Homeಮುಖಪುಟಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ ಆರೋಪ: ಆರು ಜನರ ಬಂಧನ, ಉಪ ಜೈಲರ್ ವಿರುದ್ಧ...

ಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ ಆರೋಪ: ಆರು ಜನರ ಬಂಧನ, ಉಪ ಜೈಲರ್ ವಿರುದ್ಧ ಅಪಹರಣ ಕೇಸ್

- Advertisement -
- Advertisement -

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ 17 ವರ್ಷದ ಬಾಲಕಿಯೊಬ್ಬಳು ಎರಡು ದಿನಗಳಲ್ಲಿ ನಾಲ್ವರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಉಪ ಜೈಲರ್ ಅಪಹರಿಸಿ ಹೋಟೆಲ್ ಕೋಣೆಯಲ್ಲಿ ಬಂಧಿಸಿಟ್ಟಿದ್ದರು ಎಂದು ಆರೋಪಿಸಿದ್ದಾಳೆ. ಈ ಸಂಬಂಧ ಹಲವರ ಬಂಧನವಾಗಿದ್ದು, ತನಿಖೆ ಮುಂದುವರಿದಿದೆ.

ಏಪ್ರಿಲ್ 2ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ, ನಂತರ ಶಹದೋಲ್ ಜಿಲ್ಲೆಯ ಪ್ರಮುಖ ಹೋಟೆಲ್‌ನ ಕೋಣೆಯೊಂದರಲ್ಲಿ ಬಂಧಿಸಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದು, ಉಪ ಜೈಲರ್ ವಿರುದ್ಧ ಅಪಹರಣ ಮತ್ತು ಅಕ್ರಮ ಬಂಧನದ ಆರೋಪ ಹೊರಿಸಲಾಗಿದೆ.

ಪೊಲೀಸರ ಪ್ರಕಾರ, ಏಪ್ರಿಲ್ 29ರಂದು ಮಗಳು ಕಾಣೆಯಾದ ನಂತರ ಬಾಲಕಿಯ ತಾಯಿ ನಾಪತ್ತೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ, ಪೊಲೀಸರು ಏಪ್ರಿಲ್ 30ರಂದು ಬಿಎನ್‌ಎಸ್ ಸೆಕ್ಷನ್ 137(2) ಅಡಿಯಲ್ಲಿ ಅಪಹರಣ ಪ್ರಕರಣವನ್ನು ದಾಖಲಿಸಿದ್ದರು.

ಬಾಲಕಿಯನ್ನು ರಕ್ಷಿಸಿದ ನಂತರ ವಿಚಾರಣೆ ನಡೆಸಿದಾಗ, ಏಪ್ರಿಲ್ 29ರಂದು ಸಮೀರ್ ಖಾನ್ ಎಂಬಾತನಿಂದ ತನಗೆ ಫೋನ್ ಕರೆ ಬಂದಿದ್ದು, ಆತ ತನ್ನನ್ನು ಬೈಕ್‌ನಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾಗಿ ಬಾಲಕಿ ಆರೋಪಿಸಿದ್ದಾಳೆ. ನಂತರ ಸಮೀರ್‌ನ ಆಪ್ತ ಚೋಟು ಮುಸಲ್ಮಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ.

ಏಪ್ರಿಲ್ 30ರಂದು ಶಹದೋಲ್ ರೈಲು ನಿಲ್ದಾಣದಲ್ಲಿ ತನ್ನನ್ನು ಬಿಟ್ಟು ಹೋಗಲಾಗಿತ್ತು, ಅಲ್ಲಿಂದ ಅನ್ಮೋಲ್ ಎಂದು ಗುರುತಿಸಲಾದ ಮತ್ತೊಬ್ಬ ಯುವಕ ತನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ನಂತರ ಅದೇ ದಿನ, ಮುದ್ನಾ ನದಿಯ ಬಳಿ ಅನ್ಮೋಲ್‌ನ ಆಪ್ತ ಶಕೀಬ್ ಖಾನ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿಯ ಹೇಳಿಕೆಯ ಪ್ರಕಾರ, ಏಪ್ರಿಲ್ 30ರಂದು ತಡರಾತ್ರಿ ಹಾಸ್ಟೆಲ್ ಬಳಿ ಆಕೆಯನ್ನು ಬಿಟ್ಟು ಹೋಗಲಾಗಿತ್ತು. ಮೇ 1ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬುರ್ಹಾರ್ ಸಬ್ ಜೈಲಿನ ಉಪ ಜೈಲರ್ ವಿಕಾಸ್ ಸಿಂಗ್ ಆಕೆಯನ್ನು ಗಮನಿಸಿ, ತನ್ನ ಕಾರಿನಲ್ಲಿ ಹೋಟೆಲ್‌ಗೆ ಕರೆದೊಯ್ದು ಬಲವಂತವಾಗಿ ಬಂಧಿಸಿಟ್ಟಿದ್ದ. ನಂತರ ಪೊಲೀಸರು ಆಕೆ ಇದ್ದ ಸ್ಥಳವನ್ನು ಪತ್ತೆಹಚ್ಚಿ ಹೋಟೆಲ್ ಕೊಠಡಿಯಿಂದ ರಕ್ಷಿಸಿದ್ದಾರೆ.

2024ರಲ್ಲಿ, ತಾಯಿಯೊಂದಿಗೆ ಜಗಳವಾಡಿ ಮನೆಬಿಟ್ಟ ವೇಳೆ ಐವರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಅತ್ಯಾಚಾರ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಗಿ ವರದಿಗಳು ಹೇಳಿವೆ.

“ಅಪಹರಣಕ್ಕೆ ಸಂಬಂಧಿಸಿದ ಸೆಕ್ಷನ್ 137(2) ಬಿಎನ್‌ಎಸ್ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. 2024ಮತ್ತು ಏಪ್ರಿಲ್ 29 ಮತ್ತು 30, 2025ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ. ಶುಕ್ರವಾರ ಆಕೆಯ ಹೇಳಿಕೆಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲಾಗುವುದು, ಅದರ ಆಧಾರದ ಮೇಲೆ ಈ ಪ್ರಕರಣದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಶಹದೋಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಮ್‌ಜಿ ಶ್ರೀವಾಸ್ತವ ಗುರುವಾರ ಹೇಳಿದ್ದಾರೆ.

“ಬುರ್ಹಾರ್ ಸಬ್ ಜೈಲು ಉಪ ಜೈಲರ್ ವಿಕಾಸ್ ಸಿಂಗ್ ವಿರುದ್ಧ ಅಪಹರಣ ಮತ್ತು ಅಕ್ರಮ ಬಂಧನದ ಆರೋಪ ಹೊರಿಸಲಾಗಿದೆ. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ” ಎಂದು ಎಸ್ಪಿ ತಿಳಿಸಿದ್ದಾರೆ.

ತನಿಖೆಯ ಬಗ್ಗೆ ತಿಳಿದಿರುವ ಪೊಲೀಸ್ ಅಧಿಕಾರಿಗಳ ಪ್ರಕಾರ, ಬಾಲಕಿಯ ಆರಂಭಿಕ ಹೇಳಿಕೆಗಳಲ್ಲಿ ಹಲವಾರು ಗೊಂದಲಗಳಿವೆ. ಆಕೆಯ ಔಪಚಾರಿಕ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶುಕ್ರವಾರ ಆಕೆಯ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲು ನಿರ್ಧರಿಸಲಾಗಿದೆ ಎಂದು newindianexpress.com ವರದಿ ಮಾಡಿದೆ.

ಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...