Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...