Homeಮುಖಪುಟಯುಪಿ: ಆರೋಪಿ ಸಂಬಂಧಿಕರು ಬೆಂಕಿ ಹಚ್ಚಿದ್ದ ಅತ್ಯಾಚಾರ ಸಂತ್ರಸ್ತೆ ಸಾವು

ಯುಪಿ: ಆರೋಪಿ ಸಂಬಂಧಿಕರು ಬೆಂಕಿ ಹಚ್ಚಿದ್ದ ಅತ್ಯಾಚಾರ ಸಂತ್ರಸ್ತೆ ಸಾವು

ಸಂತ್ರಸ್ತೆ ಸಾವನ್ನಪ್ಪುವ ಮುನ್ನ, ಅತ್ಯಾಚಾರ ಪ್ರಕರಣದ ಆರೋಪಿಯ ಚಿಕ್ಕಪ್ಪ ಮತ್ತು ಆತನ ಐದು ಮಂದಿ ಕುಟುಂಬ ಸದಸ್ಯರು ಮಂಗಳವಾರ ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅತ್ಯಾಚಾರ ಆರೋಪ ಹೊತ್ತ ವ್ಯಕ್ತಿಯ ಕುಟುಂಬದ ಕಿರುಕುಳ ಮತ್ತು ಆರೋಪಿ ಕುಟುಂಬದವರು ಬೆಂಕಿ  ಹಚ್ಚಿದ್ದರು ಎನ್ನಲಾಗಿದ್ದ ಉತ್ತರ ಪ್ರದೇಶದ ಬುಲಂದ್‌ಶಹರ್‌ನ 16 ವರ್ಷದ ಸಂತ್ರಸ್ತೆ ದೆಹಲಿಯ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಮಂಗಳವಾರ ತಿಳಿಸಿದ್ದಾರೆ. ಮಂಗಳವಾರ ಅನುಮಾನಾಸ್ಪದ ರೀತಿಯಲ್ಲಿ ಬಾಲಕಿಯನ್ನು ಸುಟ್ಟಗಾಯಗಳೊಂದಿಗೆ ಚಿಕಿತ್ಸೆಗಾಗಿ ದೆಹಲಿಗೆ ಕರೆತರಲಾಗಿತ್ತು.

ಹಳ್ಳಿಯಲ್ಲಿ ಮಾವಿನ ತೋಟ ಕಾಯಲು ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತನ್ನಆಗಸ್ಟ್ 15 ರಂದು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ನಂತರ ಪೊಲೀಸರು ಕ್ರಮ ಕೈಗೊಂಡು ಅದೇ ದಿನ ಆರೋಪಿಗಳನ್ನು ಬಂಧಿಸಿದ್ದರು.

ಆದರೆ ಆರೋಪಿಗಳ ಚಿಕ್ಕಪ್ಪ ಮತ್ತು ಅವರ ಕೆಲವು ಸ್ನೇಹಿತರು, ಕುಟುಂಬ ಸದಸ್ಯರು ಸಂತ್ರಸ್ತೆಯ ಮೇಲೆ ತನ್ನ ದೂರನ್ನು ಹಿಂಪಡೆಯಲು ಮತ್ತು ಆರೋಪಿಯೊಂದಿಗೆ ರಾಜಿ ಮಾಡಿಕೊಳ್ಳಲು ಒತ್ತಡ ಹೇರುತ್ತಿದ್ದರು. ಸಂತ್ರಸ್ತೆಯ ಕುಟುಂಬವು ರಾಜಿ ಮಾಡಿಕೊಳ್ಳಲು ಒಪ್ಪದ ಹಿನ್ನೆಲೆ ಅವರು ಬಾಲಕಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದರು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ಸಂತ್ರಸ್ತೆ ಸಾಯುವ ಮುನ್ನ ತನ್ನ ಹೇಳಿಕೆಯಲ್ಲಿ, ಅತ್ಯಾಚಾರ ಪ್ರಕರಣದ ಆರೋಪಿಗಳ ಚಿಕ್ಕಪ್ಪ ಮತ್ತು ಆತನ ಇತರ ಐದು ಮಂದಿ ಕುಟುಂಬ ಸದಸ್ಯರು ಮಂಗಳವಾರ ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಜಹಾಂಗೀರಾಬಾದ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಕುಟುಂಬ ಕೊಲೆ ಪ್ರಕರಣ ದಾಖಲಿಸಿದೆ. ನಂತರ ಮೂವರನ್ನು ಬಂಧಿಸಲಾಗಿದೆ. ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡದ ಸಬ್ ಇನ್ಸ್‌ಪೆಕ್ಟರ್ ವಿನಾಯಕಾಂತ್ ಗೌತಮ್ ಮತ್ತು ಬೀಟ್ ಕಾನ್‌ಸ್ಟೆಬಲ್ ವಿಕ್ರಾಂತ್ ತೋಮರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಂತೋಷ್‌ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ಮೊದಲು ಸಂತ್ರಸ್ತ ಬಾಲಕಿ ತನಗೆ ತಾನೇ ತಾನೇ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ, ನಂತರ ಬಾಲಕಿ ಮೇಲೆ ಆರೋಪಿಗಳ ಕುಟುಂಬ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಬುಲಂದ್‌ಶಹರ್) ಎಸ್.ಕೆ.ಸಿಂಗ್ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರ ತರಹದ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಆದರೂ ಕೂಡ ಸರ್ಕಾರ ಮಹಿಳೆಯರ ಸುರಕ್ಷತೆ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ.

ದಿನೇ ದಿನೇ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳು ವರದಿಯಾಗುತ್ತಲೇ ಇವೆ. ರಾಮನ ನಾಡು ಎಂದು ಕರೆಸಿಕೊಳ್ಳುವಲ್ಲಿ ಮಹಿಳೆಯರಿಗೆ ಸುರಕ್ಷತೆ ಕನಸಿನ ಮಾತಾಗಿದೆ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...