Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...