Homeಮುಖಪುಟಅತ್ಯಾಚಾರದ ಕಾನೂನನ್ನು ಪುರುಷರ ವಿರುದ್ಧ ಅಸ್ತ್ರವಾಗಿ ದುರ್ಬಳಕೆ: ಉತ್ತರಾಖಂಡ ಹೈಕೋರ್ಟ್

ಅತ್ಯಾಚಾರದ ಕಾನೂನನ್ನು ಪುರುಷರ ವಿರುದ್ಧ ಅಸ್ತ್ರವಾಗಿ ದುರ್ಬಳಕೆ: ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ಮಹಿಳೆಯರು ತಮ್ಮ ಪುರುಷ  ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾದಾಗ ಅಥವಾ ಬೇರೆ ಕಾರಣಗಳಿಗಾಗಿ ಅವರ ವಿರುದ್ಧ ಅತ್ಯಾಚಾರದ ಕಾನೂನನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಉತ್ತರಾಖಂಡ್ ಹೈಕೋರ್ಟ್ ಜುಲೈ 5 ರಂದು ಹೇಳಿದೆ ಎಂದು ಗುರುವಾರ ವರದಿಯಾಗಿದೆ.

ಮಹಿಳೆಯೊಬ್ಬಳೊಂದಿಗೆ ವ್ಯಕ್ತಿಯೊಬ್ಬ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಆಕೆಯನ್ನು ಮದುವೆಯಾಗುಬೇಕು ಎಂದು ಆತನ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ಜಸ್ಟಿಸ್ ಶರದ್‌ ಕುಮಾರ್ ಶರ್ಮಾ ಈ ತೀರ್ಪು ನೀಡಿದ್ದಾರೆ.

”ಮನೋಜ್ ಕುಮಾರ್ ಆರ್ಯ ಎಂಬ ವ್ಯಕ್ತಿ 2005ರಿಂದ ದೂರುದಾರರೊಂದಿಗೆ ಒಮ್ಮತದ ಲೈಂಗಿಕ ಸಂಬಂಧವನ್ನು ಹೊಂದಿದ್ದರು. ಇಬ್ಬರಲ್ಲಿ ಯಾರಿಗಾದರೂ ಕೆಲಸ ಸಿಕ್ಕಿದ ತಕ್ಷಣ ಮದುವೆಯಾಗುವುದಾಗಿ ಇಬ್ಬರೂ ಪರಸ್ಪರ ಭರವಸೆ ನೀಡಿದ್ದರು” ಎಂದು ಹೈಕೋರ್ಟ್ ಗಮನಿಸಿದೆ.

ವಿವಾಹದ ಭರವಸೆಯ ಮೇರೆಗೆ ಪುರುಷ ಮತ್ತು ದೂರುದಾರರು ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಅವರು ಬೇರೆ ಮಹಿಳೆಯನ್ನು ಮದುವೆಯಾದ ನಂತರವೂ ಅವರ ಸಂಬಂಧ ಮುಂದುವರೆಯಿತು ಎಂದು ಬಾರ್ ಬೆಂಚ್ ವರದಿ ಮಾಡಿದೆ.

”ಅರ್ಜಿದಾರರು ಈಗಾಗಲೇ ವಿವಾಹಿತ ವ್ಯಕ್ತಿಯಾಗಿರುವ ವಿಚಾರ ದೂರುದಾರರಿಗೆ ತಿಳಿದ ನಂತರವೂ ಸ್ವಯಂಪ್ರೇರಣೆಯಿಂದ ಸಂಬಂಧವನ್ನು ಮುಂದುವರೆಸಿದ್ದಾರೆ. ಹಾಗಾಗಿ ಇದರಲ್ಲಿ ಒಪ್ಪಿಗೆಯ ಅಂಶವು ಒಳಗೊಂಡಿದೆ” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಮಹಿಳೆಯು ಜೂನ್ 30, 2020ರಂದು ಮನೋಜ್ ಕುಮಾರ್ ಆರ್ಯ ಅವರ ವಿರುದ್ಧ ದೂರು ದಾಖಲಿಸಿದ್ದರು. ಅವರು ಬೇರೆ ಯುವತಿಯನ್ನು ಮದುವೆಯಾಗಿದ್ದಕ್ಕೆ ಪ್ರತಿಕಾರವಾಗಿ ಮಹಿಳೆ ಆರೋಪ ಮಾಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.

ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೋ ಇಲ್ಲವೋ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಯಬೇಕು ಆನಂತರ ವರದಿಯನ್ನು ನೀಡಿದ ನಂತರವೇ ಆಕೆಯ ಆರೋಪಗಳನ್ನು ದೃಢಪಡಿಸಬಹುದಿತ್ತು ಎಂದು ನ್ಯಾಯಾಧೀಶರು ಹೇಳಿದರು.

”ಮದುವೆಯ ಒಂದು ಅಂಶ ಅಥವಾ ಭರವಸೆ, ಮತ್ತು ಆ ನೆಪದಲ್ಲಿ, ಒಮ್ಮತದ ಸಂಬಂಧಕ್ಕೆ ಪ್ರವೇಶಿಸುವಾಗ, ಮದುವೆಯ ಭರವಸೆಯ ಸುಳ್ಳುತನವನ್ನು ಅದರ ಪ್ರಾರಂಭದ ಆರಂಭಿಕ ಹಂತದಲ್ಲಿ ಪರೀಕ್ಷಿಸಬೇಕು ಮತ್ತು ನಂತರದ ಹಂತದಲ್ಲಿ ಅಲ್ಲ” ಎಂದು ತೀರ್ಪು ಹೇಳಿದೆ.

”ಆರಂಭಿಕ ಹಂತವನ್ನು 15 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗುವುದಿಲ್ಲ ಮತ್ತು ಅರ್ಜಿದಾರರ ಮದುವೆಯ ನಂತರವೂ ಮುಂದುವರೆದಿದೆ.”

ಇದನ್ನೂ ಓದಿ: ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...