Homeಮುಖಪುಟಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

ಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

- Advertisement -
- Advertisement -

‘ಸಂತ್ರಸ್ತೆಯ ಪತಿಯಿಂದ ಅತ್ಯಾಚಾರ ನಡೆದರೂ, ಅದು ಅತ್ಯಾಚಾರವೇ’ ಎಂದು ಗುಜರಾತ್ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಭಾರತದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಮೌನ ಮುರಿಯಬೇಕಾಗಿದೆ ಎಂದು ಒತ್ತಿ ಹೇಳಿದೆ.

ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ನೈಜ ಘಟನೆಗಳು ಬಹುಶಃ ಡೇಟಾ ಸೂಚಿಸುವುದಕ್ಕಿಂತ ಹೆಚ್ಚಾಗಿವೆ. ಮಹಿಳೆಯರು ಪ್ರತಿ ದಿನ ಕಿರುಕುಳ ಎದುರಿಸುತ್ತಲೇ ಇರುತ್ತಾರೆ. ಕೆಲವೊಬ್ಬರು ತಮ್ಮ ಗಂಡದಿರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾರೆ ಎಂದು ಪ್ರಕರಣವೊಂದರ ತೀರ್ಪು ಪ್ರಕಟಿಸುವ ವೇಳೆ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಒಬ್ಬ ಮನುಷ್ಯ ಮನುಷ್ಯನೇ, ಕೃತ್ಯ ಕೃತ್ಯವೇ, ಅದೇ ರೀತಿ ಅತ್ಯಾಚಾರ ಅತ್ಯಾಚಾರವೇ. ಅದು ಗಂಡ ಹೆಂಡಿತಿಯ ಮೇಲೆ ಮಾಡಿದರೂ ಸರಿ ಎಂದು ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಸಮಾಜದಲ್ಲಿ ಮಹಿಳೆಯನ್ನು ಹಿಂಬಾಲಿಸುವುದು, ಮೌಖಿಕ, ದೈಹಿಕ ದಬ್ಬಾಳಿಕೆ ಮಾಡುವುದು ಮತ್ತು ಕಿರುಕುಳದಂತಹ ಕೆಲವು ವಿಚಾರಗಳು ಸಣ್ಣ ಮಟ್ಟದ ಅಪರಾಧಗಳೆಂದು ಗುರುತಿಸಲ್ಪಟ್ಟಿದೆ. ಇದು ಸಾಮಾನ್ಯ ಘಟನೆಯೆಂಬಂತೆ ಪರಿಗಣಿಸಲ್ಪಟ್ಟಿದೆ. ಆದರೆ, ವಾಸ್ತವದಲ್ಲಿ ಹೀಗಾಗಬಾರದು. ಇಂಥ ಘಟನೆಗಳು ಕೂಡ ಹಿಂಸೆಗೆ ಸಮವಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಲೈಂಗಿಕ ಅಪರಾಧವನ್ನು ಕ್ಷಮಿಸುವ ವರ್ತನೆಗಳು ನೊಂದವರ ಮೇಲೆ ಶಾಶ್ವತ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಸೊಸೆಗೆ ಕಿರಕುಳ, ಅತ್ತೆಯ ಜಾಮೀನು ಅರ್ಜಿ ತಿರಸ್ಕೃತ

ತನ್ನ ಸೊಸೆಯನ್ನು ಕ್ರೌರ್ಯ ಮತ್ತು ಕ್ರಿಮಿನಲ್ ಬೆದರಿಕೆಗೆ ಒಳಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಮಹಿಳೆಯೊಬ್ಬರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಮೇಲಿನಂತೆ ಹೇಳಿದೆ. ಆರೋಪಿತ ಮಹಿಳೆ, ತನ್ನ ಪತಿ ಮತ್ತು ಮಗನಿಂದ ಸೊಸೆಯ ಮೇಲೆ ಅತ್ಯಾಚಾರ ಮಾಡಿಸಿ, ಅದರ ವಿಡಿಯೋವನ್ನು ಅಶ್ಲೀಲ ಸೈಟ್‌ಗಳಲ್ಲಿ ಪೋಸ್ಟ್ ಮಾಡಿ ಹಣ ಸಂಪಾದಿಸಲು ಮುಂದಾಗಿದ್ದಳು ಎಂದು ತಿಳಿದು ಬಂದಿದೆ.

ಕೋರ್ಟ್‌ ಆದೇಶದ ಪ್ರಕಾರ, ಈ ವರ್ಷದ ಆಗಸ್ಟ್ 13 ರಂದು ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಅಂದೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಭಾರತೀಯ ದಂಡ ಸಂಹಿತೆ (ಐಪಿಸಿ)ಯನ್ನು ಹೆಚ್ಚಾಗಿ ಯುಕೆಯಿಂದ ಅಳವಡಿಸಿಕೊಳ್ಳಲಾಗಿದೆ. ಆ ದೇಶದಲ್ಲೇ ಅತ್ಯಾಚಾರ ಪ್ರಕರಣಗಳಲ್ಲಿ ಗಂಡಂದಿರಿಗೆ ನೀಡಿದ್ದ ವಿನಾಯಿತಿಯನ್ನು ತೆಗೆದು ಹಾಕಲಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸುವ ವೇಳೆ ತಿಳಿಸಿದೆ.

ಭಾರತದ ಕಾನೂನು ಏನು ಹೇಳುತ್ತದೆ?

ಭಾರತೀಯ ದಂಡ ಸಂಹಿತೆ ಸೆಕ್ಷನ್ 375 ಅತ್ಯಾಚಾರದ ವ್ಯಾಖ್ಯಾನದಿಂದ ಪತಿಗೆ ವಿನಾಯಿತಿ ನೀಡುತ್ತದೆ. ಪುರುಷ 15 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ ಎಂದು ಹೇಳುತ್ತದೆ. ಸೆಕ್ಷನ್ 376 ಅತ್ಯಾಚಾರಕ್ಕೆ ಶಿಕ್ಷೆಯನ್ನು ವಿವರಿಸುತ್ತದೆ.

50 ಅಮೆರಿಕನ್ ರಾಜ್ಯಗಳಲ್ಲಿ ವೈವಾಹಿಕ ಅತ್ಯಾಚಾರ ಅಪರಾಧ:

50 ಅಮೆರಿಕನ್ ರಾಜ್ಯಗಳು, ಮೂರು ಆಸ್ಟ್ರೇಲಿಯಾದ ರಾಜ್ಯಗಳು, ನ್ಯೂಜಿಲೆಂಡ್, ಕೆನಡಾ, ಇಸ್ರೇಲ್, ಫ್ರಾನ್ಸ್, ಸ್ವೀಡನ್, ಡೆನ್ಮಾರ್ಕ್, ನಾರ್ವೆ, ಸೋವಿಯತ್ ಯೂನಿಯನ್, ಪೋಲೆಂಡ್ ಜೆಕೊಸ್ಲೊವಾಕಿಯಾ ಸೇರಿದಂತೆ ಹಲವಾರು ಇತರ ದೇಶಗಳಲ್ಲಿ ವೈವಾಹಿಕ ಅತ್ಯಾಚಾರ ಕಾನೂನುಬಾಹಿರವಾಗಿದೆ ಎಂದು ಕೋರ್ಟ್ ತಿಳಿಸಿದೆ.

ವೈವಾಹಿಕ ಅತ್ಯಾಚಾರದ ವಿನಾಯಿತಿ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ವೈವಾಹಿಕ ಅತ್ಯಾಚಾರದ ವಿನಾಯಿತಿಯನ್ನು ಪ್ರಶ್ನಿಸಿ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮುನ್ನ ಸುಪ್ರೀಂ ಕೋರ್ಟ್‌ ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಅಂತಿಮ ನಿಲುವು ಕೇಳಿದೆ. ಸರ್ಕಾರ ಇನ್ನೂ ಕೋರ್ಟ್‌ಗೆ ಅಂತಿಮ ಅಫಿಡವಿಟ್ ಸಲ್ಲಿಸಿಲ್ಲ. ಆದರೆ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ವಿಷಯವು “ಸಾಮಾಜಿಕ ಪರಿಣಾಮಗಳನ್ನು” ಹೊಂದಿರುತ್ತದೆ ಎಂದು ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...