Homeಮುಖಪುಟದೂರು ನೀಡಲು ಹೋಗಿದ್ದ ಅತ್ಯಾಚಾರ ಸಂತ್ರಸ್ತೆಯ ಪೋಷಕರಿಗೆ ಥಳಿಸಿದ ಪೊಲೀಸರು: ವರದಿ

ದೂರು ನೀಡಲು ಹೋಗಿದ್ದ ಅತ್ಯಾಚಾರ ಸಂತ್ರಸ್ತೆಯ ಪೋಷಕರಿಗೆ ಥಳಿಸಿದ ಪೊಲೀಸರು: ವರದಿ

- Advertisement -
- Advertisement -

ಚೆನ್ನೈನಲ್ಲಿ ತಮ್ಮ ಹತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ದಂಪತಿಗೆ ಪೊಲೀಸರು ಥಳಿಸಿರುವ ಆರೋಪ ಕೇಳಿ ಬಂದಿದೆ.

ದಂಪತಿ ಆಗಸ್ಟ್ 31ರಂದು ಮುಂಜಾನೆ ದೂರು ದಾಖಲಿಸಲು ಅಣ್ಣಾನಗರ ಮಹಿಳಾ ಠಾಣೆಗೆ ತೆರಳಿದ್ದರು. ಈ ವೇಳೆ ಪೊಲೀಸರು ಥಳಿಸಿರುವುದಾಗಿ ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಪೊಲೀಸರು ನಮಗೆ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಹೇಳಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಸಂತ್ರಸ್ತೆಯ ತಾಯಿ “ಪೊಲೀಸರು ನನ್ನ ಕೈ ತಿರುವಿದರು, ಅವರು ಹೇಳಿಕೊಟ್ಟಂತೆ ಹೇಳಲು ಸೂಚಿಸಿದರು. ವೈದ್ಯರು ಹೇಳಿರುವುದನ್ನು ನಾನು ಅವರಿಗೆ ಹೇಳಿದೆ. ಇನ್ಸ್‌ಪೆಕ್ಟರ್ ನನ್ನನ್ನು ದುರಹಂಕಾರಿ ಎಂದು ಕರೆದರು ಮತ್ತು ನನ್ನ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು. ನನ್ನ ಮಗಳನ್ನು ಸರಿಯಾಗಿ ಬೆಳೆಸಿಲ್ಲ ಎಂದು ಮೂರು ವರ್ಷಗಳ ಕಾಲ ಜೈಲಿಗೆ ಹಾಕುವುದಾಗಿ ಹೇಳಿದರು” ಎಂದಿದ್ದಾರೆ. ಸಂತ್ರಸ್ತೆಯ ತಂದೆಗೂ ಅದೇ ದಿನ ಪೊಲೀಸರು ಥಳಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಅವರು “ಏಕೆ ಹೊಡೆಯುತ್ತಿದ್ದೇವೆ ಗೊತ್ತಾ? ಎಂದು ಕೇಳುತ್ತಾ ನನಗೆ ಹೊಡೆದರು” ಎಂದಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪ್ರಕರಣದ ಕುರಿತು ಮಾತನಾಡಿರುವ ಪಶ್ಚಿಮ ಚೆನ್ನೈನ ಜಂಟಿ ಪೊಲೀಸ್ ಆಯುಕ್ತ ವಿಜಯ್ ಕುಮಾರ್ ಅವರು “ಇನ್‌ಸ್ಪೆಕ್ಟರ್ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮರಾ ಇರಲಿಲ್ಲ. ಆದರೂ, ನಾವು ಇತರ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಪೊಲೀಸರು ಸಂತ್ರಸ್ತೆಯ ಪೋಷಕರಿಗೆ ಥಳಿಸಿರುವ ಬಗ್ಗೆ ನಮಗೆ ಯಾವುದೇ ಪುರಾವೆಗಳು ಕಂಡು ಬಂದಿಲ್ಲ. ಇನ್ಸ್‌ಪೆಕ್ಟರ್ ಅವರೊಂದಿಗೆ ಕಟುವಾಗಿ ಮಾತನಾಡಿದ್ದಾರೆಯೇ? ಎಂದು ಪರಿಶೀಲಿಸಿದ್ದೇವೆ. ಆ ಬಗ್ಗೆಯೂ ನಮಗೆ ಯಾವುದೇ ಮಾಹಿತಿ ದೊರೆತಿಲ್ಲ. ಇನ್ಸ್‌ಪೆಕ್ಟರ್ ತನ್ನ ಕೆಲಸವನ್ನು ಮಾಡಿದ್ದಾರೆ” ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸಂತ್ರಸ್ತ ಬಾಲಕಿ ಅನಾರೋಗ್ಯಕ್ಕೆ ಒಳಗಾಗಿದ್ದಳು. ಆಗಸ್ಟ್ 29ರಂದು ಆಕೆಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆಯ ಬಗ್ಗೆ ವೈದ್ಯರು ಹೇಳಿದ್ದಾರೆ ಮತ್ತು ಆಕೆಯನ್ನು ಕಿಲ್ಪಾಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಕೆಎಂಸಿ) ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅಲ್ಲಿಗೆ ತೆರಳಿದಾಗ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಿ ಅಣ್ಣಾನಗರ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಆರಂಭದಲ್ಲಿ ತಮ್ಮ ಏರಿಯಾದಲ್ಲಿ ನೀರಿನ ಕ್ಯಾನ್‌ಗಳನ್ನು ವಿತರಿಸುವ ಸತೀಶ್ ಎಂಬಾತ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಳು. ಬಳಿಕ, ಆಕೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ವರದಿ ತಿಳಿಸಿದೆ.

ಬಾಲಕಿ ಹೇಳಿಕೆ ಬದಲಿಸಿದರೂ, ಆಕೆಯ ತಾಯಿ ಮಾತ್ರ ಸತೀಶ್ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಸಿದ್ದರು. ಅಂದೇ ಪೊಲೀಸರು ಅವರಿಗೆ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಹೇಳಿದ್ದಾರೆ.

ಆಗಸ್ಟ್ 30ರಂದು ಸತೀಶ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಆದರೆ, ಸಂತ್ರಸ್ತೆ ಹೇಳಿಕೆ ಹಿಂಪಡೆದಿದ್ದರಿಂದ ಆತನನ್ನು ಬಂಧಿಸಿರಲಿಲ್ಲ. ಬಳಿಕ ಸಂತ್ರಸ್ತೆ ತನ್ನ ಸಂಬಂಧಿ ಬಾಲಕನೊಬ್ಬ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾಗಿ ಹೇಳಿದ್ದಳು. ಆತ, ಎರಡು ವರ್ಷಗಳ ಹಿಂದೆ, 2022ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದಿದ್ದಳು. ಆಕೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಬಾಲಕನನ್ನು ಜುವೆನೈಲ್ ಜಸ್ಟೀಸ್ ಕೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಜಾಮೀನು ನೀಡಿದ್ದರಿಂದ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ ಎಂದು ನ್ಯೂಸ್ ಮಿನಿಟ್ ವಿವರಿಸಿದೆ.

ಇದನ್ನೂ ಓದಿ : ಬಿಜೆಪಿ ಹೈಕಮಾಂಡ್ ಆದೇಶ ಧಿಕ್ಕರಿಸಿದ ಬ್ರಿಜ್ ಭೂಷಣ್; ವಿನೇಶಾ ಫೋಗಟ್ ಮೇಲಿನ ದಾಳಿ ತೀವ್ರಗೊಳಿಸಿದ ಮಾಜಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...