Homeಕರ್ನಾಟಕಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ಪ್ರಕರಣ ಕರ್ನಾಟಕದ ಹೊರಗೆ ವರ್ಗಾಯಿಸಿದರೆ ನ್ಯಾಯ ಸಿಗುತ್ತದೆ ಎಂದಿದ್ದರೆ ಅದನ್ನು ಕೂಡಾ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಚಿತ್ರದರ್ಗದ ಮುರುಘಾ ಮಠದ ಪೀಠಾಧೀಶ ಶಿವಮೂರ್ತಿ ಮುರುಘಾ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ ಲೆಹರ್‌ ಸಿಂಗ್‌ ಸಿರೋಯ ಅವರು ಸೋಮವಾರ ಹೇಳಿದ್ದಾರೆ. “ಹೆಣ್ಣುಮಕ್ಕಳು ನ್ಯಾಯಕ್ಕೆ ಅರ್ಹರಾಗಿದ್ದಾರೆ” ಎಂದು ಕರ್ನಾಟಕದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಅವರು ಹೇಳಿದ್ದಾರೆ.

ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಶಿವಮೂರ್ತಿ ಮುರುಘಾ ಅವರ ವಿರುದ್ಧದ ಆರೋಪ ‘ಸುಳ್ಳು’ ಎಂದು ಪ್ರತಿಪಾದಿಸಿ, ಆರೋಪಿಗೆ ಬೆಂಬಲ ನೀಡಿದ್ದರು. ಇದಾಗಿ ಒಂದು ದಿನದ ನಂತರ ಲೆಹರ್‌ ಸಿಂಗ್ ಬಾಲಕಿಯರ ಪರವಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೆಹರ್‌ ಸಿಂಗ್ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಚಿತ್ರದುರ್ಗದ ಅತ್ಯಂತ ಪ್ರಭಾವಿ ಮುರುಘಾ ಮಠದ ಮಠಾಧೀಶರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಇದು ಅತ್ಯಂತ ಆಘಾತಕಾರಿ ಮತ್ತು ದುಃಖದ ಬೆಳವಣಿಗೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಪ್ರತಿಕ್ರಿಯೆ

“ಪ್ರತಿ ಬಾರಿ ಈ ರೀತಿಯ ಏನಾದರೂ ಸಂಭವಿಸಿದಾಗ ಅದು ನಮ್ಮ ಸುತ್ತಮುತ್ತಲಿನ ಮತ್ತು ನಮ್ಮ ಜನರ ವಿಶ್ವಾಸವನ್ನು ಅಲುಗಾಡಿಸುತ್ತದೆ. ಈ ಆರೋಪಗಳನ್ನು ಸಂಪೂರ್ಣವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಮಾಜವಾಗಿ ನಾವು ನಮಗೆ ಋಣಿಯಾಗಿದ್ದೇವೆ” ಎಂದು ಲೆಹರ್‌ ಸಿಂಗ್ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರ ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಈ ಪ್ರಕರಣದಲ್ಲಿ ಯಾವುದೇ ಒತ್ತಡಗಳು ಮತ್ತು ರಾಜಕೀಯ ಹಸ್ತಕ್ಷೇಪಗಳಿಲ್ಲ ಎಂಬುವುದನ್ನು ಖಚಿತಪಡಿಸಿಕೊಳ್ಳಬೇಕು. ಹೆಣ್ಣುಮಕ್ಕಳು ನ್ಯಾಯಕ್ಕೆ ಅರ್ಹರಾಗಿದ್ದಾರೆ. ಈ ಪ್ರಕರಣ ಕರ್ನಾಟಕದ ಹೊರಗೆ ವರ್ಗಾಯಿಸಿದರೆ ನ್ಯಾಯ ಸಿಗುತ್ತದೆ ಎಂದಿದ್ದರೆ ಅದನ್ನು ಕೂಡಾ ಪರಿಗಣಿಸಬೇಕು” ಎಂದು ಅವರು ಹೇಳಿದ್ದಾರೆ.

“ಈ ಸಂದರ್ಭದಲ್ಲಿ ಗ್ರಹಿಕೆಗಳು ಮಾತ್ರ ಮುಖ್ಯವಲ್ಲ. ನಮ್ಮ ಸಮಾಜದ ಆರೋಗ್ಯದ ವಿಶ್ವಾಸವನ್ನು ಪುನಃಸ್ಥಾಪಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ನಮ್ಮೆಲ್ಲರಿಗೂ ನಿರ್ಣಾಯಕ ಪಾತ್ರವಿದೆ” ಎಂದು ಲೆಹರ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ದಿನದ ಹಿಂದೆಯಷ್ಟೆ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೂರ್ತಿ ಮುರುಘಾ ವಿರುದ್ಧದ ಆರೋಪ ಸುಳ್ಳು ಎಂದು ಆರೋಪಿಯ ಬೆಂಬಲಕ್ಕೆ ನಿಂತಿದ್ದರು.

ಸೋಮವಾರ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಆರೋಪಿ ಶಿವಮೂರ್ತಿ ಮುರುಘಾರನ್ನು ವಶಕ್ಕೆ ಪಡೆದಿದ್ದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಮಠಕ್ಕೆ ವಾಪಾಸ್ಸು ಕಳುಹಿಸಿದ್ದಾರೆ. ಮಠದಲ್ಲಿ ಜಮಾಯಿಸಿದ್ದ ಭಕ್ತರೊಂದಿಗೆ ಮಾತನಾಡಿದ ಆರೋಪಿ, ‘ಕಾನೂನನ್ನು ಗೌರವಿಸುತ್ತೇನೆ ಹಾಗೂ ತನಿಖೆಗೆ ಸಹಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಮುರುಘಾ ಮಠದ ಶಿವಮೂರ್ತಿ ವಿರುದ್ಧ ಇಬ್ಬರು ಬಾಲಕಿಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಮಠದ ಹಾಸ್ಟೆಲ್‌ನ ವಾರ್ಡನ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಾಲಕಿಯರು ಮೈಸೂರಿನಲ್ಲಿರುವ ‘ಒಡನಾಡಿ ಸೇವಾ ಸಂಸ್ಥೆ’ ಎಂಬ ಸ್ವಯಂಸೇವಾ ಸಂಸ್ಥೆಯನ್ನು ಸಂಪರ್ಕಿಸಿ ಕೌನ್ಸೆಲಿಂಗ್ ವೇಳೆ ತಮಗೆ ಆಗಿರುವ ದೌರ್ಜನ್ಯವನ್ನು ವಿವರಿಸಿ, ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ನಂತರ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...