Homeಕರ್ನಾಟಕಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.

“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

‘ತಮಟೆ ಮೀಡಿಯಾ’ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಅಲೆಮಾರಿ ಬಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA ಸೇರಿದಂತೆ ಹಲವು ಸಂಘಟನೆಯವರು ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...