Homeಮುಖಪುಟಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ಅತ್ಯಾಚಾರಕ್ಕೊಳಗಾದ ಕಾರಣ ಆತ್ಮಹತ್ಯೆಗೀಡಾಗಿದ್ದ ಬಾಲಕಿಯ ಶವವನ್ನು ಎರಡು ತಿಂಗಳ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

- Advertisement -
- Advertisement -

ಛತ್ತೀಸ್‌‌ಗಡ್‌‌ನ ಕೊಂಡಗಾಂವ್ ಜಿಲ್ಲೆಯಲ್ಲಿ ಐದು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೊಳಪಟ್ಟು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಎಫ್‌ಐಆರ್‌‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದಕ್ಕೆ ಬಾಲಕಿಯ ತಂದೆ ಕೂಡಾ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ ನಂತರ FIR ದಾಖಲಿಸಿದ ಪೊಲೀಸರು, ಬಾಲಕಿಯ ದೇಹವನ್ನು ಎರಡು ತಿಂಗಳ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ಟೋಬರ್ 7 ರಂದು ಬಾಲಕಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಜುಲೈ 19 ರಂದು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮರುದಿನ ಆಕೆ ಆತ್ಮಹತ್ಯೆ ಮಾಡಿಕೊಂಡು ತನ್ನ ಪ್ರಾಣ ಕಳೆದುಕೊಂಡಿದ್ದಾರೆ. ಕುಟುಂಬ ಸದಸ್ಯರು ಬಾಲಕಿಯ ಶವವನ್ನು ಅವರ ಹಳ್ಳಿಯ ಹೊರವಲಯದಲ್ಲಿ ಸಮಾಧಿ ಮಾಡಿದ್ದರು.

ಇದನ್ನೂ ಓದಿ: ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ಘಟನೆ ನಡೆದ ಸಮಯದಲ್ಲಿ ತಮಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದು, ಕೆಲವು ಸ್ಥಳೀಯವಾಗಿ ವರದಿಗಳು ಪ್ರಕಟವಾದ ನಂತರ ಗೊತ್ತಾಗಿದೆ ಎಂದಿದ್ದಾರೆ. ಆದರೆ, ಸಂತ್ರಸ್ತೆಯ ಚಿಕ್ಕಪ್ಪ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೆ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಪೊಲೀಸರು ಮೂವರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹಾಗೆಯೇ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯ ತಂದೆ ಅಕ್ಟೋಬರ್ 6 ರಂದು ವಿಷ ಸೇವಿಸಿದ್ದರು, ಆದರೆ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಪಿಟಿಐ ಜೊತೆ ಮಾತನಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತರ್ ರೇಂಜ್) ಸುಂದರರಾಜ್ ಪಿ., “ಧನೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ಪಡೆದ ನಂತರ ಕೊಂಡಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳು ಬುಧವಾರ ಅಲ್ಲಿಗೆ ತೆರಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

“ಬಾಲಕಿಯು ಜುಲೈ 19 ರಂದು ಹತ್ತಿರದ ಕನಗಾಂವ್ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ವಿವಾಹ ಸಮಾರಂಭಕ್ಕೆ ಹೋಗಿದ್ದರು. ಅದೇ ರಾತ್ರಿ 11 ಗಂಟೆ ಸುಮಾರಿಗೆ, ಕನಗಾಂವ್‌ನ ಇಬ್ಬರು ಹುಡುಗರು ಆಕೆಯನ್ನು ಹತ್ತಿರದ ಕಾಡಿಗೆ ಎಳೆದೊಯ್ದ, ಅಲ್ಲಿ ಬಾಲಕಿಯ ಮೇಲೆ ಐದು ಜನರಿಂದ ಅತ್ಯಾಚಾರವೆಸಗಿದ್ದಾರೆ” ಎಂದು ಸಂತ್ರಸ್ಥೆಯ ಕುಟುಂಬ ಸದಸ್ಯರೊಬ್ಬರು ಹೇಳಿದ್ದಾರೆ.

ಇದಾಗಿ ಮರುದಿನ ಬೆಳಿಗ್ಗೆ, ಬಾಲಕಿ ಯಾರಿಗೂ ತಿಳಿಸದೆ ಮನೆಯಿಂದ ತೆರಳಿ, ಆತ್ಮಹತ್ಯೆ ಮಾಡಿಕೊಂಡಿದ್ದರು.

“ಬುಧವಾರ ಪೊಲೀಸ್ ತಂಡ ಮತ್ತು ತಹಶೀಲ್ದಾರ್ ಅವರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸಮಾಧಿಯಿಂದ ಹೊರತೆಗೆಯಲಾಯಿತು. ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ.

ನನ್ನ ಸಹೋದರನ ಮಗಳ ಮೇಲೆ ಕನಗಾಂವ್‌‌ನಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೊಳಪಡಿಸಿದ್ದನ್ನು ಇಬ್ಬರು ಸ್ಥಳೀಯ ಹುಡುಗರು ಬಾಲಕಿಯು ಆತ್ಮಹತ್ಯೆ ಮಾಡಿಕೊಂಡ ನಂತರ ಹೇಳಿದ್ದರು. ಇದರ ನಂತರ ದೂರು ನೀಡಿದ್ದರೂ ಪೊಲೀಸರು ಎಫ್‌‌ಐಆರ್‌‌ ದಾಖಲಿಸಿಲ್ಲ ಎಂದು ಬಾಲಕಿಯ ಚಿಕ್ಕಪ್ಪ ಆರೋಪಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...