Homeಕರ್ನಾಟಕಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.

“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

‘ತಮಟೆ ಮೀಡಿಯಾ’ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಅಲೆಮಾರಿ ಬಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA ಸೇರಿದಂತೆ ಹಲವು ಸಂಘಟನೆಯವರು ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...