Homeನ್ಯಾಯ ಪಥಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ...

ಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ…

- Advertisement -
- Advertisement -

ಹೈದರಾಬಾದ್ ಅತ್ಯಾಚಾರ ಪ್ರಕರಣ ಕಂಡು ಇಡೀ ದೇಶವೇ ಮರುಕಪಟ್ಟಿತು. ಫಿಲ್ಮ್ ಇಂಡಸ್ಟ್ರಿಯೂ ಕಂಬನಿ ಮಿಡಿದು, ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿತು. ಇದೇ ಮೊದಲಲ್ಲ 2012ರ ನಿರ್ಭಯಾ ಪ್ರಕರಣದಲ್ಲಿರಲಿ, ಅಥವಾ ಇಂತಹುದೇ ಮಹಿಳಾ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬಂದಾಗ ಸಿನಿಮಂದಿ ಆಕ್ರೋಶದಿಂದ ಮಾತನಾಡೋದು ಸಿನಿಮಾ ಡೈಲಾಗ್‍ಗಳಷ್ಟೇ ಸಹಜವಾಗಿದೆ. ಆದರೆ, ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ಲಾಭದ ಬೆನ್ನು ಹತ್ತಿರುವ ಸಿನಿಮೋದ್ಯಮಕ್ಕೆ, ಅದರ ಪಾಲುದಾರರಿಗೆ ನಿಜಕ್ಕೂ ಹೀಗೆಲ್ಲ ಆಕ್ರೋಶ ಹೊರಹಾಕುವ ನೈತಿಕತೆ ಉಳಿದಿದೆಯಾ ಅನ್ನೋದು ಚರ್ಚೆಯಾಗಬೇಕಿರುವ ಸಂಗತಿ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಿಯೊಬ್ಬ ತಾನು ಅತ್ಯಾಚಾರವೆಸಗಲು `ದಂಡುಪಾಳ್ಯ’ ಸಿನಿಮಾದ ವಿಕೃತ ಪ್ರಚೋದನೆಯೇ ಕಾರಣ ಅನ್ನೋದನ್ನು ವಿಚಾರಣೆ ಸಂದರ್ಭದಲ್ಲಿ ಹೇಳಿಕೊಂಡಿದ್ದ. ಇದು ಒಂದು ಸಿನಿಮಾಗೆ ಸೀಮಿತವಾದುದಲ್ಲ ಅಥವಾ ಒಬ್ಬ ಕಾಮಾಂಧನ ಪ್ರೇರಣೆಗೂ ಸೀಮಿತವಾದುದಲ್ಲ. ಕಮರ್ಷಿಯಲ್ ಸಕ್ಸಸ್‍ನ ಜಾಡುಹಿಡಿದು ಹೊರಟಿರುವ ಬಹುತೇಕ ಸಿನಿಮಾಗಳ ನಿರ್ಮಾತೃಗಳು ಗೊತ್ತಿದ್ದೊ, ಗೊತ್ತಿಲ್ಲದೆಯೋ ಇಂಥಾ ಶೋಷಣೆಗಳನ್ನು ವಿಜೃಂಭಿಸುತ್ತಾ ಬಂದಿರೋದು ಇವತ್ತಿನ ವಾಸ್ತವ.

ಸಿನಿಮಾರಂಗ ಬೆಳೆದಂತೆ, 21ನೇ ಶತಮಾನದ ಮೊದಲ ದಶಕದ ಕೊನೆಯ ವರ್ಷದವರೆಗಿನ ಬಹುತೇಕ ಸಿನಿಮಾಗಳ ಕತೆಗಳಲ್ಲಿ ಅತ್ಯಾಚಾರವೆಂಬುದು ಸಾಮಾನ್ಯ ವಸ್ತುವಾಗಿ ಕಾಣಿಸಿಕೊಳ್ಳುತ್ತವೆ. ಪ್ರೀತಿ-ಪ್ರೇಮ-ಕಾಮ, ಆಸೆ, ಆಕರ್ಷಣೆ, ಸೇಡು, ದ್ವೇಷ ಇದೆಲ್ಲದಕ್ಕೂ ಕೇಂದ್ರವಾಗಿ ಅತ್ಯಾಚಾರದ ದೃಶ್ಯಗಳು ರಾರಾಜಿಸುತ್ತಿವೆ. ಅದಲ್ಲದೆ ಅನೈತಿಕ ಸಂಬಂಧದ ಕತೆ-ದೃಶ್ಯಗಳು ನೋಡುಗರಿಗೆ ಪ್ರಚೋದನೆಯ ಹೊಸ ಹುಮ್ಮಸ್ಸನ್ನು ತಂದೊಡ್ಡುವುದರ ಜೊತೆಗೆ ಸಿನಿಮಾದಲ್ಲಿ ನಟನೊಬ್ಬ ಎಸಗುವ ಅತ್ಯಾಚಾರ ಕೃತ್ಯವು ಆ ಪಾತ್ರದ ಗಂಡಸ್ತನದ ಅಹಮ್ಮಿಕೆಯನ್ನಾಗಿಯೋ, ಸ್ತ್ರೀ ಪಾತ್ರವನ್ನು ಅವಮಾನಿಸುವ ಸಾಧನವಾಗಿಯೋ ಬಳಕೆಯಾಗುತ್ತಲೇ ಇದೆ.

ಸಿನಿಮಾ ಎಂಬುದು ಸಮಾಜದ ಕನ್ನಡಿಯಿದ್ದಂತೆ, ಸಮಾಜದಲ್ಲಿ ನಡೆಯೋದನ್ನೇ ಸಿನಿಮಾದಲ್ಲಿ ತೋರಿಸಬೇಕಾಗುತ್ತೆ ಎಂಬ ವಾದವನ್ನು ಕೆಲವರು ಮುಂದಿಡಬಹುದು. ಆದರೆ ಅಂತವರು, ನೈಜತೆಯ ನೆಪದಲ್ಲಿ ಇಂತಹ ವಿಕೃತಿಗಳನ್ನು ಹಸಿಹಸಿಯಾಗಿ ಬಿತ್ತರಿಸುವ ಅದೇ ಸಿನಿಮಾ ಸಮಾಜವನ್ನು ತಿದ್ದಿ ತೀಡುವ ಇನ್ನುಳಿದ ಹೊಣೆಗಾರಿಕೆಯನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತಿದೆ ಎಂಬ ಪ್ರಶ್ನೆಯನ್ನೂ ಕೇಳಿಕೊಳ್ಳಬೇಕಾಗುತ್ತದೆ.
ತಾನು ಪ್ರೀತಿಸಿದವಳು ತನಗೆ ಸಿಗಲಿಲ್ಲವೆಂದರೆ, ಆಕೆ ಬೇರಾರಿಗೂ ಸಿಗಬಾರದೆಂದು ಆಕೆಯನ್ನು ಅತ್ಯಾಚಾರಗೈಯುವ ಅಥವಾ ಕುಡಿದ ಮತ್ತಿನಲ್ಲಿ ಹೀರೋ ಎಸಗುವ ಅತ್ಯಾಚಾರವು ಆಕೆಯನ್ನು ಮದುವೆ ಆಗಿಬಿಟ್ಟರೆ ಎಲ್ಲವೂ ಸರಿಹೋಗಿಬಿಡುತ್ತದೆಂಬ ದೃಶ್ಯದೊಂದಿಗೆ ಕೊನೆಗಾಣುತ್ತದೆ. ಇವೆಲ್ಲವೂ ಅತ್ಯಾಚಾರಿಗಳಿಗೆ ಎಷ್ಟೊಂದು ಸುಲಭವೆಂಬಂತೆ ಪ್ರಭಾವಿಸುತ್ತವೆ.

ಸಿನಿಮಾದಲ್ಲಿ ಅತ್ಯಾಚಾರಗೈದವನು ಇವತ್ತು ಅವಳ ಸೊಕ್ಕು ಇಳಿಸಿದ್ದೇನೆಂದು ಗರ್ವದಿಂದ ಹೇಳಿಕೊಳ್ಳುವಂತಹ ಹಾಗೂ ನಿಷ್ಕರ್ಷ ಸಿನಿಮಾದಲ್ಲಿ ಖಳನಟನೊಬ್ಬ `ಇವಳಿಗೆ ಯೌವನ ತುಂಬಿ ತುಳುಕ್ತಾಯಿದೆ ಸ್ವಲ್ಪ ಖಾಲಿ ಮಾಡು’ ಎನ್ನುವ ಮತ್ತು ಆತ ಅತ್ಯಾಚಾರಗೈಯುವ ದೃಶ್ಯಗಳು ಹೆಣ್ಣಿನ ಬಾಯಿ ಮುಚ್ಚಿಸಲು ಅಥವಾ ಆಕೆಯನ್ನು ತನ್ನ ಅಡಿಯಾಳಾಗಿಸಿಕೊಳ್ಳಲು ಅತ್ಯಾಚಾರವೊಂದು ಸಾಧನ ಎಂಬುದನ್ನು ಸುಪ್ತವಾಗಿ ಸಮಾಜಕ್ಕೆ ದಾಟಿಸಿಬಿಡುತ್ತವೆ. ಜಾತಿ, ವರ್ಗ ಮತ್ತು ಕಾಮದ ಅಮಲನ್ನು ನೆತ್ತಿಗೇರಿಸಿಕೊಂಡವನಿಗೆ ಮತ್ತಷ್ಟು ಪ್ರಚೋದನೆಯನ್ನು ನೀಡುತ್ತವೆ. ಇಂತಹ ಸಿನಿಮಾಗಳು ಅತ್ಯಾಚಾರವಷ್ಟೇ ಅಲ್ಲದೆ ಆಸಿಡ್ ದಾಳಿ, ಹಿಂಸೆ, ಕಿರುಕುಳಗಳೂ ಮಹಿಳಾ ದೌರ್ಜನ್ಯದ ಪ್ರವೃತ್ತಿಯನ್ನು ಹೆಚ್ಚಿಸುತ್ತವೆ ಮತ್ತು ಪ್ರಚೋದಿಸುತ್ತವೆ.

ಅಲ್ಲದೆ, ಸಿನಿಮಾಗಳಲ್ಲಿ ಅವಕಾಶಬೇಕೆಂದರೆ ಸ್ವಲ್ಪ ಅಡ್ಜಸ್ಟ್ ಮಾಡ್ಕೋಬೇಕು ಎಂದು ಹೇಳುವ ನಿರ್ದೇಶಕರೂ, ನಿರ್ಮಾಪಕರೂ ಸಿನಿಮಾ ಇಂಡಸ್ಟ್ರಿಯಲ್ಲಿರುವುದು ಮತ್ತೊಂದು ದುರಂತ. ಇತ್ತೀಚೆಗೆ ಸದ್ದು ಮಾಡಿದ ಮೀಟೂ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹೀರೋ, ನಿರ್ದೇಶಕ, ನಿರ್ಮಾಪಕರ ಪರವಾಗಿ ನಿಲ್ಲುವ `ಫೇವರಿಸಂ’ ಮನಸ್ಥಿತಿ ಸಿನಿಮಾ ರಂಗದ ಯಾವ ನೈತಿಕತೆಯನ್ನು ಪ್ರತಿನಿಧಿಸುತ್ತದೆ. ತಮ್ಮ ಮೇಲಾದ ಲೈಂಗಿಕ ಶೋಷಣೆಯನ್ನು ಹೇಳಿಕೊಂಡ ನಟಿಯರ ಸಿನಿ ಭವಿಷ್ಯಕ್ಕೆ ತಣ್ಣೀರೆರಚುವ ಇಂಡಸ್ರ್ಟಿಯು ಅತ್ಯಾಚಾರದ ವಿರುದ್ಧ ಮಾತನಾಡುತ್ತಿರುವುದು ನೈತಿಕತೆಯ ಪ್ರಶ್ನೆಯನ್ನು ಮತ್ತೆಮತ್ತೆ ಮುನ್ನೆಲೆಗೆ ತರುತ್ತಿದೆ.

ಇಂದು ಸಿನಿಮಾಗಳಿಂದ ಪ್ರೇರೇಪಿಸಲ್ಪಡುವ ಯುವಸಮುದಾಯ ಬೆಳೆಯುತ್ತಿದೆ. ಇಂತಹ ಯುವಜನಾಂಗಕ್ಕೆ ಆದರ್ಶವಾಗಬೇಕಿರುವ ಸಿನಿಮಾಗಳು ಮಹಿಳೆಯರನ್ನು ಗೌರವಿಸುವ, ಮಾನವ ಪ್ರೀತಿಯನ್ನು ಹಂಚುವ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿರಿಸುವಂತಹ ಹಾಗೂ ಆರೋಗ್ಯಕರ ಮನರಂಜನೆಯ ವಾಹಿನಿಯಾಗಿರಬೇಕೇ ಹೊರತು ಹಾದಿ ತಪ್ಪಿಸಿ, ಸಮಾಜದಲ್ಲಿ ಕೊಳಕನ್ನು ಬಿತ್ತುವ ಮಾಧ್ಯಮವಾಗಬಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....