Homeನ್ಯಾಯ ಪಥಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ...

ಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ…

- Advertisement -
- Advertisement -

ಹೈದರಾಬಾದ್ ಅತ್ಯಾಚಾರ ಪ್ರಕರಣ ಕಂಡು ಇಡೀ ದೇಶವೇ ಮರುಕಪಟ್ಟಿತು. ಫಿಲ್ಮ್ ಇಂಡಸ್ಟ್ರಿಯೂ ಕಂಬನಿ ಮಿಡಿದು, ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿತು. ಇದೇ ಮೊದಲಲ್ಲ 2012ರ ನಿರ್ಭಯಾ ಪ್ರಕರಣದಲ್ಲಿರಲಿ, ಅಥವಾ ಇಂತಹುದೇ ಮಹಿಳಾ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬಂದಾಗ ಸಿನಿಮಂದಿ ಆಕ್ರೋಶದಿಂದ ಮಾತನಾಡೋದು ಸಿನಿಮಾ ಡೈಲಾಗ್‍ಗಳಷ್ಟೇ ಸಹಜವಾಗಿದೆ. ಆದರೆ, ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ಲಾಭದ ಬೆನ್ನು ಹತ್ತಿರುವ ಸಿನಿಮೋದ್ಯಮಕ್ಕೆ, ಅದರ ಪಾಲುದಾರರಿಗೆ ನಿಜಕ್ಕೂ ಹೀಗೆಲ್ಲ ಆಕ್ರೋಶ ಹೊರಹಾಕುವ ನೈತಿಕತೆ ಉಳಿದಿದೆಯಾ ಅನ್ನೋದು ಚರ್ಚೆಯಾಗಬೇಕಿರುವ ಸಂಗತಿ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಿಯೊಬ್ಬ ತಾನು ಅತ್ಯಾಚಾರವೆಸಗಲು `ದಂಡುಪಾಳ್ಯ’ ಸಿನಿಮಾದ ವಿಕೃತ ಪ್ರಚೋದನೆಯೇ ಕಾರಣ ಅನ್ನೋದನ್ನು ವಿಚಾರಣೆ ಸಂದರ್ಭದಲ್ಲಿ ಹೇಳಿಕೊಂಡಿದ್ದ. ಇದು ಒಂದು ಸಿನಿಮಾಗೆ ಸೀಮಿತವಾದುದಲ್ಲ ಅಥವಾ ಒಬ್ಬ ಕಾಮಾಂಧನ ಪ್ರೇರಣೆಗೂ ಸೀಮಿತವಾದುದಲ್ಲ. ಕಮರ್ಷಿಯಲ್ ಸಕ್ಸಸ್‍ನ ಜಾಡುಹಿಡಿದು ಹೊರಟಿರುವ ಬಹುತೇಕ ಸಿನಿಮಾಗಳ ನಿರ್ಮಾತೃಗಳು ಗೊತ್ತಿದ್ದೊ, ಗೊತ್ತಿಲ್ಲದೆಯೋ ಇಂಥಾ ಶೋಷಣೆಗಳನ್ನು ವಿಜೃಂಭಿಸುತ್ತಾ ಬಂದಿರೋದು ಇವತ್ತಿನ ವಾಸ್ತವ.

ಸಿನಿಮಾರಂಗ ಬೆಳೆದಂತೆ, 21ನೇ ಶತಮಾನದ ಮೊದಲ ದಶಕದ ಕೊನೆಯ ವರ್ಷದವರೆಗಿನ ಬಹುತೇಕ ಸಿನಿಮಾಗಳ ಕತೆಗಳಲ್ಲಿ ಅತ್ಯಾಚಾರವೆಂಬುದು ಸಾಮಾನ್ಯ ವಸ್ತುವಾಗಿ ಕಾಣಿಸಿಕೊಳ್ಳುತ್ತವೆ. ಪ್ರೀತಿ-ಪ್ರೇಮ-ಕಾಮ, ಆಸೆ, ಆಕರ್ಷಣೆ, ಸೇಡು, ದ್ವೇಷ ಇದೆಲ್ಲದಕ್ಕೂ ಕೇಂದ್ರವಾಗಿ ಅತ್ಯಾಚಾರದ ದೃಶ್ಯಗಳು ರಾರಾಜಿಸುತ್ತಿವೆ. ಅದಲ್ಲದೆ ಅನೈತಿಕ ಸಂಬಂಧದ ಕತೆ-ದೃಶ್ಯಗಳು ನೋಡುಗರಿಗೆ ಪ್ರಚೋದನೆಯ ಹೊಸ ಹುಮ್ಮಸ್ಸನ್ನು ತಂದೊಡ್ಡುವುದರ ಜೊತೆಗೆ ಸಿನಿಮಾದಲ್ಲಿ ನಟನೊಬ್ಬ ಎಸಗುವ ಅತ್ಯಾಚಾರ ಕೃತ್ಯವು ಆ ಪಾತ್ರದ ಗಂಡಸ್ತನದ ಅಹಮ್ಮಿಕೆಯನ್ನಾಗಿಯೋ, ಸ್ತ್ರೀ ಪಾತ್ರವನ್ನು ಅವಮಾನಿಸುವ ಸಾಧನವಾಗಿಯೋ ಬಳಕೆಯಾಗುತ್ತಲೇ ಇದೆ.

ಸಿನಿಮಾ ಎಂಬುದು ಸಮಾಜದ ಕನ್ನಡಿಯಿದ್ದಂತೆ, ಸಮಾಜದಲ್ಲಿ ನಡೆಯೋದನ್ನೇ ಸಿನಿಮಾದಲ್ಲಿ ತೋರಿಸಬೇಕಾಗುತ್ತೆ ಎಂಬ ವಾದವನ್ನು ಕೆಲವರು ಮುಂದಿಡಬಹುದು. ಆದರೆ ಅಂತವರು, ನೈಜತೆಯ ನೆಪದಲ್ಲಿ ಇಂತಹ ವಿಕೃತಿಗಳನ್ನು ಹಸಿಹಸಿಯಾಗಿ ಬಿತ್ತರಿಸುವ ಅದೇ ಸಿನಿಮಾ ಸಮಾಜವನ್ನು ತಿದ್ದಿ ತೀಡುವ ಇನ್ನುಳಿದ ಹೊಣೆಗಾರಿಕೆಯನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತಿದೆ ಎಂಬ ಪ್ರಶ್ನೆಯನ್ನೂ ಕೇಳಿಕೊಳ್ಳಬೇಕಾಗುತ್ತದೆ.
ತಾನು ಪ್ರೀತಿಸಿದವಳು ತನಗೆ ಸಿಗಲಿಲ್ಲವೆಂದರೆ, ಆಕೆ ಬೇರಾರಿಗೂ ಸಿಗಬಾರದೆಂದು ಆಕೆಯನ್ನು ಅತ್ಯಾಚಾರಗೈಯುವ ಅಥವಾ ಕುಡಿದ ಮತ್ತಿನಲ್ಲಿ ಹೀರೋ ಎಸಗುವ ಅತ್ಯಾಚಾರವು ಆಕೆಯನ್ನು ಮದುವೆ ಆಗಿಬಿಟ್ಟರೆ ಎಲ್ಲವೂ ಸರಿಹೋಗಿಬಿಡುತ್ತದೆಂಬ ದೃಶ್ಯದೊಂದಿಗೆ ಕೊನೆಗಾಣುತ್ತದೆ. ಇವೆಲ್ಲವೂ ಅತ್ಯಾಚಾರಿಗಳಿಗೆ ಎಷ್ಟೊಂದು ಸುಲಭವೆಂಬಂತೆ ಪ್ರಭಾವಿಸುತ್ತವೆ.

ಸಿನಿಮಾದಲ್ಲಿ ಅತ್ಯಾಚಾರಗೈದವನು ಇವತ್ತು ಅವಳ ಸೊಕ್ಕು ಇಳಿಸಿದ್ದೇನೆಂದು ಗರ್ವದಿಂದ ಹೇಳಿಕೊಳ್ಳುವಂತಹ ಹಾಗೂ ನಿಷ್ಕರ್ಷ ಸಿನಿಮಾದಲ್ಲಿ ಖಳನಟನೊಬ್ಬ `ಇವಳಿಗೆ ಯೌವನ ತುಂಬಿ ತುಳುಕ್ತಾಯಿದೆ ಸ್ವಲ್ಪ ಖಾಲಿ ಮಾಡು’ ಎನ್ನುವ ಮತ್ತು ಆತ ಅತ್ಯಾಚಾರಗೈಯುವ ದೃಶ್ಯಗಳು ಹೆಣ್ಣಿನ ಬಾಯಿ ಮುಚ್ಚಿಸಲು ಅಥವಾ ಆಕೆಯನ್ನು ತನ್ನ ಅಡಿಯಾಳಾಗಿಸಿಕೊಳ್ಳಲು ಅತ್ಯಾಚಾರವೊಂದು ಸಾಧನ ಎಂಬುದನ್ನು ಸುಪ್ತವಾಗಿ ಸಮಾಜಕ್ಕೆ ದಾಟಿಸಿಬಿಡುತ್ತವೆ. ಜಾತಿ, ವರ್ಗ ಮತ್ತು ಕಾಮದ ಅಮಲನ್ನು ನೆತ್ತಿಗೇರಿಸಿಕೊಂಡವನಿಗೆ ಮತ್ತಷ್ಟು ಪ್ರಚೋದನೆಯನ್ನು ನೀಡುತ್ತವೆ. ಇಂತಹ ಸಿನಿಮಾಗಳು ಅತ್ಯಾಚಾರವಷ್ಟೇ ಅಲ್ಲದೆ ಆಸಿಡ್ ದಾಳಿ, ಹಿಂಸೆ, ಕಿರುಕುಳಗಳೂ ಮಹಿಳಾ ದೌರ್ಜನ್ಯದ ಪ್ರವೃತ್ತಿಯನ್ನು ಹೆಚ್ಚಿಸುತ್ತವೆ ಮತ್ತು ಪ್ರಚೋದಿಸುತ್ತವೆ.

ಅಲ್ಲದೆ, ಸಿನಿಮಾಗಳಲ್ಲಿ ಅವಕಾಶಬೇಕೆಂದರೆ ಸ್ವಲ್ಪ ಅಡ್ಜಸ್ಟ್ ಮಾಡ್ಕೋಬೇಕು ಎಂದು ಹೇಳುವ ನಿರ್ದೇಶಕರೂ, ನಿರ್ಮಾಪಕರೂ ಸಿನಿಮಾ ಇಂಡಸ್ಟ್ರಿಯಲ್ಲಿರುವುದು ಮತ್ತೊಂದು ದುರಂತ. ಇತ್ತೀಚೆಗೆ ಸದ್ದು ಮಾಡಿದ ಮೀಟೂ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹೀರೋ, ನಿರ್ದೇಶಕ, ನಿರ್ಮಾಪಕರ ಪರವಾಗಿ ನಿಲ್ಲುವ `ಫೇವರಿಸಂ’ ಮನಸ್ಥಿತಿ ಸಿನಿಮಾ ರಂಗದ ಯಾವ ನೈತಿಕತೆಯನ್ನು ಪ್ರತಿನಿಧಿಸುತ್ತದೆ. ತಮ್ಮ ಮೇಲಾದ ಲೈಂಗಿಕ ಶೋಷಣೆಯನ್ನು ಹೇಳಿಕೊಂಡ ನಟಿಯರ ಸಿನಿ ಭವಿಷ್ಯಕ್ಕೆ ತಣ್ಣೀರೆರಚುವ ಇಂಡಸ್ರ್ಟಿಯು ಅತ್ಯಾಚಾರದ ವಿರುದ್ಧ ಮಾತನಾಡುತ್ತಿರುವುದು ನೈತಿಕತೆಯ ಪ್ರಶ್ನೆಯನ್ನು ಮತ್ತೆಮತ್ತೆ ಮುನ್ನೆಲೆಗೆ ತರುತ್ತಿದೆ.

ಇಂದು ಸಿನಿಮಾಗಳಿಂದ ಪ್ರೇರೇಪಿಸಲ್ಪಡುವ ಯುವಸಮುದಾಯ ಬೆಳೆಯುತ್ತಿದೆ. ಇಂತಹ ಯುವಜನಾಂಗಕ್ಕೆ ಆದರ್ಶವಾಗಬೇಕಿರುವ ಸಿನಿಮಾಗಳು ಮಹಿಳೆಯರನ್ನು ಗೌರವಿಸುವ, ಮಾನವ ಪ್ರೀತಿಯನ್ನು ಹಂಚುವ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿರಿಸುವಂತಹ ಹಾಗೂ ಆರೋಗ್ಯಕರ ಮನರಂಜನೆಯ ವಾಹಿನಿಯಾಗಿರಬೇಕೇ ಹೊರತು ಹಾದಿ ತಪ್ಪಿಸಿ, ಸಮಾಜದಲ್ಲಿ ಕೊಳಕನ್ನು ಬಿತ್ತುವ ಮಾಧ್ಯಮವಾಗಬಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...