Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...