Homeಅಂತರಾಷ್ಟ್ರೀಯಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

ಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

- Advertisement -
- Advertisement -

ಸಂಸತ್ತಿನ ಉದ್ಯೋಗಿಯೊಬ್ಬರು ತನ್ನ ಮೇಲೆ ಆಸ್ಟ್ರೇಲಿಯ ಸಂಸತ್ತಿನಲ್ಲೇ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಯ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಸರ್ಕಾರಿ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

2019 ರ ಮಾರ್ಚ್‌ನಲ್ಲಿ ರಕ್ಷಣಾ ಸಚಿವ ಲಿಂಡಾ ರೆನಾಲ್ಡ್ಸ್ ಅವರ ಕಚೇರಿಯಲ್ಲಿ ಮಾರಿಸನ್‌ರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ಯಾರೋ ಒಬ್ಬರು ತನ್ನನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಪ್ರಧಾನಿ ಸ್ಕಾಟ್ ಮಾರಿಸನ್, “ಅದು ಸಂಭವಿಸಬಾರದಿತ್ತು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸಂಸತ್ತಿನಲ್ಲಿ ಕೆಲಸ ಮಾಡುವ ಯಾವುದೇ ಯುವತಿಯು ಸುರಕ್ಷಿತವಾಗಿದ್ದಾರೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ಕೆಲಸದ ಸ್ಥಳಗಳಲ್ಲಿ ಇರುವ ದೂರುಗಳನ್ನು ಪರಿಶೀಲಿಸಲು ಕ್ಯಾಬಿನೆಟ್ ಅಧಿಕಾರಿ ಸ್ಟೆಫನಿ ಫೋಸ್ಟರ್ ಅವರನ್ನು ನೇಮಕ ಮಾಡಿದ್ದು, ಜೊತೆಗೆ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆ ವರ್ಷದ ಏಪ್ರಿಲ್ ಆರಂಭದಲ್ಲಿ ಘಟನೆಯ ಬಗ್ಗೆ ತಾನು ಪೊಲೀಸರೊಂದಿಗೆ ಮಾತನಾಡಿದ್ದಾಗಿ ಮಹಿಳೆಯು ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ತನ್ನ ವೃತ್ತಿಜೀವನದ ಮುಂದಿನ ಭವಿಷ್ಯದ ಬಗ್ಗೆ ಆತಂಕಗೊಂಡು ಔಪಚಾರಿಕ ದೂರು ನೀಡಿರಲಿಲ್ಲ ಎಂದು ಹೇಳಿದ್ದಾರೆ. ದೇಶದ ರಾಜಧಾನಿಯಲ್ಲಿನ ಪೊಲೀಸರು 2019 ಏಪ್ರಿಲ್ ತಿಂಗಳಲ್ಲಿ ಮಹಿಳೆಯೊಂದಿಗೆ ಮಾತನಾಡಿದ್ದಾಗಿ ದೃಡಪಡಿಸಿದ್ದು, ಆದರೆ ಮಹಿಳೆಯು ಔಪಚಾರಿಕ ದೂರು ನೀಡಿಲ್ಲ ಎಂದು ಹೇಳಿದ್ದಾರೆ.

ತನ್ನ ಮೇಲೆ ಆಗಿರುವ ದಾಳಿಯ ಬಗ್ಗೆ ರೆನಾಲ್ಡ್ಸ್ ಕಚೇರಿಯ ಹಿರಿಯ ಸಿಬ್ಬಂದಿಗೆ ತಿಳಿಸಿದ್ದೆ, ಆದರೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿರುವ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ಕೇಳಿಕೊಳ್ಳಲಾಗಿತ್ತು ಎಂದು ಮಹಿಳೆಯು ಹೇಳಿದ್ದಾರೆ.

ತನ್ನ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಘಟನೆಯ ಬಗ್ಗೆ ಕಳೆದ ವರ್ಷ ತಿಳಿಸಲಾಗಿತ್ತು ಎಂದು ರೆನಾಲ್ಡ್ಸ್ ಸೋಮವಾರ ದೃಡಪಡಿಸಿದ್ದಾರೆ, ಆದರೆ ಪೊಲೀಸ್ ದೂರು ನೀಡದಂತೆ ಮಹಿಳೆ ಮೇಲೆ ತಾನು ಒತ್ತಡ ಹೇರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...