Homeಮುಖಪುಟರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ಪತ್ರಕರ್ತೆಯು ರೈತ ಪ್ರತಿಭಟನೆ ಪರ ವರದಿ ಮಾಡುತ್ತಿದ್ದುದು ತನಗೆ ಕೋಪ ತರಿಸಿದ್ದರಿಂದ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ಆರೋಪಿ ಕಪಿಲ್ ವಿಯಾನ್ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಸ್ವತಂತ್ರ ಪತ್ರಕರ್ತೆ ಮತ್ತು ದಿ ವೈರ್‌ಗೆ ಆಗಾಗ್ಗೆ ಕೊಡುಗೆ ನೀಡುವ ರೋಹಿಣಿ ಸಿಂಗ್‌ಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಎಬಿವಿಪಿ ಜೊತೆ ಸಬಂಧವಿರುವ 26 ವರ್ಷದ ಕಾನೂನು ವಿದ್ಯಾರ್ಥಿ ಕಪಿಲ್ ವಿಯಾನ್ ಎಂಬಾತನನ್ನು ರಾಜಸ್ಥಾನ್ ಪೊಲೀಸರು ಬಂಧಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರೈತರ ಟ್ರಾಕ್ಟರ್ ರ‍್ಯಾಲಿ ಕುರಿತು ರೋಹಿಣಿ ಸಿಂಗ್ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಪಿಲ್ ವಿಯಾನ್ ರೋಹಿಣಿ ಅವರಿಗೆ ನೇರ ಸಂದೇಶ ಕಳುಹಿಸಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದ ರೋಹಿಣಿ ಸಿಂಗ್ ಉದಯಪುರದ ಉನ್ನತ ಪೊಲೀಸರು ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇದರ ಬೆನ್ನಲ್ಲೇ ತಕ್ಷಣ ಕ್ರಮ ಕೈಗೊಳ್ಳುವಂತೆ ಉದಯಪುರ ಐಜಿ ಮತ್ತು ಎಸ್‌ಪಿಗೆ ಗೆಹ್ಲೋಟ್ ನಿರ್ದೇಶನ ನೀಡಿದರು. ವಿಯಾನ್‌ನನ್ನು ಉದಯಪುರದ ಸೆಮಾರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಆತ ಬಿಜೆಪಿಯ ವಿದ್ಯಾರ್ಥಿ ವಿಭಾಗ ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜೊತೆ ಸಂಬಂಧ ಹೊಂದಿದ್ದಾನೆಂದು ಕಂಡುಬಂದಿದೆ.

ಉದಯಪುರ ವ್ಯಾಪ್ತಿಯ ಇನ್ಸ್ಪೆಕ್ಟರ್ ಜನರಲ್, ಸತ್ಯವೀರ್ ಸಿಂಗ್, ಕಪಿಲ್ ವಿಯಾನ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

“ನಮ್ಮ ತಂಡವು ಸೆಮರಿ ನಿವಾಸಿ ಕಪಿಲ್ ವಿಯಾನ್‌ನನ್ನು ಬಂಧಿಸಿದೆ. ಅವನು ಪತ್ರಕರ್ತೆ ರೋಹಿಣಿ ಸಿಂಗ್ ಅವರಿಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳನ್ನು ಕಳುಹಿಸುತ್ತಿದ್ದ” ಎಂದು ಐಜಿಪಿ ಟ್ವೀಟ್ ಮಾಡಿದ್ದಾರೆ.

ರೈತರ ರ‍್ಯಾಲಿಯ ಬಗ್ಗೆ ರೋಹಿಣಿ ಸಿಂಗ್ ವರದಿ ಮಾಡಿರುವುದು ತನಗೆ ಕೋಪ ತಂದಿತ್ತು. ಹಾಗಾಗಿ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ವಿಯಾನ್ ಪೊಲೀಸರಿಗೆ ತಿಳಿಸಿದ್ದಾನೆ.

ತ್ವರಿತ ಕ್ರಮ ಕೈಗೊಂಡಿದ್ದಾಗಿ ಪತ್ರಕರ್ತೆ ರೋಹಿಣಿ ಸಿಂಗ್ ರಾಜಸ್ಥಾನ ಸಿಎಂ ಮತ್ತು ಉದಯಪುರ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಭಿನ್ನಾಭಿಪ್ರಾಯವಿದ್ದ ಕಾರಣಕ್ಕೆ ಯಾರೂ ಯಾರಿಗೂ ಯಾವುದೇ ಬೆದರಿಕೆ ಹಾಕುವುದು ಸರಿಯಲ್ಲ. ಮಹಿಳೆಯರಿಗೆ ಸಮಾಜ ಮತ್ತು ಅಂತರ್ಜಾಲ ಎರಡೂ ಕಡೆ ರಕ್ಷಣೆ ಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರೈತರು ಪ್ರತಿಭಟನೆಗೆ ತಲುಪದಂತೆ ರೈಲನ್ನೇ ತಿರುಗಿಸಿದ ಕೇಂದ್ರ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...