Homeನ್ಯಾಯ ಪಥಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ...

ಅತ್ಯಾಚಾರಗಳು ಹೆಚ್ಚಾಗಲು ಈ ಸಿನಿಮಾಗಳ ಪಾಲೆಷ್ಟು? ಅತ್ಯಾಚಾರ ಮತ್ತು ಸಿನಿಮಾ ನೈತಿಕತೆ…

- Advertisement -
- Advertisement -

ಹೈದರಾಬಾದ್ ಅತ್ಯಾಚಾರ ಪ್ರಕರಣ ಕಂಡು ಇಡೀ ದೇಶವೇ ಮರುಕಪಟ್ಟಿತು. ಫಿಲ್ಮ್ ಇಂಡಸ್ಟ್ರಿಯೂ ಕಂಬನಿ ಮಿಡಿದು, ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿತು. ಇದೇ ಮೊದಲಲ್ಲ 2012ರ ನಿರ್ಭಯಾ ಪ್ರಕರಣದಲ್ಲಿರಲಿ, ಅಥವಾ ಇಂತಹುದೇ ಮಹಿಳಾ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬಂದಾಗ ಸಿನಿಮಂದಿ ಆಕ್ರೋಶದಿಂದ ಮಾತನಾಡೋದು ಸಿನಿಮಾ ಡೈಲಾಗ್‍ಗಳಷ್ಟೇ ಸಹಜವಾಗಿದೆ. ಆದರೆ, ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ಲಾಭದ ಬೆನ್ನು ಹತ್ತಿರುವ ಸಿನಿಮೋದ್ಯಮಕ್ಕೆ, ಅದರ ಪಾಲುದಾರರಿಗೆ ನಿಜಕ್ಕೂ ಹೀಗೆಲ್ಲ ಆಕ್ರೋಶ ಹೊರಹಾಕುವ ನೈತಿಕತೆ ಉಳಿದಿದೆಯಾ ಅನ್ನೋದು ಚರ್ಚೆಯಾಗಬೇಕಿರುವ ಸಂಗತಿ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಿಯೊಬ್ಬ ತಾನು ಅತ್ಯಾಚಾರವೆಸಗಲು `ದಂಡುಪಾಳ್ಯ’ ಸಿನಿಮಾದ ವಿಕೃತ ಪ್ರಚೋದನೆಯೇ ಕಾರಣ ಅನ್ನೋದನ್ನು ವಿಚಾರಣೆ ಸಂದರ್ಭದಲ್ಲಿ ಹೇಳಿಕೊಂಡಿದ್ದ. ಇದು ಒಂದು ಸಿನಿಮಾಗೆ ಸೀಮಿತವಾದುದಲ್ಲ ಅಥವಾ ಒಬ್ಬ ಕಾಮಾಂಧನ ಪ್ರೇರಣೆಗೂ ಸೀಮಿತವಾದುದಲ್ಲ. ಕಮರ್ಷಿಯಲ್ ಸಕ್ಸಸ್‍ನ ಜಾಡುಹಿಡಿದು ಹೊರಟಿರುವ ಬಹುತೇಕ ಸಿನಿಮಾಗಳ ನಿರ್ಮಾತೃಗಳು ಗೊತ್ತಿದ್ದೊ, ಗೊತ್ತಿಲ್ಲದೆಯೋ ಇಂಥಾ ಶೋಷಣೆಗಳನ್ನು ವಿಜೃಂಭಿಸುತ್ತಾ ಬಂದಿರೋದು ಇವತ್ತಿನ ವಾಸ್ತವ.

ಸಿನಿಮಾರಂಗ ಬೆಳೆದಂತೆ, 21ನೇ ಶತಮಾನದ ಮೊದಲ ದಶಕದ ಕೊನೆಯ ವರ್ಷದವರೆಗಿನ ಬಹುತೇಕ ಸಿನಿಮಾಗಳ ಕತೆಗಳಲ್ಲಿ ಅತ್ಯಾಚಾರವೆಂಬುದು ಸಾಮಾನ್ಯ ವಸ್ತುವಾಗಿ ಕಾಣಿಸಿಕೊಳ್ಳುತ್ತವೆ. ಪ್ರೀತಿ-ಪ್ರೇಮ-ಕಾಮ, ಆಸೆ, ಆಕರ್ಷಣೆ, ಸೇಡು, ದ್ವೇಷ ಇದೆಲ್ಲದಕ್ಕೂ ಕೇಂದ್ರವಾಗಿ ಅತ್ಯಾಚಾರದ ದೃಶ್ಯಗಳು ರಾರಾಜಿಸುತ್ತಿವೆ. ಅದಲ್ಲದೆ ಅನೈತಿಕ ಸಂಬಂಧದ ಕತೆ-ದೃಶ್ಯಗಳು ನೋಡುಗರಿಗೆ ಪ್ರಚೋದನೆಯ ಹೊಸ ಹುಮ್ಮಸ್ಸನ್ನು ತಂದೊಡ್ಡುವುದರ ಜೊತೆಗೆ ಸಿನಿಮಾದಲ್ಲಿ ನಟನೊಬ್ಬ ಎಸಗುವ ಅತ್ಯಾಚಾರ ಕೃತ್ಯವು ಆ ಪಾತ್ರದ ಗಂಡಸ್ತನದ ಅಹಮ್ಮಿಕೆಯನ್ನಾಗಿಯೋ, ಸ್ತ್ರೀ ಪಾತ್ರವನ್ನು ಅವಮಾನಿಸುವ ಸಾಧನವಾಗಿಯೋ ಬಳಕೆಯಾಗುತ್ತಲೇ ಇದೆ.

ಸಿನಿಮಾ ಎಂಬುದು ಸಮಾಜದ ಕನ್ನಡಿಯಿದ್ದಂತೆ, ಸಮಾಜದಲ್ಲಿ ನಡೆಯೋದನ್ನೇ ಸಿನಿಮಾದಲ್ಲಿ ತೋರಿಸಬೇಕಾಗುತ್ತೆ ಎಂಬ ವಾದವನ್ನು ಕೆಲವರು ಮುಂದಿಡಬಹುದು. ಆದರೆ ಅಂತವರು, ನೈಜತೆಯ ನೆಪದಲ್ಲಿ ಇಂತಹ ವಿಕೃತಿಗಳನ್ನು ಹಸಿಹಸಿಯಾಗಿ ಬಿತ್ತರಿಸುವ ಅದೇ ಸಿನಿಮಾ ಸಮಾಜವನ್ನು ತಿದ್ದಿ ತೀಡುವ ಇನ್ನುಳಿದ ಹೊಣೆಗಾರಿಕೆಯನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತಿದೆ ಎಂಬ ಪ್ರಶ್ನೆಯನ್ನೂ ಕೇಳಿಕೊಳ್ಳಬೇಕಾಗುತ್ತದೆ.
ತಾನು ಪ್ರೀತಿಸಿದವಳು ತನಗೆ ಸಿಗಲಿಲ್ಲವೆಂದರೆ, ಆಕೆ ಬೇರಾರಿಗೂ ಸಿಗಬಾರದೆಂದು ಆಕೆಯನ್ನು ಅತ್ಯಾಚಾರಗೈಯುವ ಅಥವಾ ಕುಡಿದ ಮತ್ತಿನಲ್ಲಿ ಹೀರೋ ಎಸಗುವ ಅತ್ಯಾಚಾರವು ಆಕೆಯನ್ನು ಮದುವೆ ಆಗಿಬಿಟ್ಟರೆ ಎಲ್ಲವೂ ಸರಿಹೋಗಿಬಿಡುತ್ತದೆಂಬ ದೃಶ್ಯದೊಂದಿಗೆ ಕೊನೆಗಾಣುತ್ತದೆ. ಇವೆಲ್ಲವೂ ಅತ್ಯಾಚಾರಿಗಳಿಗೆ ಎಷ್ಟೊಂದು ಸುಲಭವೆಂಬಂತೆ ಪ್ರಭಾವಿಸುತ್ತವೆ.

ಸಿನಿಮಾದಲ್ಲಿ ಅತ್ಯಾಚಾರಗೈದವನು ಇವತ್ತು ಅವಳ ಸೊಕ್ಕು ಇಳಿಸಿದ್ದೇನೆಂದು ಗರ್ವದಿಂದ ಹೇಳಿಕೊಳ್ಳುವಂತಹ ಹಾಗೂ ನಿಷ್ಕರ್ಷ ಸಿನಿಮಾದಲ್ಲಿ ಖಳನಟನೊಬ್ಬ `ಇವಳಿಗೆ ಯೌವನ ತುಂಬಿ ತುಳುಕ್ತಾಯಿದೆ ಸ್ವಲ್ಪ ಖಾಲಿ ಮಾಡು’ ಎನ್ನುವ ಮತ್ತು ಆತ ಅತ್ಯಾಚಾರಗೈಯುವ ದೃಶ್ಯಗಳು ಹೆಣ್ಣಿನ ಬಾಯಿ ಮುಚ್ಚಿಸಲು ಅಥವಾ ಆಕೆಯನ್ನು ತನ್ನ ಅಡಿಯಾಳಾಗಿಸಿಕೊಳ್ಳಲು ಅತ್ಯಾಚಾರವೊಂದು ಸಾಧನ ಎಂಬುದನ್ನು ಸುಪ್ತವಾಗಿ ಸಮಾಜಕ್ಕೆ ದಾಟಿಸಿಬಿಡುತ್ತವೆ. ಜಾತಿ, ವರ್ಗ ಮತ್ತು ಕಾಮದ ಅಮಲನ್ನು ನೆತ್ತಿಗೇರಿಸಿಕೊಂಡವನಿಗೆ ಮತ್ತಷ್ಟು ಪ್ರಚೋದನೆಯನ್ನು ನೀಡುತ್ತವೆ. ಇಂತಹ ಸಿನಿಮಾಗಳು ಅತ್ಯಾಚಾರವಷ್ಟೇ ಅಲ್ಲದೆ ಆಸಿಡ್ ದಾಳಿ, ಹಿಂಸೆ, ಕಿರುಕುಳಗಳೂ ಮಹಿಳಾ ದೌರ್ಜನ್ಯದ ಪ್ರವೃತ್ತಿಯನ್ನು ಹೆಚ್ಚಿಸುತ್ತವೆ ಮತ್ತು ಪ್ರಚೋದಿಸುತ್ತವೆ.

ಅಲ್ಲದೆ, ಸಿನಿಮಾಗಳಲ್ಲಿ ಅವಕಾಶಬೇಕೆಂದರೆ ಸ್ವಲ್ಪ ಅಡ್ಜಸ್ಟ್ ಮಾಡ್ಕೋಬೇಕು ಎಂದು ಹೇಳುವ ನಿರ್ದೇಶಕರೂ, ನಿರ್ಮಾಪಕರೂ ಸಿನಿಮಾ ಇಂಡಸ್ಟ್ರಿಯಲ್ಲಿರುವುದು ಮತ್ತೊಂದು ದುರಂತ. ಇತ್ತೀಚೆಗೆ ಸದ್ದು ಮಾಡಿದ ಮೀಟೂ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹೀರೋ, ನಿರ್ದೇಶಕ, ನಿರ್ಮಾಪಕರ ಪರವಾಗಿ ನಿಲ್ಲುವ `ಫೇವರಿಸಂ’ ಮನಸ್ಥಿತಿ ಸಿನಿಮಾ ರಂಗದ ಯಾವ ನೈತಿಕತೆಯನ್ನು ಪ್ರತಿನಿಧಿಸುತ್ತದೆ. ತಮ್ಮ ಮೇಲಾದ ಲೈಂಗಿಕ ಶೋಷಣೆಯನ್ನು ಹೇಳಿಕೊಂಡ ನಟಿಯರ ಸಿನಿ ಭವಿಷ್ಯಕ್ಕೆ ತಣ್ಣೀರೆರಚುವ ಇಂಡಸ್ರ್ಟಿಯು ಅತ್ಯಾಚಾರದ ವಿರುದ್ಧ ಮಾತನಾಡುತ್ತಿರುವುದು ನೈತಿಕತೆಯ ಪ್ರಶ್ನೆಯನ್ನು ಮತ್ತೆಮತ್ತೆ ಮುನ್ನೆಲೆಗೆ ತರುತ್ತಿದೆ.

ಇಂದು ಸಿನಿಮಾಗಳಿಂದ ಪ್ರೇರೇಪಿಸಲ್ಪಡುವ ಯುವಸಮುದಾಯ ಬೆಳೆಯುತ್ತಿದೆ. ಇಂತಹ ಯುವಜನಾಂಗಕ್ಕೆ ಆದರ್ಶವಾಗಬೇಕಿರುವ ಸಿನಿಮಾಗಳು ಮಹಿಳೆಯರನ್ನು ಗೌರವಿಸುವ, ಮಾನವ ಪ್ರೀತಿಯನ್ನು ಹಂಚುವ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿರಿಸುವಂತಹ ಹಾಗೂ ಆರೋಗ್ಯಕರ ಮನರಂಜನೆಯ ವಾಹಿನಿಯಾಗಿರಬೇಕೇ ಹೊರತು ಹಾದಿ ತಪ್ಪಿಸಿ, ಸಮಾಜದಲ್ಲಿ ಕೊಳಕನ್ನು ಬಿತ್ತುವ ಮಾಧ್ಯಮವಾಗಬಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...