Homeಕರ್ನಾಟಕಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಇಬ್ಬರು ಬಾಲಕಿಯರು ನೀಡಿದ ದೂರಿನ ಅನ್ವಯ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ.

- Advertisement -
- Advertisement -

“ಋತುಮತಿಯಾಗದ ಅಪ್ರಾಪ್ತ ಬಾಲಕಿಯ ಮೇಲೆ ಚಿತ್ರದುರ್ಗದ ಮರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಅತ್ಯಾಚಾರ ಎಸಗಿದ್ದಾರೆ” ಎಂದು ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗಾಗಲೇ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠಾಧೀಶರ ವಿರುದ್ಧ ಮತ್ತಷ್ಟು ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೇ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ದೂರು ನೀಡಲಾಗಿದ್ದು, ವಾರ್ಡನ್ ರಶ್ಮಿ ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ತಡರಾತ್ರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಿವಮೂರ್ತಿ ಮುರುಘಾ ಶರಣರು ಮೊದಲನೇ ಆರೋಪಿಯಾಗಿದ್ದಾರೆ. ವಾರ್ಡನ್ ರಶ್ಮಿ (2ನೇ ಆರೋಪಿ), ಬಸವಾದಿತ್ಯ (ಮೂರನೇ ಆರೋಪಿ), ಪರಮಶಿವಯ್ಯ (4ನೇ ಆರೋಪಿ) ಗಂಗಾಧರಯ್ಯ (5ನೇ ಆರೋಪಿ), ಮಹಾಲಿಂಗ (6ನೇ ಆರೋಪಿ), ಕರಿಬಸಪ್ಪ (7ನೇ ಆರೋಪಿ) ಇತರ ಆರೋಪಿಗಳಾಗಿದ್ದಾರೆ.

ಎಫ್‌ಐಆರ್‌ನಲ್ಲಿ ಇರುವುದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಬ್ಬರ ಪೈಕಿ ಒಬ್ಬ ಬಾಲಕಿಯು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಮುರುಘಾ ಮಠಾಧೀಶರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿರುವ ಬಾಲಕಿಯರಿಬ್ಬರ ತಾಯಿಯು ಆರ್ಥಿಕವಾಗಿ ಶಕ್ತರಲ್ಲದ ಕಾರಣ ತನ್ನಿಬ್ಬರು ಮಕ್ಕಳನ್ನೂ ಮಠದಲ್ಲಿನ ವಸತಿ ನಿಲಯಕ್ಕೆ ಸೇರಿಸಿದ್ದರು. ಈ ಮಕ್ಕಳಿಬ್ಬರು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಶರಣರ ಖಾಸಗಿ ಕೊಠಡಿಗೆ ಕಳಿಸಲಾಗುತ್ತಿತ್ತು. ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳಲಾಗುತ್ತಿತ್ತು. ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಅವರನ್ನು ಮುರುಘಾ ಶರಣರ ಸಹಾಯಕರು ಹೆದರಿಸುತ್ತಿದ್ದರು.

ಸಂತ್ರಸ್ತ ಮಕ್ಕಳ ತಾಯಿ ಘಟನೆಗಳನ್ನು ಹೀಗೆ ವಿವರಿಸಿದ್ದಾರೆ:

“ನನಗೆ ಗಂಡನ ಆಸರೆ ಸಿಗದ ಕಾರಣ ನಾನು, ನನ್ನಮಕ್ಕಳು ನನ್ನ ಪೋಷಕರ ಆಶ್ರಯದಲ್ಲಿದ್ದೇವೆ. ನನ್ನ ಪೋಷಕರು ಆರ್ಥಿಕ ಹಿಂದುಳಿದವರಾಗಿದ್ದು ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಾವು ಹಿಂದುಳಿದ ಜಾತಿಗೆ ಸೇರಿದವರಾಗಿರುತ್ತೇವೆ.”

“ನನ್ನ ಗಂಡ ತೊರೆದ ನಂತರ ನನಗೆ ಮಕ್ಕಳನ್ನು ಸಾಕಲು ತೊಂದರೆಯಾಗಿದ್ದರಿಂದ ನನ್ನಮಕ್ಕಳನ್ನು ಮುರುಘಾ ಮಠದ ಆಡಳಿತದಲ್ಲಿರುವ ಎಸ್‌ಜೆಎಂ ಕನ್ನಡ ಮಾಧ್ಯಮ ಶಾಲೆಗೆ 2016ರಲ್ಲಿ 3ನೇ ತರಗತಿ ಮತ್ತು 1ನೇ ತರಗತಿಗೆ ಸೇರಿಸಿ ಮಠದ ಆಶ್ರಯದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿರುವ ಬಸವ ಮಕ್ಕಳ ವಸತಿ ನಿಲಯದಲ್ಲಿ ಆಶ್ರಯಕ್ಕಾಗಿ ದಾಖಲಿಸಿರುತ್ತೇನೆ. ನನ್ನ ಮಕ್ಕಳು ಹಾಸ್ಟೆಲ್‌ನಲ್ಲಿರುತ್ತಿದ್ದರು.”

“ನನ್ನ ಮೊದಲನೇ ಮಗಳು 7ನೇ ತರಗತಿ ಓದುತ್ತಿರುವಾಗ ಅಂದರೆ 2019ರಿಂದ ಹಾಗೂ 2ನೇ ಮಗಳು ಸಹ ಓದುತ್ತಿರುವಾಗ ಕೋವಿಡ್ ರಜೆಯಲ್ಲಿದ್ದಾಗ 2020ರಲ್ಲಿ ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ವಾರ್ಡನ್ ರಶ್ಮಿ ಮುಖಾಂತರ ತಮ್ಮ ಖಾಸಗಿ ಕೋಣೆಗೆ ಕರೆಸಿಕೊಂಡು ಪ್ರಥಮವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ನನ್ನ ಮಕ್ಕಳು ನನಗೆ ತಿಳಿಸಿರುತ್ತಾರೆ.”

ಇದನ್ನೂ ಓದಿರಿ: ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

“ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ಅಂದಿನಿಂದಲೂ ಋತುಮತಿಯಾಗುವ ತನಕ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಲೈಂಗಿಕ ದೌರ್ಜನ್ಯ ಮಾಡಿರುತ್ತಾರೆ.”

“ವಾರ್ಡನ್ ರಶ್ಮಿ ಮಕ್ಕಳ ಮೇಲೆ ಒತ್ತಡ ತಂದು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಹೆದರಿಸಿ ಅವರುಗಳನ್ನು ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಯಾವುದಾದರೊಂದು ಕಾರಣ ನೀಡಿ ಕಳಿಸುತ್ತಿದ್ದಳು ಎಂದು ಮಕ್ಕಳು ನನಗೆ ತಿಳಿಸಿರುತ್ತಾರೆ. ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಮಕ್ಕಳು ಹೋಗಲು ಒಪ್ಪದಿದ್ದ ಪಕ್ಷದಲ್ಲಿ ಮುರುಘಾ ಮಠದ ಸಾಧಕರಾದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಇವರುಗಳು ಮಕ್ಕಳನ್ನು ಹೆದರಿಸಿ ಒತ್ತಾಯ ಮಾಡಿ ಕಳಿಸುತ್ತಿದ್ದರು.”

“ಸ್ವಾಮೀಜಿಯ ಅಸಿಸ್ಟೆಂಟ್ ಆಗಿರುವ ಮಹಾಲಿಂಗ ಹಾಗೂ ಅಡುಗೆ ಭಟ್ಟ ಕರಿಬಸಪ್ಪ ಇವರುಗಳು ಮಕ್ಕಳನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುವುದು ಹಾಗೂ ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳುವುದು ಮತ್ತು ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಹೆದರಿಸುವುದು ಮಾಡುತ್ತಿದ್ದರು” ಎಂದು ಬಾಲಕಿಯರ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...