Homeಕರ್ನಾಟಕರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

ರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ರ‍್ಯಾಪಿಡೋ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಸೋಮವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಮೋಟಾರು ವಾಹನಗಳ ಕಾಯ್ದೆಯಡಿಯಲ್ಲಿ ನೀಡಲಾದ ಸೂಕ್ತ ಅನುಮತಿಗಳೊಂದಿಗೆ ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸುವಂತೆ ಸಂಸ್ಥೆಯು ಕೇಳಿತ್ತು. ರ‍್ಯಾಪಿಡೋ ಪ್ರಕರಣ

ಕಳೆದ ಮೂರು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠವು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರ ಜುಲೈ 19ರಂದು ನೀಡಲಾಗಿದ್ದ ಬೈಕ್-ಟ್ಯಾಕ್ಸಿ ಕಾರ್ಯಾಚರಣೆಗಳನ್ನು ವಿರೋಧಿಸುವ ಸರ್ಕಾರಿ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಬೇಕೆಂದು ರ‍್ಯಾಪಿಡೊ ಬಯಸಿದೆ. 2021 ರಲ್ಲಿ, ಸಂಸ್ಥೆಯ ಬೈಕ್ ಟ್ಯಾಕ್ಸಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿತ್ತು.

10 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸವಾರರು ಮತ್ತು ಪ್ರತಿ ವಾರ ಸುಮಾರು 20 ಲಕ್ಷ ಸವಾರಿಗಳೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಇದು ಕರ್ನಾಟಕದ ಸಾರಿಗೆ ಪರಿಸರ ವ್ಯವಸ್ಥೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ ಎಂದು ರ‍್ಯಾಪಿಡೊ ವಾದಿಸಿದೆ.

ದ್ವಿಚಕ್ರ ವಾಹನಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್ ಮಂಜೂರಾತಿಗೆ ಸಂಬಂಧಿಸಿದಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಸಲಹೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳಿಗೆ ಅನುಗುಣವಾಗಿ ಸಾರಿಗೆ ಇಲಾಖೆಯು ಹೆಚ್ಚು ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ರಾಪಿಡೋದ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ ಹೇಳಿದ್ದಾರೆ. ರ‍್ಯಾಪಿಡೋ ಪ್ರಕರಣ

ಅದಾಗ್ಯೂ, ರಾಜ್ಯ ಸರ್ಕಾರವು ಬಿಳಿ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯು ಕರ್ನಾಟಕ ಮೋಟಾರು ವಾಹನ ನಿಯಮಗಳನ್ನು ಉಲ್ಲಂಘಿಸುತ್ತದೆ, ಅಂತಹ ದ್ವಿಚಕ್ರ ವಾಹನಗಳು ಕಾನೂನಿನ ಪ್ರಕಾರ ವಾಣಿಜ್ಯ ಕಾರ್ಯಾಚರಣೆಗಳನ್ನು ನಡೆಸುವಂತಿಲ್ಲ ಎಂದು ವಾದಿಸಿದೆ. ಜೊತೆಗೆ ಸರ್ಕಾರವು ಬೈಕ್-ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತಾ ಕ್ರಮಗಳ ಕೊರತೆಯನ್ನು ಕೂಡಾ ಉಲ್ಲೇಖಿಸಿದ್ದು, ಅವರ ಕಾರ್ಯಾಚರಣೆಯು ಕಾನೂನುಬಾಹಿರ ಎಂದು ಹೇಳಿದೆ.

ಬೈಕು ಟ್ಯಾಕ್ಸಿಗಳು ಬೆಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಅವರ ಕಡಿಮೆ ವೆಚ್ಚದ ಸಾರಿಗೆಯ ಕಾರಣಕ್ಕೆ ಹಲವಾರು ಆಟೋರಿಕ್ಷಾ ಚಾಲಕರ ಜೀವನೋಪಾಯಕ್ಕೆ ಹಾನಿಯಾಗಿದೆ ಎಂದು ಆಟೋರಿಕ್ಷಾ ಚಾಲಕರು ವಾದಿಸುತ್ತಿದ್ದಾರೆ. ಬೈಕ್ ಟ್ಯಾಕ್ಸಿಗಳ ವಿರುದ್ಧ ಆಟೋ ಒಕ್ಕೂಟಗಳು ಅನೇಕ ಪ್ರತಿಭಟನೆಗಳನ್ನು ನಡೆಸಿವೆ. ಕೆಲವು ಸಂದರ್ಭಗಳಲ್ಲಿ, ಆಟೋರಿಕ್ಷಾ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ನಿರ್ವಾಹಕರ ನಡುವೆ ದೈಹಿಕ ಘರ್ಷಣೆ ಕೂಡಾ ನಡೆದಿತ್ತು.

ರ‍್ಯಾಪಿಡೋ ಬೈಕ್ ಸವಾರರ ಮೇಲೆ ದಾಳಿ ಮಾಡುವ, ಬೆದರಿಸುವ ಅಥವಾ ಕಿರುಕುಳ ನೀಡುವ ಆಟೋರಿಕ್ಷಾ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಏಪ್ರಿಲ್‌ನಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ದಿ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ​​ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಹೈಕೋರ್ಟ್‌ ಈ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...