Homeಅಂತರಾಷ್ಟ್ರೀಯಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

ಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

- Advertisement -
- Advertisement -

ಸಂಸತ್ತಿನ ಉದ್ಯೋಗಿಯೊಬ್ಬರು ತನ್ನ ಮೇಲೆ ಆಸ್ಟ್ರೇಲಿಯ ಸಂಸತ್ತಿನಲ್ಲೇ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಯ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಸರ್ಕಾರಿ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

2019 ರ ಮಾರ್ಚ್‌ನಲ್ಲಿ ರಕ್ಷಣಾ ಸಚಿವ ಲಿಂಡಾ ರೆನಾಲ್ಡ್ಸ್ ಅವರ ಕಚೇರಿಯಲ್ಲಿ ಮಾರಿಸನ್‌ರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ಯಾರೋ ಒಬ್ಬರು ತನ್ನನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಪ್ರಧಾನಿ ಸ್ಕಾಟ್ ಮಾರಿಸನ್, “ಅದು ಸಂಭವಿಸಬಾರದಿತ್ತು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸಂಸತ್ತಿನಲ್ಲಿ ಕೆಲಸ ಮಾಡುವ ಯಾವುದೇ ಯುವತಿಯು ಸುರಕ್ಷಿತವಾಗಿದ್ದಾರೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ಕೆಲಸದ ಸ್ಥಳಗಳಲ್ಲಿ ಇರುವ ದೂರುಗಳನ್ನು ಪರಿಶೀಲಿಸಲು ಕ್ಯಾಬಿನೆಟ್ ಅಧಿಕಾರಿ ಸ್ಟೆಫನಿ ಫೋಸ್ಟರ್ ಅವರನ್ನು ನೇಮಕ ಮಾಡಿದ್ದು, ಜೊತೆಗೆ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆ ವರ್ಷದ ಏಪ್ರಿಲ್ ಆರಂಭದಲ್ಲಿ ಘಟನೆಯ ಬಗ್ಗೆ ತಾನು ಪೊಲೀಸರೊಂದಿಗೆ ಮಾತನಾಡಿದ್ದಾಗಿ ಮಹಿಳೆಯು ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ತನ್ನ ವೃತ್ತಿಜೀವನದ ಮುಂದಿನ ಭವಿಷ್ಯದ ಬಗ್ಗೆ ಆತಂಕಗೊಂಡು ಔಪಚಾರಿಕ ದೂರು ನೀಡಿರಲಿಲ್ಲ ಎಂದು ಹೇಳಿದ್ದಾರೆ. ದೇಶದ ರಾಜಧಾನಿಯಲ್ಲಿನ ಪೊಲೀಸರು 2019 ಏಪ್ರಿಲ್ ತಿಂಗಳಲ್ಲಿ ಮಹಿಳೆಯೊಂದಿಗೆ ಮಾತನಾಡಿದ್ದಾಗಿ ದೃಡಪಡಿಸಿದ್ದು, ಆದರೆ ಮಹಿಳೆಯು ಔಪಚಾರಿಕ ದೂರು ನೀಡಿಲ್ಲ ಎಂದು ಹೇಳಿದ್ದಾರೆ.

ತನ್ನ ಮೇಲೆ ಆಗಿರುವ ದಾಳಿಯ ಬಗ್ಗೆ ರೆನಾಲ್ಡ್ಸ್ ಕಚೇರಿಯ ಹಿರಿಯ ಸಿಬ್ಬಂದಿಗೆ ತಿಳಿಸಿದ್ದೆ, ಆದರೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿರುವ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ಕೇಳಿಕೊಳ್ಳಲಾಗಿತ್ತು ಎಂದು ಮಹಿಳೆಯು ಹೇಳಿದ್ದಾರೆ.

ತನ್ನ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಘಟನೆಯ ಬಗ್ಗೆ ಕಳೆದ ವರ್ಷ ತಿಳಿಸಲಾಗಿತ್ತು ಎಂದು ರೆನಾಲ್ಡ್ಸ್ ಸೋಮವಾರ ದೃಡಪಡಿಸಿದ್ದಾರೆ, ಆದರೆ ಪೊಲೀಸ್ ದೂರು ನೀಡದಂತೆ ಮಹಿಳೆ ಮೇಲೆ ತಾನು ಒತ್ತಡ ಹೇರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...