Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...