Homeಕರ್ನಾಟಕಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಇಬ್ಬರು ಬಾಲಕಿಯರು ನೀಡಿದ ದೂರಿನ ಅನ್ವಯ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ.

- Advertisement -
- Advertisement -

“ಋತುಮತಿಯಾಗದ ಅಪ್ರಾಪ್ತ ಬಾಲಕಿಯ ಮೇಲೆ ಚಿತ್ರದುರ್ಗದ ಮರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಅತ್ಯಾಚಾರ ಎಸಗಿದ್ದಾರೆ” ಎಂದು ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗಾಗಲೇ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠಾಧೀಶರ ವಿರುದ್ಧ ಮತ್ತಷ್ಟು ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೇ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ದೂರು ನೀಡಲಾಗಿದ್ದು, ವಾರ್ಡನ್ ರಶ್ಮಿ ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ತಡರಾತ್ರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಿವಮೂರ್ತಿ ಮುರುಘಾ ಶರಣರು ಮೊದಲನೇ ಆರೋಪಿಯಾಗಿದ್ದಾರೆ. ವಾರ್ಡನ್ ರಶ್ಮಿ (2ನೇ ಆರೋಪಿ), ಬಸವಾದಿತ್ಯ (ಮೂರನೇ ಆರೋಪಿ), ಪರಮಶಿವಯ್ಯ (4ನೇ ಆರೋಪಿ) ಗಂಗಾಧರಯ್ಯ (5ನೇ ಆರೋಪಿ), ಮಹಾಲಿಂಗ (6ನೇ ಆರೋಪಿ), ಕರಿಬಸಪ್ಪ (7ನೇ ಆರೋಪಿ) ಇತರ ಆರೋಪಿಗಳಾಗಿದ್ದಾರೆ.

ಎಫ್‌ಐಆರ್‌ನಲ್ಲಿ ಇರುವುದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಬ್ಬರ ಪೈಕಿ ಒಬ್ಬ ಬಾಲಕಿಯು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಮುರುಘಾ ಮಠಾಧೀಶರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿರುವ ಬಾಲಕಿಯರಿಬ್ಬರ ತಾಯಿಯು ಆರ್ಥಿಕವಾಗಿ ಶಕ್ತರಲ್ಲದ ಕಾರಣ ತನ್ನಿಬ್ಬರು ಮಕ್ಕಳನ್ನೂ ಮಠದಲ್ಲಿನ ವಸತಿ ನಿಲಯಕ್ಕೆ ಸೇರಿಸಿದ್ದರು. ಈ ಮಕ್ಕಳಿಬ್ಬರು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಶರಣರ ಖಾಸಗಿ ಕೊಠಡಿಗೆ ಕಳಿಸಲಾಗುತ್ತಿತ್ತು. ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳಲಾಗುತ್ತಿತ್ತು. ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಅವರನ್ನು ಮುರುಘಾ ಶರಣರ ಸಹಾಯಕರು ಹೆದರಿಸುತ್ತಿದ್ದರು.

ಸಂತ್ರಸ್ತ ಮಕ್ಕಳ ತಾಯಿ ಘಟನೆಗಳನ್ನು ಹೀಗೆ ವಿವರಿಸಿದ್ದಾರೆ:

“ನನಗೆ ಗಂಡನ ಆಸರೆ ಸಿಗದ ಕಾರಣ ನಾನು, ನನ್ನಮಕ್ಕಳು ನನ್ನ ಪೋಷಕರ ಆಶ್ರಯದಲ್ಲಿದ್ದೇವೆ. ನನ್ನ ಪೋಷಕರು ಆರ್ಥಿಕ ಹಿಂದುಳಿದವರಾಗಿದ್ದು ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಾವು ಹಿಂದುಳಿದ ಜಾತಿಗೆ ಸೇರಿದವರಾಗಿರುತ್ತೇವೆ.”

“ನನ್ನ ಗಂಡ ತೊರೆದ ನಂತರ ನನಗೆ ಮಕ್ಕಳನ್ನು ಸಾಕಲು ತೊಂದರೆಯಾಗಿದ್ದರಿಂದ ನನ್ನಮಕ್ಕಳನ್ನು ಮುರುಘಾ ಮಠದ ಆಡಳಿತದಲ್ಲಿರುವ ಎಸ್‌ಜೆಎಂ ಕನ್ನಡ ಮಾಧ್ಯಮ ಶಾಲೆಗೆ 2016ರಲ್ಲಿ 3ನೇ ತರಗತಿ ಮತ್ತು 1ನೇ ತರಗತಿಗೆ ಸೇರಿಸಿ ಮಠದ ಆಶ್ರಯದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿರುವ ಬಸವ ಮಕ್ಕಳ ವಸತಿ ನಿಲಯದಲ್ಲಿ ಆಶ್ರಯಕ್ಕಾಗಿ ದಾಖಲಿಸಿರುತ್ತೇನೆ. ನನ್ನ ಮಕ್ಕಳು ಹಾಸ್ಟೆಲ್‌ನಲ್ಲಿರುತ್ತಿದ್ದರು.”

“ನನ್ನ ಮೊದಲನೇ ಮಗಳು 7ನೇ ತರಗತಿ ಓದುತ್ತಿರುವಾಗ ಅಂದರೆ 2019ರಿಂದ ಹಾಗೂ 2ನೇ ಮಗಳು ಸಹ ಓದುತ್ತಿರುವಾಗ ಕೋವಿಡ್ ರಜೆಯಲ್ಲಿದ್ದಾಗ 2020ರಲ್ಲಿ ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ವಾರ್ಡನ್ ರಶ್ಮಿ ಮುಖಾಂತರ ತಮ್ಮ ಖಾಸಗಿ ಕೋಣೆಗೆ ಕರೆಸಿಕೊಂಡು ಪ್ರಥಮವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ನನ್ನ ಮಕ್ಕಳು ನನಗೆ ತಿಳಿಸಿರುತ್ತಾರೆ.”

ಇದನ್ನೂ ಓದಿರಿ: ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

“ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ಅಂದಿನಿಂದಲೂ ಋತುಮತಿಯಾಗುವ ತನಕ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಲೈಂಗಿಕ ದೌರ್ಜನ್ಯ ಮಾಡಿರುತ್ತಾರೆ.”

“ವಾರ್ಡನ್ ರಶ್ಮಿ ಮಕ್ಕಳ ಮೇಲೆ ಒತ್ತಡ ತಂದು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಹೆದರಿಸಿ ಅವರುಗಳನ್ನು ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಯಾವುದಾದರೊಂದು ಕಾರಣ ನೀಡಿ ಕಳಿಸುತ್ತಿದ್ದಳು ಎಂದು ಮಕ್ಕಳು ನನಗೆ ತಿಳಿಸಿರುತ್ತಾರೆ. ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಮಕ್ಕಳು ಹೋಗಲು ಒಪ್ಪದಿದ್ದ ಪಕ್ಷದಲ್ಲಿ ಮುರುಘಾ ಮಠದ ಸಾಧಕರಾದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಇವರುಗಳು ಮಕ್ಕಳನ್ನು ಹೆದರಿಸಿ ಒತ್ತಾಯ ಮಾಡಿ ಕಳಿಸುತ್ತಿದ್ದರು.”

“ಸ್ವಾಮೀಜಿಯ ಅಸಿಸ್ಟೆಂಟ್ ಆಗಿರುವ ಮಹಾಲಿಂಗ ಹಾಗೂ ಅಡುಗೆ ಭಟ್ಟ ಕರಿಬಸಪ್ಪ ಇವರುಗಳು ಮಕ್ಕಳನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುವುದು ಹಾಗೂ ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳುವುದು ಮತ್ತು ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಹೆದರಿಸುವುದು ಮಾಡುತ್ತಿದ್ದರು” ಎಂದು ಬಾಲಕಿಯರ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...