Homeಮುಖಪುಟರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ಪತ್ರಕರ್ತೆಯು ರೈತ ಪ್ರತಿಭಟನೆ ಪರ ವರದಿ ಮಾಡುತ್ತಿದ್ದುದು ತನಗೆ ಕೋಪ ತರಿಸಿದ್ದರಿಂದ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ಆರೋಪಿ ಕಪಿಲ್ ವಿಯಾನ್ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಸ್ವತಂತ್ರ ಪತ್ರಕರ್ತೆ ಮತ್ತು ದಿ ವೈರ್‌ಗೆ ಆಗಾಗ್ಗೆ ಕೊಡುಗೆ ನೀಡುವ ರೋಹಿಣಿ ಸಿಂಗ್‌ಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಎಬಿವಿಪಿ ಜೊತೆ ಸಬಂಧವಿರುವ 26 ವರ್ಷದ ಕಾನೂನು ವಿದ್ಯಾರ್ಥಿ ಕಪಿಲ್ ವಿಯಾನ್ ಎಂಬಾತನನ್ನು ರಾಜಸ್ಥಾನ್ ಪೊಲೀಸರು ಬಂಧಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರೈತರ ಟ್ರಾಕ್ಟರ್ ರ‍್ಯಾಲಿ ಕುರಿತು ರೋಹಿಣಿ ಸಿಂಗ್ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಪಿಲ್ ವಿಯಾನ್ ರೋಹಿಣಿ ಅವರಿಗೆ ನೇರ ಸಂದೇಶ ಕಳುಹಿಸಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದ ರೋಹಿಣಿ ಸಿಂಗ್ ಉದಯಪುರದ ಉನ್ನತ ಪೊಲೀಸರು ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇದರ ಬೆನ್ನಲ್ಲೇ ತಕ್ಷಣ ಕ್ರಮ ಕೈಗೊಳ್ಳುವಂತೆ ಉದಯಪುರ ಐಜಿ ಮತ್ತು ಎಸ್‌ಪಿಗೆ ಗೆಹ್ಲೋಟ್ ನಿರ್ದೇಶನ ನೀಡಿದರು. ವಿಯಾನ್‌ನನ್ನು ಉದಯಪುರದ ಸೆಮಾರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಆತ ಬಿಜೆಪಿಯ ವಿದ್ಯಾರ್ಥಿ ವಿಭಾಗ ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜೊತೆ ಸಂಬಂಧ ಹೊಂದಿದ್ದಾನೆಂದು ಕಂಡುಬಂದಿದೆ.

ಉದಯಪುರ ವ್ಯಾಪ್ತಿಯ ಇನ್ಸ್ಪೆಕ್ಟರ್ ಜನರಲ್, ಸತ್ಯವೀರ್ ಸಿಂಗ್, ಕಪಿಲ್ ವಿಯಾನ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

“ನಮ್ಮ ತಂಡವು ಸೆಮರಿ ನಿವಾಸಿ ಕಪಿಲ್ ವಿಯಾನ್‌ನನ್ನು ಬಂಧಿಸಿದೆ. ಅವನು ಪತ್ರಕರ್ತೆ ರೋಹಿಣಿ ಸಿಂಗ್ ಅವರಿಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳನ್ನು ಕಳುಹಿಸುತ್ತಿದ್ದ” ಎಂದು ಐಜಿಪಿ ಟ್ವೀಟ್ ಮಾಡಿದ್ದಾರೆ.

ರೈತರ ರ‍್ಯಾಲಿಯ ಬಗ್ಗೆ ರೋಹಿಣಿ ಸಿಂಗ್ ವರದಿ ಮಾಡಿರುವುದು ತನಗೆ ಕೋಪ ತಂದಿತ್ತು. ಹಾಗಾಗಿ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ವಿಯಾನ್ ಪೊಲೀಸರಿಗೆ ತಿಳಿಸಿದ್ದಾನೆ.

ತ್ವರಿತ ಕ್ರಮ ಕೈಗೊಂಡಿದ್ದಾಗಿ ಪತ್ರಕರ್ತೆ ರೋಹಿಣಿ ಸಿಂಗ್ ರಾಜಸ್ಥಾನ ಸಿಎಂ ಮತ್ತು ಉದಯಪುರ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಭಿನ್ನಾಭಿಪ್ರಾಯವಿದ್ದ ಕಾರಣಕ್ಕೆ ಯಾರೂ ಯಾರಿಗೂ ಯಾವುದೇ ಬೆದರಿಕೆ ಹಾಕುವುದು ಸರಿಯಲ್ಲ. ಮಹಿಳೆಯರಿಗೆ ಸಮಾಜ ಮತ್ತು ಅಂತರ್ಜಾಲ ಎರಡೂ ಕಡೆ ರಕ್ಷಣೆ ಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರೈತರು ಪ್ರತಿಭಟನೆಗೆ ತಲುಪದಂತೆ ರೈಲನ್ನೇ ತಿರುಗಿಸಿದ ಕೇಂದ್ರ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...