Homeಅಂತರಾಷ್ಟ್ರೀಯಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

ಸಂಸತ್ತಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಕ್ಷಮೆ ಕೋರಿದ ಆಸ್ಟ್ರೇಲಿಯ ಪ್ರಧಾನಿ

- Advertisement -
- Advertisement -

ಸಂಸತ್ತಿನ ಉದ್ಯೋಗಿಯೊಬ್ಬರು ತನ್ನ ಮೇಲೆ ಆಸ್ಟ್ರೇಲಿಯ ಸಂಸತ್ತಿನಲ್ಲೇ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಯ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಸರ್ಕಾರಿ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

2019 ರ ಮಾರ್ಚ್‌ನಲ್ಲಿ ರಕ್ಷಣಾ ಸಚಿವ ಲಿಂಡಾ ರೆನಾಲ್ಡ್ಸ್ ಅವರ ಕಚೇರಿಯಲ್ಲಿ ಮಾರಿಸನ್‌ರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ಯಾರೋ ಒಬ್ಬರು ತನ್ನನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಪ್ರಧಾನಿ ಸ್ಕಾಟ್ ಮಾರಿಸನ್, “ಅದು ಸಂಭವಿಸಬಾರದಿತ್ತು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸಂಸತ್ತಿನಲ್ಲಿ ಕೆಲಸ ಮಾಡುವ ಯಾವುದೇ ಯುವತಿಯು ಸುರಕ್ಷಿತವಾಗಿದ್ದಾರೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ಕೆಲಸದ ಸ್ಥಳಗಳಲ್ಲಿ ಇರುವ ದೂರುಗಳನ್ನು ಪರಿಶೀಲಿಸಲು ಕ್ಯಾಬಿನೆಟ್ ಅಧಿಕಾರಿ ಸ್ಟೆಫನಿ ಫೋಸ್ಟರ್ ಅವರನ್ನು ನೇಮಕ ಮಾಡಿದ್ದು, ಜೊತೆಗೆ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆ ವರ್ಷದ ಏಪ್ರಿಲ್ ಆರಂಭದಲ್ಲಿ ಘಟನೆಯ ಬಗ್ಗೆ ತಾನು ಪೊಲೀಸರೊಂದಿಗೆ ಮಾತನಾಡಿದ್ದಾಗಿ ಮಹಿಳೆಯು ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ತನ್ನ ವೃತ್ತಿಜೀವನದ ಮುಂದಿನ ಭವಿಷ್ಯದ ಬಗ್ಗೆ ಆತಂಕಗೊಂಡು ಔಪಚಾರಿಕ ದೂರು ನೀಡಿರಲಿಲ್ಲ ಎಂದು ಹೇಳಿದ್ದಾರೆ. ದೇಶದ ರಾಜಧಾನಿಯಲ್ಲಿನ ಪೊಲೀಸರು 2019 ಏಪ್ರಿಲ್ ತಿಂಗಳಲ್ಲಿ ಮಹಿಳೆಯೊಂದಿಗೆ ಮಾತನಾಡಿದ್ದಾಗಿ ದೃಡಪಡಿಸಿದ್ದು, ಆದರೆ ಮಹಿಳೆಯು ಔಪಚಾರಿಕ ದೂರು ನೀಡಿಲ್ಲ ಎಂದು ಹೇಳಿದ್ದಾರೆ.

ತನ್ನ ಮೇಲೆ ಆಗಿರುವ ದಾಳಿಯ ಬಗ್ಗೆ ರೆನಾಲ್ಡ್ಸ್ ಕಚೇರಿಯ ಹಿರಿಯ ಸಿಬ್ಬಂದಿಗೆ ತಿಳಿಸಿದ್ದೆ, ಆದರೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿರುವ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ಕೇಳಿಕೊಳ್ಳಲಾಗಿತ್ತು ಎಂದು ಮಹಿಳೆಯು ಹೇಳಿದ್ದಾರೆ.

ತನ್ನ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಘಟನೆಯ ಬಗ್ಗೆ ಕಳೆದ ವರ್ಷ ತಿಳಿಸಲಾಗಿತ್ತು ಎಂದು ರೆನಾಲ್ಡ್ಸ್ ಸೋಮವಾರ ದೃಡಪಡಿಸಿದ್ದಾರೆ, ಆದರೆ ಪೊಲೀಸ್ ದೂರು ನೀಡದಂತೆ ಮಹಿಳೆ ಮೇಲೆ ತಾನು ಒತ್ತಡ ಹೇರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...