Homeಮುಖಪುಟದೂರು ನೀಡಲು ಹೋಗಿದ್ದ ಅತ್ಯಾಚಾರ ಸಂತ್ರಸ್ತೆಯ ಪೋಷಕರಿಗೆ ಥಳಿಸಿದ ಪೊಲೀಸರು: ವರದಿ

ದೂರು ನೀಡಲು ಹೋಗಿದ್ದ ಅತ್ಯಾಚಾರ ಸಂತ್ರಸ್ತೆಯ ಪೋಷಕರಿಗೆ ಥಳಿಸಿದ ಪೊಲೀಸರು: ವರದಿ

- Advertisement -
- Advertisement -

ಚೆನ್ನೈನಲ್ಲಿ ತಮ್ಮ ಹತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ದಂಪತಿಗೆ ಪೊಲೀಸರು ಥಳಿಸಿರುವ ಆರೋಪ ಕೇಳಿ ಬಂದಿದೆ.

ದಂಪತಿ ಆಗಸ್ಟ್ 31ರಂದು ಮುಂಜಾನೆ ದೂರು ದಾಖಲಿಸಲು ಅಣ್ಣಾನಗರ ಮಹಿಳಾ ಠಾಣೆಗೆ ತೆರಳಿದ್ದರು. ಈ ವೇಳೆ ಪೊಲೀಸರು ಥಳಿಸಿರುವುದಾಗಿ ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಪೊಲೀಸರು ನಮಗೆ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಹೇಳಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಸಂತ್ರಸ್ತೆಯ ತಾಯಿ “ಪೊಲೀಸರು ನನ್ನ ಕೈ ತಿರುವಿದರು, ಅವರು ಹೇಳಿಕೊಟ್ಟಂತೆ ಹೇಳಲು ಸೂಚಿಸಿದರು. ವೈದ್ಯರು ಹೇಳಿರುವುದನ್ನು ನಾನು ಅವರಿಗೆ ಹೇಳಿದೆ. ಇನ್ಸ್‌ಪೆಕ್ಟರ್ ನನ್ನನ್ನು ದುರಹಂಕಾರಿ ಎಂದು ಕರೆದರು ಮತ್ತು ನನ್ನ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು. ನನ್ನ ಮಗಳನ್ನು ಸರಿಯಾಗಿ ಬೆಳೆಸಿಲ್ಲ ಎಂದು ಮೂರು ವರ್ಷಗಳ ಕಾಲ ಜೈಲಿಗೆ ಹಾಕುವುದಾಗಿ ಹೇಳಿದರು” ಎಂದಿದ್ದಾರೆ. ಸಂತ್ರಸ್ತೆಯ ತಂದೆಗೂ ಅದೇ ದಿನ ಪೊಲೀಸರು ಥಳಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಅವರು “ಏಕೆ ಹೊಡೆಯುತ್ತಿದ್ದೇವೆ ಗೊತ್ತಾ? ಎಂದು ಕೇಳುತ್ತಾ ನನಗೆ ಹೊಡೆದರು” ಎಂದಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪ್ರಕರಣದ ಕುರಿತು ಮಾತನಾಡಿರುವ ಪಶ್ಚಿಮ ಚೆನ್ನೈನ ಜಂಟಿ ಪೊಲೀಸ್ ಆಯುಕ್ತ ವಿಜಯ್ ಕುಮಾರ್ ಅವರು “ಇನ್‌ಸ್ಪೆಕ್ಟರ್ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮರಾ ಇರಲಿಲ್ಲ. ಆದರೂ, ನಾವು ಇತರ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಪೊಲೀಸರು ಸಂತ್ರಸ್ತೆಯ ಪೋಷಕರಿಗೆ ಥಳಿಸಿರುವ ಬಗ್ಗೆ ನಮಗೆ ಯಾವುದೇ ಪುರಾವೆಗಳು ಕಂಡು ಬಂದಿಲ್ಲ. ಇನ್ಸ್‌ಪೆಕ್ಟರ್ ಅವರೊಂದಿಗೆ ಕಟುವಾಗಿ ಮಾತನಾಡಿದ್ದಾರೆಯೇ? ಎಂದು ಪರಿಶೀಲಿಸಿದ್ದೇವೆ. ಆ ಬಗ್ಗೆಯೂ ನಮಗೆ ಯಾವುದೇ ಮಾಹಿತಿ ದೊರೆತಿಲ್ಲ. ಇನ್ಸ್‌ಪೆಕ್ಟರ್ ತನ್ನ ಕೆಲಸವನ್ನು ಮಾಡಿದ್ದಾರೆ” ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸಂತ್ರಸ್ತ ಬಾಲಕಿ ಅನಾರೋಗ್ಯಕ್ಕೆ ಒಳಗಾಗಿದ್ದಳು. ಆಗಸ್ಟ್ 29ರಂದು ಆಕೆಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆಯ ಬಗ್ಗೆ ವೈದ್ಯರು ಹೇಳಿದ್ದಾರೆ ಮತ್ತು ಆಕೆಯನ್ನು ಕಿಲ್ಪಾಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಕೆಎಂಸಿ) ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅಲ್ಲಿಗೆ ತೆರಳಿದಾಗ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಿ ಅಣ್ಣಾನಗರ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಆರಂಭದಲ್ಲಿ ತಮ್ಮ ಏರಿಯಾದಲ್ಲಿ ನೀರಿನ ಕ್ಯಾನ್‌ಗಳನ್ನು ವಿತರಿಸುವ ಸತೀಶ್ ಎಂಬಾತ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಳು. ಬಳಿಕ, ಆಕೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ವರದಿ ತಿಳಿಸಿದೆ.

ಬಾಲಕಿ ಹೇಳಿಕೆ ಬದಲಿಸಿದರೂ, ಆಕೆಯ ತಾಯಿ ಮಾತ್ರ ಸತೀಶ್ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಸಿದ್ದರು. ಅಂದೇ ಪೊಲೀಸರು ಅವರಿಗೆ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಹೇಳಿದ್ದಾರೆ.

ಆಗಸ್ಟ್ 30ರಂದು ಸತೀಶ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಆದರೆ, ಸಂತ್ರಸ್ತೆ ಹೇಳಿಕೆ ಹಿಂಪಡೆದಿದ್ದರಿಂದ ಆತನನ್ನು ಬಂಧಿಸಿರಲಿಲ್ಲ. ಬಳಿಕ ಸಂತ್ರಸ್ತೆ ತನ್ನ ಸಂಬಂಧಿ ಬಾಲಕನೊಬ್ಬ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾಗಿ ಹೇಳಿದ್ದಳು. ಆತ, ಎರಡು ವರ್ಷಗಳ ಹಿಂದೆ, 2022ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದಿದ್ದಳು. ಆಕೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಬಾಲಕನನ್ನು ಜುವೆನೈಲ್ ಜಸ್ಟೀಸ್ ಕೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಜಾಮೀನು ನೀಡಿದ್ದರಿಂದ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ ಎಂದು ನ್ಯೂಸ್ ಮಿನಿಟ್ ವಿವರಿಸಿದೆ.

ಇದನ್ನೂ ಓದಿ : ಬಿಜೆಪಿ ಹೈಕಮಾಂಡ್ ಆದೇಶ ಧಿಕ್ಕರಿಸಿದ ಬ್ರಿಜ್ ಭೂಷಣ್; ವಿನೇಶಾ ಫೋಗಟ್ ಮೇಲಿನ ದಾಳಿ ತೀವ್ರಗೊಳಿಸಿದ ಮಾಜಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...