Homeಮುಖಪುಟಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

2018 ರಲ್ಲಿ ಡೆಹ್ರಾಡೂನ್‌ನಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿದ್ದ ಆರೋಪಿಯೊಬ್ಬರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯವು ನೀಡಿದ್ದ ಮರಣದಂಡನೆಯನ್ನು ಅನುಮೋದಿಸಿದ್ದ ಉತ್ತರಾಖಂಡ ಹೈಕೋರ್ಟ್‌ನ ಜನವರಿ 2020 ರ ತೀರ್ಪಿನ ವಿರುದ್ಧ ಆರೋಪಿ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿದಾರನ ಮಾನಸಿಕ ಸ್ಥಿತಿಯನ್ನು ಮೌಲ್ಯಮಾಪನವನ್ನು ಮಾಡಿ ಅದರ ವರದಿಯನ್ನು ನೀಡುವಂತೆ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಸೂಚಿಸಿದೆ.

“ಪ್ರಕರಣದಲ್ಲಿ ಹೆಚ್ಚಿನ ಪರಿಗಣನೆಗೆ ಬಾಕಿಯಿದೆ, ಅರ್ಜಿದಾರನಿಗೆ ನೀಡಲಾದ ಮರಣದಂಡನೆಯ ಕಾರ್ಯಾಚರಣೆಯನ್ನು ತಡೆಹಿಡಿಯಲಾಗುತ್ತದೆ. ಈ ಸಂಬಂಧದ ಸೂಚನೆಯನ್ನು ತಕ್ಷಣವೇ ಸಂಬಂಧಪಟ್ಟ ಕಾರಾಗೃಹಕ್ಕೆ ಕಳುಹಿಸಲಿ” ಎಂದು ನ್ಯಾಯಮೂರ್ತಿಗಳಾದ ಎಸ್‌ಆರ್ ಭಟ್ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಮಾರ್ಚ್ 2 ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

ಈ ವಿಷಯದಲ್ಲಿ ಸಂಪೂರ್ಣ ವರದಿ ಪಡೆಯುವ ಸಲುವಾಗಿ, ಅಪರಾಧಿ ಜೈಲಿನಲ್ಲಿದ್ದಾಗ ಮಾಡಿದ ಕೆಲಸಗಳ ಸ್ವರೂಪದ ಬಗ್ಗೆ ಸಂಬಂಧಿಸಿದ ಜೈಲು ಆಡಳಿತ ಏಪ್ರಿಲ್ 25 ರೊಳಗೆ ವರದಿಯನ್ನು ತನ್ನ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜೊತೆಗೆ ನ್ಯಾಯದ ಹಿತಾಸಕ್ತಿಗಾಗಿ ನಾವು ಮೇಲ್ಮನವಿದಾರರ ಮಾನಸಿಕ ಸ್ಥಿತಿಗತಿಯ ಮೌಲ್ಯಮಾಪನವನ್ನು ಪಡೆಯಬೇಕೆಂದು ಭಾವಿಸುತ್ತೇವೆ” ಎಂದು ಪೀಠ ತಿಳಿಸಿದೆ.

ಘಟನೆ ಹಿನ್ನೆಲೆ: 

ಜುಲೈ 2018 ರಲ್ಲಿ ಡೆಹ್ರಾಡೂನ್‌ನಲ್ಲಿ 11 ವರ್ಷದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಅಪರಾಧಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ತನ್ನ ಮಗಳು ನಾಮತ್ತೆಯಾಗಿದ್ದಾರೆ. ಮಕ್ಕಳ ಬಳಿ ತನ್ನ ಮಗಳ ಬಗ್ಗೆ ವಿಚಾರಿಸಿದಾಗ ಆರೋಪಿ ಜೈ ಪ್ರಕಾಶ್ ಆಕೆಯನ್ನು ತನ್ನ ಗುಡಿಸಲಿನ ಕಡೆಗೆ ಕರೆದೊಯ್ದಿದ್ದಾನೆ ಎಂದು ತಿಳಿಸಲಾಗಿತ್ತು. ಗುಡಿಸಲಿನಲ್ಲಿ ಸಂತ್ರಸ್ತೆಯ ಶವ ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ವಿಚಾರಣೆ ವೇಳೆ ಆರೋಪಿಯು ನಿರಪರಾಧಿ ಎಂದು ಹೇಳಿಕೊಂಡಿದ್ದು, ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು.

ಆರೋಪಿ ಜೈ ಪ್ರಕಾಶ್ ವಿರುದ್ಧ ಅವರನ್ನು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಪೋಕ್ಸೊ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆಗಸ್ಟ್ 2019 ರಲ್ಲಿ ವಿಚಾರಣಾ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಜೊತೆಗೆ  ಆರೋಪಿಯು ಅಸಹಾಯಕಳಾದ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಯಶಸ್ವಿಯಾಗಿದೆ ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...