Homeಮುಖಪುಟಅತ್ಯಾಚಾರದ ಕಾನೂನನ್ನು ಪುರುಷರ ವಿರುದ್ಧ ಅಸ್ತ್ರವಾಗಿ ದುರ್ಬಳಕೆ: ಉತ್ತರಾಖಂಡ ಹೈಕೋರ್ಟ್

ಅತ್ಯಾಚಾರದ ಕಾನೂನನ್ನು ಪುರುಷರ ವಿರುದ್ಧ ಅಸ್ತ್ರವಾಗಿ ದುರ್ಬಳಕೆ: ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ಮಹಿಳೆಯರು ತಮ್ಮ ಪುರುಷ  ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾದಾಗ ಅಥವಾ ಬೇರೆ ಕಾರಣಗಳಿಗಾಗಿ ಅವರ ವಿರುದ್ಧ ಅತ್ಯಾಚಾರದ ಕಾನೂನನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಉತ್ತರಾಖಂಡ್ ಹೈಕೋರ್ಟ್ ಜುಲೈ 5 ರಂದು ಹೇಳಿದೆ ಎಂದು ಗುರುವಾರ ವರದಿಯಾಗಿದೆ.

ಮಹಿಳೆಯೊಬ್ಬಳೊಂದಿಗೆ ವ್ಯಕ್ತಿಯೊಬ್ಬ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಆಕೆಯನ್ನು ಮದುವೆಯಾಗುಬೇಕು ಎಂದು ಆತನ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ಜಸ್ಟಿಸ್ ಶರದ್‌ ಕುಮಾರ್ ಶರ್ಮಾ ಈ ತೀರ್ಪು ನೀಡಿದ್ದಾರೆ.

”ಮನೋಜ್ ಕುಮಾರ್ ಆರ್ಯ ಎಂಬ ವ್ಯಕ್ತಿ 2005ರಿಂದ ದೂರುದಾರರೊಂದಿಗೆ ಒಮ್ಮತದ ಲೈಂಗಿಕ ಸಂಬಂಧವನ್ನು ಹೊಂದಿದ್ದರು. ಇಬ್ಬರಲ್ಲಿ ಯಾರಿಗಾದರೂ ಕೆಲಸ ಸಿಕ್ಕಿದ ತಕ್ಷಣ ಮದುವೆಯಾಗುವುದಾಗಿ ಇಬ್ಬರೂ ಪರಸ್ಪರ ಭರವಸೆ ನೀಡಿದ್ದರು” ಎಂದು ಹೈಕೋರ್ಟ್ ಗಮನಿಸಿದೆ.

ವಿವಾಹದ ಭರವಸೆಯ ಮೇರೆಗೆ ಪುರುಷ ಮತ್ತು ದೂರುದಾರರು ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಅವರು ಬೇರೆ ಮಹಿಳೆಯನ್ನು ಮದುವೆಯಾದ ನಂತರವೂ ಅವರ ಸಂಬಂಧ ಮುಂದುವರೆಯಿತು ಎಂದು ಬಾರ್ ಬೆಂಚ್ ವರದಿ ಮಾಡಿದೆ.

”ಅರ್ಜಿದಾರರು ಈಗಾಗಲೇ ವಿವಾಹಿತ ವ್ಯಕ್ತಿಯಾಗಿರುವ ವಿಚಾರ ದೂರುದಾರರಿಗೆ ತಿಳಿದ ನಂತರವೂ ಸ್ವಯಂಪ್ರೇರಣೆಯಿಂದ ಸಂಬಂಧವನ್ನು ಮುಂದುವರೆಸಿದ್ದಾರೆ. ಹಾಗಾಗಿ ಇದರಲ್ಲಿ ಒಪ್ಪಿಗೆಯ ಅಂಶವು ಒಳಗೊಂಡಿದೆ” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಮಹಿಳೆಯು ಜೂನ್ 30, 2020ರಂದು ಮನೋಜ್ ಕುಮಾರ್ ಆರ್ಯ ಅವರ ವಿರುದ್ಧ ದೂರು ದಾಖಲಿಸಿದ್ದರು. ಅವರು ಬೇರೆ ಯುವತಿಯನ್ನು ಮದುವೆಯಾಗಿದ್ದಕ್ಕೆ ಪ್ರತಿಕಾರವಾಗಿ ಮಹಿಳೆ ಆರೋಪ ಮಾಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.

ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೋ ಇಲ್ಲವೋ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಯಬೇಕು ಆನಂತರ ವರದಿಯನ್ನು ನೀಡಿದ ನಂತರವೇ ಆಕೆಯ ಆರೋಪಗಳನ್ನು ದೃಢಪಡಿಸಬಹುದಿತ್ತು ಎಂದು ನ್ಯಾಯಾಧೀಶರು ಹೇಳಿದರು.

”ಮದುವೆಯ ಒಂದು ಅಂಶ ಅಥವಾ ಭರವಸೆ, ಮತ್ತು ಆ ನೆಪದಲ್ಲಿ, ಒಮ್ಮತದ ಸಂಬಂಧಕ್ಕೆ ಪ್ರವೇಶಿಸುವಾಗ, ಮದುವೆಯ ಭರವಸೆಯ ಸುಳ್ಳುತನವನ್ನು ಅದರ ಪ್ರಾರಂಭದ ಆರಂಭಿಕ ಹಂತದಲ್ಲಿ ಪರೀಕ್ಷಿಸಬೇಕು ಮತ್ತು ನಂತರದ ಹಂತದಲ್ಲಿ ಅಲ್ಲ” ಎಂದು ತೀರ್ಪು ಹೇಳಿದೆ.

”ಆರಂಭಿಕ ಹಂತವನ್ನು 15 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗುವುದಿಲ್ಲ ಮತ್ತು ಅರ್ಜಿದಾರರ ಮದುವೆಯ ನಂತರವೂ ಮುಂದುವರೆದಿದೆ.”

ಇದನ್ನೂ ಓದಿ: ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...