Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...