Homeಅಂತರಾಷ್ಟ್ರೀಯಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

ಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

- Advertisement -
- Advertisement -

ಸಂಸತ್ತಿನ ಉದ್ಯೋಗಿಯೊಬ್ಬರು ತನ್ನ ಮೇಲೆ ಆಸ್ಟ್ರೇಲಿಯ ಸಂಸತ್ತಿನಲ್ಲೇ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಯ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಸರ್ಕಾರಿ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

2019 ರ ಮಾರ್ಚ್‌ನಲ್ಲಿ ರಕ್ಷಣಾ ಸಚಿವ ಲಿಂಡಾ ರೆನಾಲ್ಡ್ಸ್ ಅವರ ಕಚೇರಿಯಲ್ಲಿ ಮಾರಿಸನ್‌ರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ಯಾರೋ ಒಬ್ಬರು ತನ್ನನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಪ್ರಧಾನಿ ಸ್ಕಾಟ್ ಮಾರಿಸನ್, “ಅದು ಸಂಭವಿಸಬಾರದಿತ್ತು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸಂಸತ್ತಿನಲ್ಲಿ ಕೆಲಸ ಮಾಡುವ ಯಾವುದೇ ಯುವತಿಯು ಸುರಕ್ಷಿತವಾಗಿದ್ದಾರೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ಕೆಲಸದ ಸ್ಥಳಗಳಲ್ಲಿ ಇರುವ ದೂರುಗಳನ್ನು ಪರಿಶೀಲಿಸಲು ಕ್ಯಾಬಿನೆಟ್ ಅಧಿಕಾರಿ ಸ್ಟೆಫನಿ ಫೋಸ್ಟರ್ ಅವರನ್ನು ನೇಮಕ ಮಾಡಿದ್ದು, ಜೊತೆಗೆ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆ ವರ್ಷದ ಏಪ್ರಿಲ್ ಆರಂಭದಲ್ಲಿ ಘಟನೆಯ ಬಗ್ಗೆ ತಾನು ಪೊಲೀಸರೊಂದಿಗೆ ಮಾತನಾಡಿದ್ದಾಗಿ ಮಹಿಳೆಯು ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ತನ್ನ ವೃತ್ತಿಜೀವನದ ಮುಂದಿನ ಭವಿಷ್ಯದ ಬಗ್ಗೆ ಆತಂಕಗೊಂಡು ಔಪಚಾರಿಕ ದೂರು ನೀಡಿರಲಿಲ್ಲ ಎಂದು ಹೇಳಿದ್ದಾರೆ. ದೇಶದ ರಾಜಧಾನಿಯಲ್ಲಿನ ಪೊಲೀಸರು 2019 ಏಪ್ರಿಲ್ ತಿಂಗಳಲ್ಲಿ ಮಹಿಳೆಯೊಂದಿಗೆ ಮಾತನಾಡಿದ್ದಾಗಿ ದೃಡಪಡಿಸಿದ್ದು, ಆದರೆ ಮಹಿಳೆಯು ಔಪಚಾರಿಕ ದೂರು ನೀಡಿಲ್ಲ ಎಂದು ಹೇಳಿದ್ದಾರೆ.

ತನ್ನ ಮೇಲೆ ಆಗಿರುವ ದಾಳಿಯ ಬಗ್ಗೆ ರೆನಾಲ್ಡ್ಸ್ ಕಚೇರಿಯ ಹಿರಿಯ ಸಿಬ್ಬಂದಿಗೆ ತಿಳಿಸಿದ್ದೆ, ಆದರೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿರುವ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ಕೇಳಿಕೊಳ್ಳಲಾಗಿತ್ತು ಎಂದು ಮಹಿಳೆಯು ಹೇಳಿದ್ದಾರೆ.

ತನ್ನ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಘಟನೆಯ ಬಗ್ಗೆ ಕಳೆದ ವರ್ಷ ತಿಳಿಸಲಾಗಿತ್ತು ಎಂದು ರೆನಾಲ್ಡ್ಸ್ ಸೋಮವಾರ ದೃಡಪಡಿಸಿದ್ದಾರೆ, ಆದರೆ ಪೊಲೀಸ್ ದೂರು ನೀಡದಂತೆ ಮಹಿಳೆ ಮೇಲೆ ತಾನು ಒತ್ತಡ ಹೇರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...