Homeಕರ್ನಾಟಕಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.

“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

‘ತಮಟೆ ಮೀಡಿಯಾ’ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಅಲೆಮಾರಿ ಬಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA ಸೇರಿದಂತೆ ಹಲವು ಸಂಘಟನೆಯವರು ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...