Homeಅಂತರಾಷ್ಟ್ರೀಯಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

ಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

- Advertisement -
- Advertisement -

ಸಂಸತ್ತಿನ ಉದ್ಯೋಗಿಯೊಬ್ಬರು ತನ್ನ ಮೇಲೆ ಆಸ್ಟ್ರೇಲಿಯ ಸಂಸತ್ತಿನಲ್ಲೇ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಯ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಸರ್ಕಾರಿ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

2019 ರ ಮಾರ್ಚ್‌ನಲ್ಲಿ ರಕ್ಷಣಾ ಸಚಿವ ಲಿಂಡಾ ರೆನಾಲ್ಡ್ಸ್ ಅವರ ಕಚೇರಿಯಲ್ಲಿ ಮಾರಿಸನ್‌ರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ಯಾರೋ ಒಬ್ಬರು ತನ್ನನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಪ್ರಧಾನಿ ಸ್ಕಾಟ್ ಮಾರಿಸನ್, “ಅದು ಸಂಭವಿಸಬಾರದಿತ್ತು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸಂಸತ್ತಿನಲ್ಲಿ ಕೆಲಸ ಮಾಡುವ ಯಾವುದೇ ಯುವತಿಯು ಸುರಕ್ಷಿತವಾಗಿದ್ದಾರೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ಕೆಲಸದ ಸ್ಥಳಗಳಲ್ಲಿ ಇರುವ ದೂರುಗಳನ್ನು ಪರಿಶೀಲಿಸಲು ಕ್ಯಾಬಿನೆಟ್ ಅಧಿಕಾರಿ ಸ್ಟೆಫನಿ ಫೋಸ್ಟರ್ ಅವರನ್ನು ನೇಮಕ ಮಾಡಿದ್ದು, ಜೊತೆಗೆ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆ ವರ್ಷದ ಏಪ್ರಿಲ್ ಆರಂಭದಲ್ಲಿ ಘಟನೆಯ ಬಗ್ಗೆ ತಾನು ಪೊಲೀಸರೊಂದಿಗೆ ಮಾತನಾಡಿದ್ದಾಗಿ ಮಹಿಳೆಯು ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ತನ್ನ ವೃತ್ತಿಜೀವನದ ಮುಂದಿನ ಭವಿಷ್ಯದ ಬಗ್ಗೆ ಆತಂಕಗೊಂಡು ಔಪಚಾರಿಕ ದೂರು ನೀಡಿರಲಿಲ್ಲ ಎಂದು ಹೇಳಿದ್ದಾರೆ. ದೇಶದ ರಾಜಧಾನಿಯಲ್ಲಿನ ಪೊಲೀಸರು 2019 ಏಪ್ರಿಲ್ ತಿಂಗಳಲ್ಲಿ ಮಹಿಳೆಯೊಂದಿಗೆ ಮಾತನಾಡಿದ್ದಾಗಿ ದೃಡಪಡಿಸಿದ್ದು, ಆದರೆ ಮಹಿಳೆಯು ಔಪಚಾರಿಕ ದೂರು ನೀಡಿಲ್ಲ ಎಂದು ಹೇಳಿದ್ದಾರೆ.

ತನ್ನ ಮೇಲೆ ಆಗಿರುವ ದಾಳಿಯ ಬಗ್ಗೆ ರೆನಾಲ್ಡ್ಸ್ ಕಚೇರಿಯ ಹಿರಿಯ ಸಿಬ್ಬಂದಿಗೆ ತಿಳಿಸಿದ್ದೆ, ಆದರೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿರುವ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ಕೇಳಿಕೊಳ್ಳಲಾಗಿತ್ತು ಎಂದು ಮಹಿಳೆಯು ಹೇಳಿದ್ದಾರೆ.

ತನ್ನ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಘಟನೆಯ ಬಗ್ಗೆ ಕಳೆದ ವರ್ಷ ತಿಳಿಸಲಾಗಿತ್ತು ಎಂದು ರೆನಾಲ್ಡ್ಸ್ ಸೋಮವಾರ ದೃಡಪಡಿಸಿದ್ದಾರೆ, ಆದರೆ ಪೊಲೀಸ್ ದೂರು ನೀಡದಂತೆ ಮಹಿಳೆ ಮೇಲೆ ತಾನು ಒತ್ತಡ ಹೇರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...