Homeಮುಖಪುಟಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ಅತ್ಯಾಚಾರಕ್ಕೊಳಗಾದ ಕಾರಣ ಆತ್ಮಹತ್ಯೆಗೀಡಾಗಿದ್ದ ಬಾಲಕಿಯ ಶವವನ್ನು ಎರಡು ತಿಂಗಳ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

- Advertisement -
- Advertisement -

ಛತ್ತೀಸ್‌‌ಗಡ್‌‌ನ ಕೊಂಡಗಾಂವ್ ಜಿಲ್ಲೆಯಲ್ಲಿ ಐದು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೊಳಪಟ್ಟು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಎಫ್‌ಐಆರ್‌‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದಕ್ಕೆ ಬಾಲಕಿಯ ತಂದೆ ಕೂಡಾ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ ನಂತರ FIR ದಾಖಲಿಸಿದ ಪೊಲೀಸರು, ಬಾಲಕಿಯ ದೇಹವನ್ನು ಎರಡು ತಿಂಗಳ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ಟೋಬರ್ 7 ರಂದು ಬಾಲಕಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಜುಲೈ 19 ರಂದು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮರುದಿನ ಆಕೆ ಆತ್ಮಹತ್ಯೆ ಮಾಡಿಕೊಂಡು ತನ್ನ ಪ್ರಾಣ ಕಳೆದುಕೊಂಡಿದ್ದಾರೆ. ಕುಟುಂಬ ಸದಸ್ಯರು ಬಾಲಕಿಯ ಶವವನ್ನು ಅವರ ಹಳ್ಳಿಯ ಹೊರವಲಯದಲ್ಲಿ ಸಮಾಧಿ ಮಾಡಿದ್ದರು.

ಇದನ್ನೂ ಓದಿ: ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ಘಟನೆ ನಡೆದ ಸಮಯದಲ್ಲಿ ತಮಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದು, ಕೆಲವು ಸ್ಥಳೀಯವಾಗಿ ವರದಿಗಳು ಪ್ರಕಟವಾದ ನಂತರ ಗೊತ್ತಾಗಿದೆ ಎಂದಿದ್ದಾರೆ. ಆದರೆ, ಸಂತ್ರಸ್ತೆಯ ಚಿಕ್ಕಪ್ಪ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೆ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಪೊಲೀಸರು ಮೂವರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹಾಗೆಯೇ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯ ತಂದೆ ಅಕ್ಟೋಬರ್ 6 ರಂದು ವಿಷ ಸೇವಿಸಿದ್ದರು, ಆದರೆ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಪಿಟಿಐ ಜೊತೆ ಮಾತನಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತರ್ ರೇಂಜ್) ಸುಂದರರಾಜ್ ಪಿ., “ಧನೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ಪಡೆದ ನಂತರ ಕೊಂಡಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳು ಬುಧವಾರ ಅಲ್ಲಿಗೆ ತೆರಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

“ಬಾಲಕಿಯು ಜುಲೈ 19 ರಂದು ಹತ್ತಿರದ ಕನಗಾಂವ್ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ವಿವಾಹ ಸಮಾರಂಭಕ್ಕೆ ಹೋಗಿದ್ದರು. ಅದೇ ರಾತ್ರಿ 11 ಗಂಟೆ ಸುಮಾರಿಗೆ, ಕನಗಾಂವ್‌ನ ಇಬ್ಬರು ಹುಡುಗರು ಆಕೆಯನ್ನು ಹತ್ತಿರದ ಕಾಡಿಗೆ ಎಳೆದೊಯ್ದ, ಅಲ್ಲಿ ಬಾಲಕಿಯ ಮೇಲೆ ಐದು ಜನರಿಂದ ಅತ್ಯಾಚಾರವೆಸಗಿದ್ದಾರೆ” ಎಂದು ಸಂತ್ರಸ್ಥೆಯ ಕುಟುಂಬ ಸದಸ್ಯರೊಬ್ಬರು ಹೇಳಿದ್ದಾರೆ.

ಇದಾಗಿ ಮರುದಿನ ಬೆಳಿಗ್ಗೆ, ಬಾಲಕಿ ಯಾರಿಗೂ ತಿಳಿಸದೆ ಮನೆಯಿಂದ ತೆರಳಿ, ಆತ್ಮಹತ್ಯೆ ಮಾಡಿಕೊಂಡಿದ್ದರು.

“ಬುಧವಾರ ಪೊಲೀಸ್ ತಂಡ ಮತ್ತು ತಹಶೀಲ್ದಾರ್ ಅವರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸಮಾಧಿಯಿಂದ ಹೊರತೆಗೆಯಲಾಯಿತು. ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ.

ನನ್ನ ಸಹೋದರನ ಮಗಳ ಮೇಲೆ ಕನಗಾಂವ್‌‌ನಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೊಳಪಡಿಸಿದ್ದನ್ನು ಇಬ್ಬರು ಸ್ಥಳೀಯ ಹುಡುಗರು ಬಾಲಕಿಯು ಆತ್ಮಹತ್ಯೆ ಮಾಡಿಕೊಂಡ ನಂತರ ಹೇಳಿದ್ದರು. ಇದರ ನಂತರ ದೂರು ನೀಡಿದ್ದರೂ ಪೊಲೀಸರು ಎಫ್‌‌ಐಆರ್‌‌ ದಾಖಲಿಸಿಲ್ಲ ಎಂದು ಬಾಲಕಿಯ ಚಿಕ್ಕಪ್ಪ ಆರೋಪಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...