Homeಕರ್ನಾಟಕಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಇಬ್ಬರು ಬಾಲಕಿಯರು ನೀಡಿದ ದೂರಿನ ಅನ್ವಯ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ.

- Advertisement -
- Advertisement -

“ಋತುಮತಿಯಾಗದ ಅಪ್ರಾಪ್ತ ಬಾಲಕಿಯ ಮೇಲೆ ಚಿತ್ರದುರ್ಗದ ಮರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಅತ್ಯಾಚಾರ ಎಸಗಿದ್ದಾರೆ” ಎಂದು ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗಾಗಲೇ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠಾಧೀಶರ ವಿರುದ್ಧ ಮತ್ತಷ್ಟು ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೇ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ದೂರು ನೀಡಲಾಗಿದ್ದು, ವಾರ್ಡನ್ ರಶ್ಮಿ ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ತಡರಾತ್ರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಿವಮೂರ್ತಿ ಮುರುಘಾ ಶರಣರು ಮೊದಲನೇ ಆರೋಪಿಯಾಗಿದ್ದಾರೆ. ವಾರ್ಡನ್ ರಶ್ಮಿ (2ನೇ ಆರೋಪಿ), ಬಸವಾದಿತ್ಯ (ಮೂರನೇ ಆರೋಪಿ), ಪರಮಶಿವಯ್ಯ (4ನೇ ಆರೋಪಿ) ಗಂಗಾಧರಯ್ಯ (5ನೇ ಆರೋಪಿ), ಮಹಾಲಿಂಗ (6ನೇ ಆರೋಪಿ), ಕರಿಬಸಪ್ಪ (7ನೇ ಆರೋಪಿ) ಇತರ ಆರೋಪಿಗಳಾಗಿದ್ದಾರೆ.

ಎಫ್‌ಐಆರ್‌ನಲ್ಲಿ ಇರುವುದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಬ್ಬರ ಪೈಕಿ ಒಬ್ಬ ಬಾಲಕಿಯು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಮುರುಘಾ ಮಠಾಧೀಶರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿರುವ ಬಾಲಕಿಯರಿಬ್ಬರ ತಾಯಿಯು ಆರ್ಥಿಕವಾಗಿ ಶಕ್ತರಲ್ಲದ ಕಾರಣ ತನ್ನಿಬ್ಬರು ಮಕ್ಕಳನ್ನೂ ಮಠದಲ್ಲಿನ ವಸತಿ ನಿಲಯಕ್ಕೆ ಸೇರಿಸಿದ್ದರು. ಈ ಮಕ್ಕಳಿಬ್ಬರು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಶರಣರ ಖಾಸಗಿ ಕೊಠಡಿಗೆ ಕಳಿಸಲಾಗುತ್ತಿತ್ತು. ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳಲಾಗುತ್ತಿತ್ತು. ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಅವರನ್ನು ಮುರುಘಾ ಶರಣರ ಸಹಾಯಕರು ಹೆದರಿಸುತ್ತಿದ್ದರು.

ಸಂತ್ರಸ್ತ ಮಕ್ಕಳ ತಾಯಿ ಘಟನೆಗಳನ್ನು ಹೀಗೆ ವಿವರಿಸಿದ್ದಾರೆ:

“ನನಗೆ ಗಂಡನ ಆಸರೆ ಸಿಗದ ಕಾರಣ ನಾನು, ನನ್ನಮಕ್ಕಳು ನನ್ನ ಪೋಷಕರ ಆಶ್ರಯದಲ್ಲಿದ್ದೇವೆ. ನನ್ನ ಪೋಷಕರು ಆರ್ಥಿಕ ಹಿಂದುಳಿದವರಾಗಿದ್ದು ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಾವು ಹಿಂದುಳಿದ ಜಾತಿಗೆ ಸೇರಿದವರಾಗಿರುತ್ತೇವೆ.”

“ನನ್ನ ಗಂಡ ತೊರೆದ ನಂತರ ನನಗೆ ಮಕ್ಕಳನ್ನು ಸಾಕಲು ತೊಂದರೆಯಾಗಿದ್ದರಿಂದ ನನ್ನಮಕ್ಕಳನ್ನು ಮುರುಘಾ ಮಠದ ಆಡಳಿತದಲ್ಲಿರುವ ಎಸ್‌ಜೆಎಂ ಕನ್ನಡ ಮಾಧ್ಯಮ ಶಾಲೆಗೆ 2016ರಲ್ಲಿ 3ನೇ ತರಗತಿ ಮತ್ತು 1ನೇ ತರಗತಿಗೆ ಸೇರಿಸಿ ಮಠದ ಆಶ್ರಯದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿರುವ ಬಸವ ಮಕ್ಕಳ ವಸತಿ ನಿಲಯದಲ್ಲಿ ಆಶ್ರಯಕ್ಕಾಗಿ ದಾಖಲಿಸಿರುತ್ತೇನೆ. ನನ್ನ ಮಕ್ಕಳು ಹಾಸ್ಟೆಲ್‌ನಲ್ಲಿರುತ್ತಿದ್ದರು.”

“ನನ್ನ ಮೊದಲನೇ ಮಗಳು 7ನೇ ತರಗತಿ ಓದುತ್ತಿರುವಾಗ ಅಂದರೆ 2019ರಿಂದ ಹಾಗೂ 2ನೇ ಮಗಳು ಸಹ ಓದುತ್ತಿರುವಾಗ ಕೋವಿಡ್ ರಜೆಯಲ್ಲಿದ್ದಾಗ 2020ರಲ್ಲಿ ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ವಾರ್ಡನ್ ರಶ್ಮಿ ಮುಖಾಂತರ ತಮ್ಮ ಖಾಸಗಿ ಕೋಣೆಗೆ ಕರೆಸಿಕೊಂಡು ಪ್ರಥಮವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ನನ್ನ ಮಕ್ಕಳು ನನಗೆ ತಿಳಿಸಿರುತ್ತಾರೆ.”

ಇದನ್ನೂ ಓದಿರಿ: ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

“ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ಅಂದಿನಿಂದಲೂ ಋತುಮತಿಯಾಗುವ ತನಕ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಲೈಂಗಿಕ ದೌರ್ಜನ್ಯ ಮಾಡಿರುತ್ತಾರೆ.”

“ವಾರ್ಡನ್ ರಶ್ಮಿ ಮಕ್ಕಳ ಮೇಲೆ ಒತ್ತಡ ತಂದು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಹೆದರಿಸಿ ಅವರುಗಳನ್ನು ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಯಾವುದಾದರೊಂದು ಕಾರಣ ನೀಡಿ ಕಳಿಸುತ್ತಿದ್ದಳು ಎಂದು ಮಕ್ಕಳು ನನಗೆ ತಿಳಿಸಿರುತ್ತಾರೆ. ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಮಕ್ಕಳು ಹೋಗಲು ಒಪ್ಪದಿದ್ದ ಪಕ್ಷದಲ್ಲಿ ಮುರುಘಾ ಮಠದ ಸಾಧಕರಾದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಇವರುಗಳು ಮಕ್ಕಳನ್ನು ಹೆದರಿಸಿ ಒತ್ತಾಯ ಮಾಡಿ ಕಳಿಸುತ್ತಿದ್ದರು.”

“ಸ್ವಾಮೀಜಿಯ ಅಸಿಸ್ಟೆಂಟ್ ಆಗಿರುವ ಮಹಾಲಿಂಗ ಹಾಗೂ ಅಡುಗೆ ಭಟ್ಟ ಕರಿಬಸಪ್ಪ ಇವರುಗಳು ಮಕ್ಕಳನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುವುದು ಹಾಗೂ ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳುವುದು ಮತ್ತು ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಹೆದರಿಸುವುದು ಮಾಡುತ್ತಿದ್ದರು” ಎಂದು ಬಾಲಕಿಯರ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...