Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...