Homeನ್ಯಾಯ ಪಥಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ...

ಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ…

- Advertisement -
- Advertisement -

ಹೈದರಾಬಾದ್ ಅತ್ಯಾಚಾರ ಪ್ರಕರಣ ಕಂಡು ಇಡೀ ದೇಶವೇ ಮರುಕಪಟ್ಟಿತು. ಫಿಲ್ಮ್ ಇಂಡಸ್ಟ್ರಿಯೂ ಕಂಬನಿ ಮಿಡಿದು, ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿತು. ಇದೇ ಮೊದಲಲ್ಲ 2012ರ ನಿರ್ಭಯಾ ಪ್ರಕರಣದಲ್ಲಿರಲಿ, ಅಥವಾ ಇಂತಹುದೇ ಮಹಿಳಾ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬಂದಾಗ ಸಿನಿಮಂದಿ ಆಕ್ರೋಶದಿಂದ ಮಾತನಾಡೋದು ಸಿನಿಮಾ ಡೈಲಾಗ್‍ಗಳಷ್ಟೇ ಸಹಜವಾಗಿದೆ. ಆದರೆ, ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ಲಾಭದ ಬೆನ್ನು ಹತ್ತಿರುವ ಸಿನಿಮೋದ್ಯಮಕ್ಕೆ, ಅದರ ಪಾಲುದಾರರಿಗೆ ನಿಜಕ್ಕೂ ಹೀಗೆಲ್ಲ ಆಕ್ರೋಶ ಹೊರಹಾಕುವ ನೈತಿಕತೆ ಉಳಿದಿದೆಯಾ ಅನ್ನೋದು ಚರ್ಚೆಯಾಗಬೇಕಿರುವ ಸಂಗತಿ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಿಯೊಬ್ಬ ತಾನು ಅತ್ಯಾಚಾರವೆಸಗಲು `ದಂಡುಪಾಳ್ಯ’ ಸಿನಿಮಾದ ವಿಕೃತ ಪ್ರಚೋದನೆಯೇ ಕಾರಣ ಅನ್ನೋದನ್ನು ವಿಚಾರಣೆ ಸಂದರ್ಭದಲ್ಲಿ ಹೇಳಿಕೊಂಡಿದ್ದ. ಇದು ಒಂದು ಸಿನಿಮಾಗೆ ಸೀಮಿತವಾದುದಲ್ಲ ಅಥವಾ ಒಬ್ಬ ಕಾಮಾಂಧನ ಪ್ರೇರಣೆಗೂ ಸೀಮಿತವಾದುದಲ್ಲ. ಕಮರ್ಷಿಯಲ್ ಸಕ್ಸಸ್‍ನ ಜಾಡುಹಿಡಿದು ಹೊರಟಿರುವ ಬಹುತೇಕ ಸಿನಿಮಾಗಳ ನಿರ್ಮಾತೃಗಳು ಗೊತ್ತಿದ್ದೊ, ಗೊತ್ತಿಲ್ಲದೆಯೋ ಇಂಥಾ ಶೋಷಣೆಗಳನ್ನು ವಿಜೃಂಭಿಸುತ್ತಾ ಬಂದಿರೋದು ಇವತ್ತಿನ ವಾಸ್ತವ.

ಸಿನಿಮಾರಂಗ ಬೆಳೆದಂತೆ, 21ನೇ ಶತಮಾನದ ಮೊದಲ ದಶಕದ ಕೊನೆಯ ವರ್ಷದವರೆಗಿನ ಬಹುತೇಕ ಸಿನಿಮಾಗಳ ಕತೆಗಳಲ್ಲಿ ಅತ್ಯಾಚಾರವೆಂಬುದು ಸಾಮಾನ್ಯ ವಸ್ತುವಾಗಿ ಕಾಣಿಸಿಕೊಳ್ಳುತ್ತವೆ. ಪ್ರೀತಿ-ಪ್ರೇಮ-ಕಾಮ, ಆಸೆ, ಆಕರ್ಷಣೆ, ಸೇಡು, ದ್ವೇಷ ಇದೆಲ್ಲದಕ್ಕೂ ಕೇಂದ್ರವಾಗಿ ಅತ್ಯಾಚಾರದ ದೃಶ್ಯಗಳು ರಾರಾಜಿಸುತ್ತಿವೆ. ಅದಲ್ಲದೆ ಅನೈತಿಕ ಸಂಬಂಧದ ಕತೆ-ದೃಶ್ಯಗಳು ನೋಡುಗರಿಗೆ ಪ್ರಚೋದನೆಯ ಹೊಸ ಹುಮ್ಮಸ್ಸನ್ನು ತಂದೊಡ್ಡುವುದರ ಜೊತೆಗೆ ಸಿನಿಮಾದಲ್ಲಿ ನಟನೊಬ್ಬ ಎಸಗುವ ಅತ್ಯಾಚಾರ ಕೃತ್ಯವು ಆ ಪಾತ್ರದ ಗಂಡಸ್ತನದ ಅಹಮ್ಮಿಕೆಯನ್ನಾಗಿಯೋ, ಸ್ತ್ರೀ ಪಾತ್ರವನ್ನು ಅವಮಾನಿಸುವ ಸಾಧನವಾಗಿಯೋ ಬಳಕೆಯಾಗುತ್ತಲೇ ಇದೆ.

ಸಿನಿಮಾ ಎಂಬುದು ಸಮಾಜದ ಕನ್ನಡಿಯಿದ್ದಂತೆ, ಸಮಾಜದಲ್ಲಿ ನಡೆಯೋದನ್ನೇ ಸಿನಿಮಾದಲ್ಲಿ ತೋರಿಸಬೇಕಾಗುತ್ತೆ ಎಂಬ ವಾದವನ್ನು ಕೆಲವರು ಮುಂದಿಡಬಹುದು. ಆದರೆ ಅಂತವರು, ನೈಜತೆಯ ನೆಪದಲ್ಲಿ ಇಂತಹ ವಿಕೃತಿಗಳನ್ನು ಹಸಿಹಸಿಯಾಗಿ ಬಿತ್ತರಿಸುವ ಅದೇ ಸಿನಿಮಾ ಸಮಾಜವನ್ನು ತಿದ್ದಿ ತೀಡುವ ಇನ್ನುಳಿದ ಹೊಣೆಗಾರಿಕೆಯನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತಿದೆ ಎಂಬ ಪ್ರಶ್ನೆಯನ್ನೂ ಕೇಳಿಕೊಳ್ಳಬೇಕಾಗುತ್ತದೆ.
ತಾನು ಪ್ರೀತಿಸಿದವಳು ತನಗೆ ಸಿಗಲಿಲ್ಲವೆಂದರೆ, ಆಕೆ ಬೇರಾರಿಗೂ ಸಿಗಬಾರದೆಂದು ಆಕೆಯನ್ನು ಅತ್ಯಾಚಾರಗೈಯುವ ಅಥವಾ ಕುಡಿದ ಮತ್ತಿನಲ್ಲಿ ಹೀರೋ ಎಸಗುವ ಅತ್ಯಾಚಾರವು ಆಕೆಯನ್ನು ಮದುವೆ ಆಗಿಬಿಟ್ಟರೆ ಎಲ್ಲವೂ ಸರಿಹೋಗಿಬಿಡುತ್ತದೆಂಬ ದೃಶ್ಯದೊಂದಿಗೆ ಕೊನೆಗಾಣುತ್ತದೆ. ಇವೆಲ್ಲವೂ ಅತ್ಯಾಚಾರಿಗಳಿಗೆ ಎಷ್ಟೊಂದು ಸುಲಭವೆಂಬಂತೆ ಪ್ರಭಾವಿಸುತ್ತವೆ.

ಸಿನಿಮಾದಲ್ಲಿ ಅತ್ಯಾಚಾರಗೈದವನು ಇವತ್ತು ಅವಳ ಸೊಕ್ಕು ಇಳಿಸಿದ್ದೇನೆಂದು ಗರ್ವದಿಂದ ಹೇಳಿಕೊಳ್ಳುವಂತಹ ಹಾಗೂ ನಿಷ್ಕರ್ಷ ಸಿನಿಮಾದಲ್ಲಿ ಖಳನಟನೊಬ್ಬ `ಇವಳಿಗೆ ಯೌವನ ತುಂಬಿ ತುಳುಕ್ತಾಯಿದೆ ಸ್ವಲ್ಪ ಖಾಲಿ ಮಾಡು’ ಎನ್ನುವ ಮತ್ತು ಆತ ಅತ್ಯಾಚಾರಗೈಯುವ ದೃಶ್ಯಗಳು ಹೆಣ್ಣಿನ ಬಾಯಿ ಮುಚ್ಚಿಸಲು ಅಥವಾ ಆಕೆಯನ್ನು ತನ್ನ ಅಡಿಯಾಳಾಗಿಸಿಕೊಳ್ಳಲು ಅತ್ಯಾಚಾರವೊಂದು ಸಾಧನ ಎಂಬುದನ್ನು ಸುಪ್ತವಾಗಿ ಸಮಾಜಕ್ಕೆ ದಾಟಿಸಿಬಿಡುತ್ತವೆ. ಜಾತಿ, ವರ್ಗ ಮತ್ತು ಕಾಮದ ಅಮಲನ್ನು ನೆತ್ತಿಗೇರಿಸಿಕೊಂಡವನಿಗೆ ಮತ್ತಷ್ಟು ಪ್ರಚೋದನೆಯನ್ನು ನೀಡುತ್ತವೆ. ಇಂತಹ ಸಿನಿಮಾಗಳು ಅತ್ಯಾಚಾರವಷ್ಟೇ ಅಲ್ಲದೆ ಆಸಿಡ್ ದಾಳಿ, ಹಿಂಸೆ, ಕಿರುಕುಳಗಳೂ ಮಹಿಳಾ ದೌರ್ಜನ್ಯದ ಪ್ರವೃತ್ತಿಯನ್ನು ಹೆಚ್ಚಿಸುತ್ತವೆ ಮತ್ತು ಪ್ರಚೋದಿಸುತ್ತವೆ.

ಅಲ್ಲದೆ, ಸಿನಿಮಾಗಳಲ್ಲಿ ಅವಕಾಶಬೇಕೆಂದರೆ ಸ್ವಲ್ಪ ಅಡ್ಜಸ್ಟ್ ಮಾಡ್ಕೋಬೇಕು ಎಂದು ಹೇಳುವ ನಿರ್ದೇಶಕರೂ, ನಿರ್ಮಾಪಕರೂ ಸಿನಿಮಾ ಇಂಡಸ್ಟ್ರಿಯಲ್ಲಿರುವುದು ಮತ್ತೊಂದು ದುರಂತ. ಇತ್ತೀಚೆಗೆ ಸದ್ದು ಮಾಡಿದ ಮೀಟೂ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹೀರೋ, ನಿರ್ದೇಶಕ, ನಿರ್ಮಾಪಕರ ಪರವಾಗಿ ನಿಲ್ಲುವ `ಫೇವರಿಸಂ’ ಮನಸ್ಥಿತಿ ಸಿನಿಮಾ ರಂಗದ ಯಾವ ನೈತಿಕತೆಯನ್ನು ಪ್ರತಿನಿಧಿಸುತ್ತದೆ. ತಮ್ಮ ಮೇಲಾದ ಲೈಂಗಿಕ ಶೋಷಣೆಯನ್ನು ಹೇಳಿಕೊಂಡ ನಟಿಯರ ಸಿನಿ ಭವಿಷ್ಯಕ್ಕೆ ತಣ್ಣೀರೆರಚುವ ಇಂಡಸ್ರ್ಟಿಯು ಅತ್ಯಾಚಾರದ ವಿರುದ್ಧ ಮಾತನಾಡುತ್ತಿರುವುದು ನೈತಿಕತೆಯ ಪ್ರಶ್ನೆಯನ್ನು ಮತ್ತೆಮತ್ತೆ ಮುನ್ನೆಲೆಗೆ ತರುತ್ತಿದೆ.

ಇಂದು ಸಿನಿಮಾಗಳಿಂದ ಪ್ರೇರೇಪಿಸಲ್ಪಡುವ ಯುವಸಮುದಾಯ ಬೆಳೆಯುತ್ತಿದೆ. ಇಂತಹ ಯುವಜನಾಂಗಕ್ಕೆ ಆದರ್ಶವಾಗಬೇಕಿರುವ ಸಿನಿಮಾಗಳು ಮಹಿಳೆಯರನ್ನು ಗೌರವಿಸುವ, ಮಾನವ ಪ್ರೀತಿಯನ್ನು ಹಂಚುವ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿರಿಸುವಂತಹ ಹಾಗೂ ಆರೋಗ್ಯಕರ ಮನರಂಜನೆಯ ವಾಹಿನಿಯಾಗಿರಬೇಕೇ ಹೊರತು ಹಾದಿ ತಪ್ಪಿಸಿ, ಸಮಾಜದಲ್ಲಿ ಕೊಳಕನ್ನು ಬಿತ್ತುವ ಮಾಧ್ಯಮವಾಗಬಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...