Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....