Homeಮುಖಪುಟರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ಪತ್ರಕರ್ತೆಯು ರೈತ ಪ್ರತಿಭಟನೆ ಪರ ವರದಿ ಮಾಡುತ್ತಿದ್ದುದು ತನಗೆ ಕೋಪ ತರಿಸಿದ್ದರಿಂದ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ಆರೋಪಿ ಕಪಿಲ್ ವಿಯಾನ್ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಸ್ವತಂತ್ರ ಪತ್ರಕರ್ತೆ ಮತ್ತು ದಿ ವೈರ್‌ಗೆ ಆಗಾಗ್ಗೆ ಕೊಡುಗೆ ನೀಡುವ ರೋಹಿಣಿ ಸಿಂಗ್‌ಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಎಬಿವಿಪಿ ಜೊತೆ ಸಬಂಧವಿರುವ 26 ವರ್ಷದ ಕಾನೂನು ವಿದ್ಯಾರ್ಥಿ ಕಪಿಲ್ ವಿಯಾನ್ ಎಂಬಾತನನ್ನು ರಾಜಸ್ಥಾನ್ ಪೊಲೀಸರು ಬಂಧಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರೈತರ ಟ್ರಾಕ್ಟರ್ ರ‍್ಯಾಲಿ ಕುರಿತು ರೋಹಿಣಿ ಸಿಂಗ್ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಪಿಲ್ ವಿಯಾನ್ ರೋಹಿಣಿ ಅವರಿಗೆ ನೇರ ಸಂದೇಶ ಕಳುಹಿಸಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದ ರೋಹಿಣಿ ಸಿಂಗ್ ಉದಯಪುರದ ಉನ್ನತ ಪೊಲೀಸರು ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇದರ ಬೆನ್ನಲ್ಲೇ ತಕ್ಷಣ ಕ್ರಮ ಕೈಗೊಳ್ಳುವಂತೆ ಉದಯಪುರ ಐಜಿ ಮತ್ತು ಎಸ್‌ಪಿಗೆ ಗೆಹ್ಲೋಟ್ ನಿರ್ದೇಶನ ನೀಡಿದರು. ವಿಯಾನ್‌ನನ್ನು ಉದಯಪುರದ ಸೆಮಾರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಆತ ಬಿಜೆಪಿಯ ವಿದ್ಯಾರ್ಥಿ ವಿಭಾಗ ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜೊತೆ ಸಂಬಂಧ ಹೊಂದಿದ್ದಾನೆಂದು ಕಂಡುಬಂದಿದೆ.

ಉದಯಪುರ ವ್ಯಾಪ್ತಿಯ ಇನ್ಸ್ಪೆಕ್ಟರ್ ಜನರಲ್, ಸತ್ಯವೀರ್ ಸಿಂಗ್, ಕಪಿಲ್ ವಿಯಾನ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

“ನಮ್ಮ ತಂಡವು ಸೆಮರಿ ನಿವಾಸಿ ಕಪಿಲ್ ವಿಯಾನ್‌ನನ್ನು ಬಂಧಿಸಿದೆ. ಅವನು ಪತ್ರಕರ್ತೆ ರೋಹಿಣಿ ಸಿಂಗ್ ಅವರಿಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳನ್ನು ಕಳುಹಿಸುತ್ತಿದ್ದ” ಎಂದು ಐಜಿಪಿ ಟ್ವೀಟ್ ಮಾಡಿದ್ದಾರೆ.

ರೈತರ ರ‍್ಯಾಲಿಯ ಬಗ್ಗೆ ರೋಹಿಣಿ ಸಿಂಗ್ ವರದಿ ಮಾಡಿರುವುದು ತನಗೆ ಕೋಪ ತಂದಿತ್ತು. ಹಾಗಾಗಿ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ವಿಯಾನ್ ಪೊಲೀಸರಿಗೆ ತಿಳಿಸಿದ್ದಾನೆ.

ತ್ವರಿತ ಕ್ರಮ ಕೈಗೊಂಡಿದ್ದಾಗಿ ಪತ್ರಕರ್ತೆ ರೋಹಿಣಿ ಸಿಂಗ್ ರಾಜಸ್ಥಾನ ಸಿಎಂ ಮತ್ತು ಉದಯಪುರ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಭಿನ್ನಾಭಿಪ್ರಾಯವಿದ್ದ ಕಾರಣಕ್ಕೆ ಯಾರೂ ಯಾರಿಗೂ ಯಾವುದೇ ಬೆದರಿಕೆ ಹಾಕುವುದು ಸರಿಯಲ್ಲ. ಮಹಿಳೆಯರಿಗೆ ಸಮಾಜ ಮತ್ತು ಅಂತರ್ಜಾಲ ಎರಡೂ ಕಡೆ ರಕ್ಷಣೆ ಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರೈತರು ಪ್ರತಿಭಟನೆಗೆ ತಲುಪದಂತೆ ರೈಲನ್ನೇ ತಿರುಗಿಸಿದ ಕೇಂದ್ರ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...