Homeಕರ್ನಾಟಕಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಇಬ್ಬರು ಬಾಲಕಿಯರು ನೀಡಿದ ದೂರಿನ ಅನ್ವಯ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ.

- Advertisement -
- Advertisement -

“ಋತುಮತಿಯಾಗದ ಅಪ್ರಾಪ್ತ ಬಾಲಕಿಯ ಮೇಲೆ ಚಿತ್ರದುರ್ಗದ ಮರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಅತ್ಯಾಚಾರ ಎಸಗಿದ್ದಾರೆ” ಎಂದು ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗಾಗಲೇ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠಾಧೀಶರ ವಿರುದ್ಧ ಮತ್ತಷ್ಟು ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೇ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ದೂರು ನೀಡಲಾಗಿದ್ದು, ವಾರ್ಡನ್ ರಶ್ಮಿ ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ತಡರಾತ್ರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಿವಮೂರ್ತಿ ಮುರುಘಾ ಶರಣರು ಮೊದಲನೇ ಆರೋಪಿಯಾಗಿದ್ದಾರೆ. ವಾರ್ಡನ್ ರಶ್ಮಿ (2ನೇ ಆರೋಪಿ), ಬಸವಾದಿತ್ಯ (ಮೂರನೇ ಆರೋಪಿ), ಪರಮಶಿವಯ್ಯ (4ನೇ ಆರೋಪಿ) ಗಂಗಾಧರಯ್ಯ (5ನೇ ಆರೋಪಿ), ಮಹಾಲಿಂಗ (6ನೇ ಆರೋಪಿ), ಕರಿಬಸಪ್ಪ (7ನೇ ಆರೋಪಿ) ಇತರ ಆರೋಪಿಗಳಾಗಿದ್ದಾರೆ.

ಎಫ್‌ಐಆರ್‌ನಲ್ಲಿ ಇರುವುದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಬ್ಬರ ಪೈಕಿ ಒಬ್ಬ ಬಾಲಕಿಯು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಮುರುಘಾ ಮಠಾಧೀಶರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿರುವ ಬಾಲಕಿಯರಿಬ್ಬರ ತಾಯಿಯು ಆರ್ಥಿಕವಾಗಿ ಶಕ್ತರಲ್ಲದ ಕಾರಣ ತನ್ನಿಬ್ಬರು ಮಕ್ಕಳನ್ನೂ ಮಠದಲ್ಲಿನ ವಸತಿ ನಿಲಯಕ್ಕೆ ಸೇರಿಸಿದ್ದರು. ಈ ಮಕ್ಕಳಿಬ್ಬರು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಶರಣರ ಖಾಸಗಿ ಕೊಠಡಿಗೆ ಕಳಿಸಲಾಗುತ್ತಿತ್ತು. ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳಲಾಗುತ್ತಿತ್ತು. ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಅವರನ್ನು ಮುರುಘಾ ಶರಣರ ಸಹಾಯಕರು ಹೆದರಿಸುತ್ತಿದ್ದರು.

ಸಂತ್ರಸ್ತ ಮಕ್ಕಳ ತಾಯಿ ಘಟನೆಗಳನ್ನು ಹೀಗೆ ವಿವರಿಸಿದ್ದಾರೆ:

“ನನಗೆ ಗಂಡನ ಆಸರೆ ಸಿಗದ ಕಾರಣ ನಾನು, ನನ್ನಮಕ್ಕಳು ನನ್ನ ಪೋಷಕರ ಆಶ್ರಯದಲ್ಲಿದ್ದೇವೆ. ನನ್ನ ಪೋಷಕರು ಆರ್ಥಿಕ ಹಿಂದುಳಿದವರಾಗಿದ್ದು ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಾವು ಹಿಂದುಳಿದ ಜಾತಿಗೆ ಸೇರಿದವರಾಗಿರುತ್ತೇವೆ.”

“ನನ್ನ ಗಂಡ ತೊರೆದ ನಂತರ ನನಗೆ ಮಕ್ಕಳನ್ನು ಸಾಕಲು ತೊಂದರೆಯಾಗಿದ್ದರಿಂದ ನನ್ನಮಕ್ಕಳನ್ನು ಮುರುಘಾ ಮಠದ ಆಡಳಿತದಲ್ಲಿರುವ ಎಸ್‌ಜೆಎಂ ಕನ್ನಡ ಮಾಧ್ಯಮ ಶಾಲೆಗೆ 2016ರಲ್ಲಿ 3ನೇ ತರಗತಿ ಮತ್ತು 1ನೇ ತರಗತಿಗೆ ಸೇರಿಸಿ ಮಠದ ಆಶ್ರಯದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿರುವ ಬಸವ ಮಕ್ಕಳ ವಸತಿ ನಿಲಯದಲ್ಲಿ ಆಶ್ರಯಕ್ಕಾಗಿ ದಾಖಲಿಸಿರುತ್ತೇನೆ. ನನ್ನ ಮಕ್ಕಳು ಹಾಸ್ಟೆಲ್‌ನಲ್ಲಿರುತ್ತಿದ್ದರು.”

“ನನ್ನ ಮೊದಲನೇ ಮಗಳು 7ನೇ ತರಗತಿ ಓದುತ್ತಿರುವಾಗ ಅಂದರೆ 2019ರಿಂದ ಹಾಗೂ 2ನೇ ಮಗಳು ಸಹ ಓದುತ್ತಿರುವಾಗ ಕೋವಿಡ್ ರಜೆಯಲ್ಲಿದ್ದಾಗ 2020ರಲ್ಲಿ ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ವಾರ್ಡನ್ ರಶ್ಮಿ ಮುಖಾಂತರ ತಮ್ಮ ಖಾಸಗಿ ಕೋಣೆಗೆ ಕರೆಸಿಕೊಂಡು ಪ್ರಥಮವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ನನ್ನ ಮಕ್ಕಳು ನನಗೆ ತಿಳಿಸಿರುತ್ತಾರೆ.”

ಇದನ್ನೂ ಓದಿರಿ: ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

“ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ಅಂದಿನಿಂದಲೂ ಋತುಮತಿಯಾಗುವ ತನಕ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಲೈಂಗಿಕ ದೌರ್ಜನ್ಯ ಮಾಡಿರುತ್ತಾರೆ.”

“ವಾರ್ಡನ್ ರಶ್ಮಿ ಮಕ್ಕಳ ಮೇಲೆ ಒತ್ತಡ ತಂದು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಹೆದರಿಸಿ ಅವರುಗಳನ್ನು ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಯಾವುದಾದರೊಂದು ಕಾರಣ ನೀಡಿ ಕಳಿಸುತ್ತಿದ್ದಳು ಎಂದು ಮಕ್ಕಳು ನನಗೆ ತಿಳಿಸಿರುತ್ತಾರೆ. ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಮಕ್ಕಳು ಹೋಗಲು ಒಪ್ಪದಿದ್ದ ಪಕ್ಷದಲ್ಲಿ ಮುರುಘಾ ಮಠದ ಸಾಧಕರಾದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಇವರುಗಳು ಮಕ್ಕಳನ್ನು ಹೆದರಿಸಿ ಒತ್ತಾಯ ಮಾಡಿ ಕಳಿಸುತ್ತಿದ್ದರು.”

“ಸ್ವಾಮೀಜಿಯ ಅಸಿಸ್ಟೆಂಟ್ ಆಗಿರುವ ಮಹಾಲಿಂಗ ಹಾಗೂ ಅಡುಗೆ ಭಟ್ಟ ಕರಿಬಸಪ್ಪ ಇವರುಗಳು ಮಕ್ಕಳನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುವುದು ಹಾಗೂ ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳುವುದು ಮತ್ತು ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಹೆದರಿಸುವುದು ಮಾಡುತ್ತಿದ್ದರು” ಎಂದು ಬಾಲಕಿಯರ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....