Homeಕರ್ನಾಟಕಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ಪ್ರಕರಣ ಕರ್ನಾಟಕದ ಹೊರಗೆ ವರ್ಗಾಯಿಸಿದರೆ ನ್ಯಾಯ ಸಿಗುತ್ತದೆ ಎಂದಿದ್ದರೆ ಅದನ್ನು ಕೂಡಾ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಚಿತ್ರದರ್ಗದ ಮುರುಘಾ ಮಠದ ಪೀಠಾಧೀಶ ಶಿವಮೂರ್ತಿ ಮುರುಘಾ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ ಲೆಹರ್‌ ಸಿಂಗ್‌ ಸಿರೋಯ ಅವರು ಸೋಮವಾರ ಹೇಳಿದ್ದಾರೆ. “ಹೆಣ್ಣುಮಕ್ಕಳು ನ್ಯಾಯಕ್ಕೆ ಅರ್ಹರಾಗಿದ್ದಾರೆ” ಎಂದು ಕರ್ನಾಟಕದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಅವರು ಹೇಳಿದ್ದಾರೆ.

ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಶಿವಮೂರ್ತಿ ಮುರುಘಾ ಅವರ ವಿರುದ್ಧದ ಆರೋಪ ‘ಸುಳ್ಳು’ ಎಂದು ಪ್ರತಿಪಾದಿಸಿ, ಆರೋಪಿಗೆ ಬೆಂಬಲ ನೀಡಿದ್ದರು. ಇದಾಗಿ ಒಂದು ದಿನದ ನಂತರ ಲೆಹರ್‌ ಸಿಂಗ್ ಬಾಲಕಿಯರ ಪರವಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೆಹರ್‌ ಸಿಂಗ್ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಚಿತ್ರದುರ್ಗದ ಅತ್ಯಂತ ಪ್ರಭಾವಿ ಮುರುಘಾ ಮಠದ ಮಠಾಧೀಶರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಇದು ಅತ್ಯಂತ ಆಘಾತಕಾರಿ ಮತ್ತು ದುಃಖದ ಬೆಳವಣಿಗೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಪ್ರತಿಕ್ರಿಯೆ

“ಪ್ರತಿ ಬಾರಿ ಈ ರೀತಿಯ ಏನಾದರೂ ಸಂಭವಿಸಿದಾಗ ಅದು ನಮ್ಮ ಸುತ್ತಮುತ್ತಲಿನ ಮತ್ತು ನಮ್ಮ ಜನರ ವಿಶ್ವಾಸವನ್ನು ಅಲುಗಾಡಿಸುತ್ತದೆ. ಈ ಆರೋಪಗಳನ್ನು ಸಂಪೂರ್ಣವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಮಾಜವಾಗಿ ನಾವು ನಮಗೆ ಋಣಿಯಾಗಿದ್ದೇವೆ” ಎಂದು ಲೆಹರ್‌ ಸಿಂಗ್ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರ ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಈ ಪ್ರಕರಣದಲ್ಲಿ ಯಾವುದೇ ಒತ್ತಡಗಳು ಮತ್ತು ರಾಜಕೀಯ ಹಸ್ತಕ್ಷೇಪಗಳಿಲ್ಲ ಎಂಬುವುದನ್ನು ಖಚಿತಪಡಿಸಿಕೊಳ್ಳಬೇಕು. ಹೆಣ್ಣುಮಕ್ಕಳು ನ್ಯಾಯಕ್ಕೆ ಅರ್ಹರಾಗಿದ್ದಾರೆ. ಈ ಪ್ರಕರಣ ಕರ್ನಾಟಕದ ಹೊರಗೆ ವರ್ಗಾಯಿಸಿದರೆ ನ್ಯಾಯ ಸಿಗುತ್ತದೆ ಎಂದಿದ್ದರೆ ಅದನ್ನು ಕೂಡಾ ಪರಿಗಣಿಸಬೇಕು” ಎಂದು ಅವರು ಹೇಳಿದ್ದಾರೆ.

“ಈ ಸಂದರ್ಭದಲ್ಲಿ ಗ್ರಹಿಕೆಗಳು ಮಾತ್ರ ಮುಖ್ಯವಲ್ಲ. ನಮ್ಮ ಸಮಾಜದ ಆರೋಗ್ಯದ ವಿಶ್ವಾಸವನ್ನು ಪುನಃಸ್ಥಾಪಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ನಮ್ಮೆಲ್ಲರಿಗೂ ನಿರ್ಣಾಯಕ ಪಾತ್ರವಿದೆ” ಎಂದು ಲೆಹರ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ದಿನದ ಹಿಂದೆಯಷ್ಟೆ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೂರ್ತಿ ಮುರುಘಾ ವಿರುದ್ಧದ ಆರೋಪ ಸುಳ್ಳು ಎಂದು ಆರೋಪಿಯ ಬೆಂಬಲಕ್ಕೆ ನಿಂತಿದ್ದರು.

ಸೋಮವಾರ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಆರೋಪಿ ಶಿವಮೂರ್ತಿ ಮುರುಘಾರನ್ನು ವಶಕ್ಕೆ ಪಡೆದಿದ್ದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಮಠಕ್ಕೆ ವಾಪಾಸ್ಸು ಕಳುಹಿಸಿದ್ದಾರೆ. ಮಠದಲ್ಲಿ ಜಮಾಯಿಸಿದ್ದ ಭಕ್ತರೊಂದಿಗೆ ಮಾತನಾಡಿದ ಆರೋಪಿ, ‘ಕಾನೂನನ್ನು ಗೌರವಿಸುತ್ತೇನೆ ಹಾಗೂ ತನಿಖೆಗೆ ಸಹಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಮುರುಘಾ ಮಠದ ಶಿವಮೂರ್ತಿ ವಿರುದ್ಧ ಇಬ್ಬರು ಬಾಲಕಿಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಮಠದ ಹಾಸ್ಟೆಲ್‌ನ ವಾರ್ಡನ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಾಲಕಿಯರು ಮೈಸೂರಿನಲ್ಲಿರುವ ‘ಒಡನಾಡಿ ಸೇವಾ ಸಂಸ್ಥೆ’ ಎಂಬ ಸ್ವಯಂಸೇವಾ ಸಂಸ್ಥೆಯನ್ನು ಸಂಪರ್ಕಿಸಿ ಕೌನ್ಸೆಲಿಂಗ್ ವೇಳೆ ತಮಗೆ ಆಗಿರುವ ದೌರ್ಜನ್ಯವನ್ನು ವಿವರಿಸಿ, ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ನಂತರ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...