತನ್ನ ಹುಟ್ಟು ಹಬ್ಬದ ಕೇಕ್ ಕತ್ತರಿಸಿದ್ದ. ಈ ಕುರಿತ ಫೋಟೋ, ವಿಡಿಯೋ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಆ ವೇಳೆ ” ನಾನು ಐದು ವರ್ಷಗಳ ಬಳಿಕ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸುತ್ತಿದ್ದೇನೆ. ಒಟ್ಟು ಐದು ಕೇಕ್ ಕತ್ತರಿಸಬೇಕಿದೆ. ಇದು ಮೊದಲನೆಯದ್ದು” ಎಂದು ಗುರ್ಮೀತ್ ಸಿಂಗ್ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಆಯುಧಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು ಆ ವರ್ಗಕ್ಕೆ ಸೇರುತ್ತದೆ) ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ನಿಷೇಧಿಸಲಾಗಿದೆ. ಆದರೆ, ಗುರ್ಮೀತ್ ಮೇಲೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಗುರ್ಮೀತ್ ಸಿಂಗ್‌ಗೆ ಜನವರಿ 2023ರಲ್ಲಿ ಲಭಿಸಿದ್ದ ಪೆರೋಲ್, ವಿಶೇಷವಾಗಿ ಹರ್ಯಾಣದ ಮುಖ್ಯಮಂತ್ರಿ ಮನೋಹರಲಾಲ್‌ ಖಟ್ಟರ್ ಅದನ್ನು ಸಮರ್ಥಿಸಿಕೊಂಡ ಬಳಿಕ ವಿವಾದವನ್ನು ಸೃಷ್ಟಿಸಿತ್ತು.

“ರಾಮ್‌ ರಹೀಮ್ ಗೆ ಪೆರೋಲ್ ಸಿಕ್ಕಿರುವುದು ನನಗೆ ಗೊತ್ತಿಲ್ಲ. ಆದರೆ, ಪೆರೋಲ್ ಸಿಕ್ಕಿದ್ದು ಹೌದಾದರೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ ಬಳಿಕವೇ ಅದು ಮಂಜೂರಾಗಿರಬೇಕು ಮತ್ತು ಅದು ಆತನ ಹಕ್ಕು ಆಗಿದೆ. ಅದರಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ಖಟ್ಟರ್ ಹೇಳಿದ್ದರು.

2022ರಲ್ಲಿಯೂ ಹರಿಯಾಣದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಗುರ್ಮೀತ್‌ಗೆ ಮೂರು ಸಲ ಪೆರೋಲ್ ನೀಡಿತ್ತು. ತನ್ನ ತಾಯಿಯನ್ನು ಭೇಟಿಯಾಗಲು 2021 ಮತ್ತು 2020ರಲ್ಲೂ ಆತನಿಗೆ ತಲಾ ಒಂದು ಬಾರಿ ಪೆರೋಲ್ ಲಭಿಸಿತ್ತು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹರ್ಯಾಣದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಸಿಂಗ್‌ಗೆ ಪೆರೋಲ್ ಲಭಿಸಿದ್ದಾಗ ಆತ ನಡೆಸಿದ್ದ ‘ವರ್ಚುವಲ್ ಸತ್ಸಂಗ’ ದಲ್ಲಿ ಹಲವಾರು ಬಿಜೆಪಿ ನಾಯಕರು ಭಾಗವಹಿಸಿದ್ದರು. ಇದರ ವಿರುದ್ದ ಪ್ರತಿಪಕ್ಷಗಳು ಕಿಡಿಕಾರಿತ್ತು.

ಹರ್ಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆಗಸ್ಟ್ 2017ರಲ್ಲಿ ಗುರ್ಮೀತ್‌ನನ್ನು ಅಪರಾಧಿ ಎಂದು ಘೋಷಿಸಿತ್ತು.

ಇದನ್ನೂ ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...