Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...