Homeನ್ಯಾಯ ಪಥಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ...

ಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ…

- Advertisement -
- Advertisement -

ಹೈದರಾಬಾದ್ ಅತ್ಯಾಚಾರ ಪ್ರಕರಣ ಕಂಡು ಇಡೀ ದೇಶವೇ ಮರುಕಪಟ್ಟಿತು. ಫಿಲ್ಮ್ ಇಂಡಸ್ಟ್ರಿಯೂ ಕಂಬನಿ ಮಿಡಿದು, ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿತು. ಇದೇ ಮೊದಲಲ್ಲ 2012ರ ನಿರ್ಭಯಾ ಪ್ರಕರಣದಲ್ಲಿರಲಿ, ಅಥವಾ ಇಂತಹುದೇ ಮಹಿಳಾ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬಂದಾಗ ಸಿನಿಮಂದಿ ಆಕ್ರೋಶದಿಂದ ಮಾತನಾಡೋದು ಸಿನಿಮಾ ಡೈಲಾಗ್‍ಗಳಷ್ಟೇ ಸಹಜವಾಗಿದೆ. ಆದರೆ, ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ಲಾಭದ ಬೆನ್ನು ಹತ್ತಿರುವ ಸಿನಿಮೋದ್ಯಮಕ್ಕೆ, ಅದರ ಪಾಲುದಾರರಿಗೆ ನಿಜಕ್ಕೂ ಹೀಗೆಲ್ಲ ಆಕ್ರೋಶ ಹೊರಹಾಕುವ ನೈತಿಕತೆ ಉಳಿದಿದೆಯಾ ಅನ್ನೋದು ಚರ್ಚೆಯಾಗಬೇಕಿರುವ ಸಂಗತಿ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಿಯೊಬ್ಬ ತಾನು ಅತ್ಯಾಚಾರವೆಸಗಲು `ದಂಡುಪಾಳ್ಯ’ ಸಿನಿಮಾದ ವಿಕೃತ ಪ್ರಚೋದನೆಯೇ ಕಾರಣ ಅನ್ನೋದನ್ನು ವಿಚಾರಣೆ ಸಂದರ್ಭದಲ್ಲಿ ಹೇಳಿಕೊಂಡಿದ್ದ. ಇದು ಒಂದು ಸಿನಿಮಾಗೆ ಸೀಮಿತವಾದುದಲ್ಲ ಅಥವಾ ಒಬ್ಬ ಕಾಮಾಂಧನ ಪ್ರೇರಣೆಗೂ ಸೀಮಿತವಾದುದಲ್ಲ. ಕಮರ್ಷಿಯಲ್ ಸಕ್ಸಸ್‍ನ ಜಾಡುಹಿಡಿದು ಹೊರಟಿರುವ ಬಹುತೇಕ ಸಿನಿಮಾಗಳ ನಿರ್ಮಾತೃಗಳು ಗೊತ್ತಿದ್ದೊ, ಗೊತ್ತಿಲ್ಲದೆಯೋ ಇಂಥಾ ಶೋಷಣೆಗಳನ್ನು ವಿಜೃಂಭಿಸುತ್ತಾ ಬಂದಿರೋದು ಇವತ್ತಿನ ವಾಸ್ತವ.

ಸಿನಿಮಾರಂಗ ಬೆಳೆದಂತೆ, 21ನೇ ಶತಮಾನದ ಮೊದಲ ದಶಕದ ಕೊನೆಯ ವರ್ಷದವರೆಗಿನ ಬಹುತೇಕ ಸಿನಿಮಾಗಳ ಕತೆಗಳಲ್ಲಿ ಅತ್ಯಾಚಾರವೆಂಬುದು ಸಾಮಾನ್ಯ ವಸ್ತುವಾಗಿ ಕಾಣಿಸಿಕೊಳ್ಳುತ್ತವೆ. ಪ್ರೀತಿ-ಪ್ರೇಮ-ಕಾಮ, ಆಸೆ, ಆಕರ್ಷಣೆ, ಸೇಡು, ದ್ವೇಷ ಇದೆಲ್ಲದಕ್ಕೂ ಕೇಂದ್ರವಾಗಿ ಅತ್ಯಾಚಾರದ ದೃಶ್ಯಗಳು ರಾರಾಜಿಸುತ್ತಿವೆ. ಅದಲ್ಲದೆ ಅನೈತಿಕ ಸಂಬಂಧದ ಕತೆ-ದೃಶ್ಯಗಳು ನೋಡುಗರಿಗೆ ಪ್ರಚೋದನೆಯ ಹೊಸ ಹುಮ್ಮಸ್ಸನ್ನು ತಂದೊಡ್ಡುವುದರ ಜೊತೆಗೆ ಸಿನಿಮಾದಲ್ಲಿ ನಟನೊಬ್ಬ ಎಸಗುವ ಅತ್ಯಾಚಾರ ಕೃತ್ಯವು ಆ ಪಾತ್ರದ ಗಂಡಸ್ತನದ ಅಹಮ್ಮಿಕೆಯನ್ನಾಗಿಯೋ, ಸ್ತ್ರೀ ಪಾತ್ರವನ್ನು ಅವಮಾನಿಸುವ ಸಾಧನವಾಗಿಯೋ ಬಳಕೆಯಾಗುತ್ತಲೇ ಇದೆ.

ಸಿನಿಮಾ ಎಂಬುದು ಸಮಾಜದ ಕನ್ನಡಿಯಿದ್ದಂತೆ, ಸಮಾಜದಲ್ಲಿ ನಡೆಯೋದನ್ನೇ ಸಿನಿಮಾದಲ್ಲಿ ತೋರಿಸಬೇಕಾಗುತ್ತೆ ಎಂಬ ವಾದವನ್ನು ಕೆಲವರು ಮುಂದಿಡಬಹುದು. ಆದರೆ ಅಂತವರು, ನೈಜತೆಯ ನೆಪದಲ್ಲಿ ಇಂತಹ ವಿಕೃತಿಗಳನ್ನು ಹಸಿಹಸಿಯಾಗಿ ಬಿತ್ತರಿಸುವ ಅದೇ ಸಿನಿಮಾ ಸಮಾಜವನ್ನು ತಿದ್ದಿ ತೀಡುವ ಇನ್ನುಳಿದ ಹೊಣೆಗಾರಿಕೆಯನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತಿದೆ ಎಂಬ ಪ್ರಶ್ನೆಯನ್ನೂ ಕೇಳಿಕೊಳ್ಳಬೇಕಾಗುತ್ತದೆ.
ತಾನು ಪ್ರೀತಿಸಿದವಳು ತನಗೆ ಸಿಗಲಿಲ್ಲವೆಂದರೆ, ಆಕೆ ಬೇರಾರಿಗೂ ಸಿಗಬಾರದೆಂದು ಆಕೆಯನ್ನು ಅತ್ಯಾಚಾರಗೈಯುವ ಅಥವಾ ಕುಡಿದ ಮತ್ತಿನಲ್ಲಿ ಹೀರೋ ಎಸಗುವ ಅತ್ಯಾಚಾರವು ಆಕೆಯನ್ನು ಮದುವೆ ಆಗಿಬಿಟ್ಟರೆ ಎಲ್ಲವೂ ಸರಿಹೋಗಿಬಿಡುತ್ತದೆಂಬ ದೃಶ್ಯದೊಂದಿಗೆ ಕೊನೆಗಾಣುತ್ತದೆ. ಇವೆಲ್ಲವೂ ಅತ್ಯಾಚಾರಿಗಳಿಗೆ ಎಷ್ಟೊಂದು ಸುಲಭವೆಂಬಂತೆ ಪ್ರಭಾವಿಸುತ್ತವೆ.

ಸಿನಿಮಾದಲ್ಲಿ ಅತ್ಯಾಚಾರಗೈದವನು ಇವತ್ತು ಅವಳ ಸೊಕ್ಕು ಇಳಿಸಿದ್ದೇನೆಂದು ಗರ್ವದಿಂದ ಹೇಳಿಕೊಳ್ಳುವಂತಹ ಹಾಗೂ ನಿಷ್ಕರ್ಷ ಸಿನಿಮಾದಲ್ಲಿ ಖಳನಟನೊಬ್ಬ `ಇವಳಿಗೆ ಯೌವನ ತುಂಬಿ ತುಳುಕ್ತಾಯಿದೆ ಸ್ವಲ್ಪ ಖಾಲಿ ಮಾಡು’ ಎನ್ನುವ ಮತ್ತು ಆತ ಅತ್ಯಾಚಾರಗೈಯುವ ದೃಶ್ಯಗಳು ಹೆಣ್ಣಿನ ಬಾಯಿ ಮುಚ್ಚಿಸಲು ಅಥವಾ ಆಕೆಯನ್ನು ತನ್ನ ಅಡಿಯಾಳಾಗಿಸಿಕೊಳ್ಳಲು ಅತ್ಯಾಚಾರವೊಂದು ಸಾಧನ ಎಂಬುದನ್ನು ಸುಪ್ತವಾಗಿ ಸಮಾಜಕ್ಕೆ ದಾಟಿಸಿಬಿಡುತ್ತವೆ. ಜಾತಿ, ವರ್ಗ ಮತ್ತು ಕಾಮದ ಅಮಲನ್ನು ನೆತ್ತಿಗೇರಿಸಿಕೊಂಡವನಿಗೆ ಮತ್ತಷ್ಟು ಪ್ರಚೋದನೆಯನ್ನು ನೀಡುತ್ತವೆ. ಇಂತಹ ಸಿನಿಮಾಗಳು ಅತ್ಯಾಚಾರವಷ್ಟೇ ಅಲ್ಲದೆ ಆಸಿಡ್ ದಾಳಿ, ಹಿಂಸೆ, ಕಿರುಕುಳಗಳೂ ಮಹಿಳಾ ದೌರ್ಜನ್ಯದ ಪ್ರವೃತ್ತಿಯನ್ನು ಹೆಚ್ಚಿಸುತ್ತವೆ ಮತ್ತು ಪ್ರಚೋದಿಸುತ್ತವೆ.

ಅಲ್ಲದೆ, ಸಿನಿಮಾಗಳಲ್ಲಿ ಅವಕಾಶಬೇಕೆಂದರೆ ಸ್ವಲ್ಪ ಅಡ್ಜಸ್ಟ್ ಮಾಡ್ಕೋಬೇಕು ಎಂದು ಹೇಳುವ ನಿರ್ದೇಶಕರೂ, ನಿರ್ಮಾಪಕರೂ ಸಿನಿಮಾ ಇಂಡಸ್ಟ್ರಿಯಲ್ಲಿರುವುದು ಮತ್ತೊಂದು ದುರಂತ. ಇತ್ತೀಚೆಗೆ ಸದ್ದು ಮಾಡಿದ ಮೀಟೂ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹೀರೋ, ನಿರ್ದೇಶಕ, ನಿರ್ಮಾಪಕರ ಪರವಾಗಿ ನಿಲ್ಲುವ `ಫೇವರಿಸಂ’ ಮನಸ್ಥಿತಿ ಸಿನಿಮಾ ರಂಗದ ಯಾವ ನೈತಿಕತೆಯನ್ನು ಪ್ರತಿನಿಧಿಸುತ್ತದೆ. ತಮ್ಮ ಮೇಲಾದ ಲೈಂಗಿಕ ಶೋಷಣೆಯನ್ನು ಹೇಳಿಕೊಂಡ ನಟಿಯರ ಸಿನಿ ಭವಿಷ್ಯಕ್ಕೆ ತಣ್ಣೀರೆರಚುವ ಇಂಡಸ್ರ್ಟಿಯು ಅತ್ಯಾಚಾರದ ವಿರುದ್ಧ ಮಾತನಾಡುತ್ತಿರುವುದು ನೈತಿಕತೆಯ ಪ್ರಶ್ನೆಯನ್ನು ಮತ್ತೆಮತ್ತೆ ಮುನ್ನೆಲೆಗೆ ತರುತ್ತಿದೆ.

ಇಂದು ಸಿನಿಮಾಗಳಿಂದ ಪ್ರೇರೇಪಿಸಲ್ಪಡುವ ಯುವಸಮುದಾಯ ಬೆಳೆಯುತ್ತಿದೆ. ಇಂತಹ ಯುವಜನಾಂಗಕ್ಕೆ ಆದರ್ಶವಾಗಬೇಕಿರುವ ಸಿನಿಮಾಗಳು ಮಹಿಳೆಯರನ್ನು ಗೌರವಿಸುವ, ಮಾನವ ಪ್ರೀತಿಯನ್ನು ಹಂಚುವ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿರಿಸುವಂತಹ ಹಾಗೂ ಆರೋಗ್ಯಕರ ಮನರಂಜನೆಯ ವಾಹಿನಿಯಾಗಿರಬೇಕೇ ಹೊರತು ಹಾದಿ ತಪ್ಪಿಸಿ, ಸಮಾಜದಲ್ಲಿ ಕೊಳಕನ್ನು ಬಿತ್ತುವ ಮಾಧ್ಯಮವಾಗಬಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...