Homeಕರ್ನಾಟಕರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

ರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ರ‍್ಯಾಪಿಡೋ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಸೋಮವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಮೋಟಾರು ವಾಹನಗಳ ಕಾಯ್ದೆಯಡಿಯಲ್ಲಿ ನೀಡಲಾದ ಸೂಕ್ತ ಅನುಮತಿಗಳೊಂದಿಗೆ ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸುವಂತೆ ಸಂಸ್ಥೆಯು ಕೇಳಿತ್ತು. ರ‍್ಯಾಪಿಡೋ ಪ್ರಕರಣ

ಕಳೆದ ಮೂರು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠವು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರ ಜುಲೈ 19ರಂದು ನೀಡಲಾಗಿದ್ದ ಬೈಕ್-ಟ್ಯಾಕ್ಸಿ ಕಾರ್ಯಾಚರಣೆಗಳನ್ನು ವಿರೋಧಿಸುವ ಸರ್ಕಾರಿ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಬೇಕೆಂದು ರ‍್ಯಾಪಿಡೊ ಬಯಸಿದೆ. 2021 ರಲ್ಲಿ, ಸಂಸ್ಥೆಯ ಬೈಕ್ ಟ್ಯಾಕ್ಸಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿತ್ತು.

10 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸವಾರರು ಮತ್ತು ಪ್ರತಿ ವಾರ ಸುಮಾರು 20 ಲಕ್ಷ ಸವಾರಿಗಳೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಇದು ಕರ್ನಾಟಕದ ಸಾರಿಗೆ ಪರಿಸರ ವ್ಯವಸ್ಥೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ ಎಂದು ರ‍್ಯಾಪಿಡೊ ವಾದಿಸಿದೆ.

ದ್ವಿಚಕ್ರ ವಾಹನಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್ ಮಂಜೂರಾತಿಗೆ ಸಂಬಂಧಿಸಿದಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಸಲಹೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳಿಗೆ ಅನುಗುಣವಾಗಿ ಸಾರಿಗೆ ಇಲಾಖೆಯು ಹೆಚ್ಚು ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ರಾಪಿಡೋದ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ ಹೇಳಿದ್ದಾರೆ. ರ‍್ಯಾಪಿಡೋ ಪ್ರಕರಣ

ಅದಾಗ್ಯೂ, ರಾಜ್ಯ ಸರ್ಕಾರವು ಬಿಳಿ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯು ಕರ್ನಾಟಕ ಮೋಟಾರು ವಾಹನ ನಿಯಮಗಳನ್ನು ಉಲ್ಲಂಘಿಸುತ್ತದೆ, ಅಂತಹ ದ್ವಿಚಕ್ರ ವಾಹನಗಳು ಕಾನೂನಿನ ಪ್ರಕಾರ ವಾಣಿಜ್ಯ ಕಾರ್ಯಾಚರಣೆಗಳನ್ನು ನಡೆಸುವಂತಿಲ್ಲ ಎಂದು ವಾದಿಸಿದೆ. ಜೊತೆಗೆ ಸರ್ಕಾರವು ಬೈಕ್-ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತಾ ಕ್ರಮಗಳ ಕೊರತೆಯನ್ನು ಕೂಡಾ ಉಲ್ಲೇಖಿಸಿದ್ದು, ಅವರ ಕಾರ್ಯಾಚರಣೆಯು ಕಾನೂನುಬಾಹಿರ ಎಂದು ಹೇಳಿದೆ.

ಬೈಕು ಟ್ಯಾಕ್ಸಿಗಳು ಬೆಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಅವರ ಕಡಿಮೆ ವೆಚ್ಚದ ಸಾರಿಗೆಯ ಕಾರಣಕ್ಕೆ ಹಲವಾರು ಆಟೋರಿಕ್ಷಾ ಚಾಲಕರ ಜೀವನೋಪಾಯಕ್ಕೆ ಹಾನಿಯಾಗಿದೆ ಎಂದು ಆಟೋರಿಕ್ಷಾ ಚಾಲಕರು ವಾದಿಸುತ್ತಿದ್ದಾರೆ. ಬೈಕ್ ಟ್ಯಾಕ್ಸಿಗಳ ವಿರುದ್ಧ ಆಟೋ ಒಕ್ಕೂಟಗಳು ಅನೇಕ ಪ್ರತಿಭಟನೆಗಳನ್ನು ನಡೆಸಿವೆ. ಕೆಲವು ಸಂದರ್ಭಗಳಲ್ಲಿ, ಆಟೋರಿಕ್ಷಾ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ನಿರ್ವಾಹಕರ ನಡುವೆ ದೈಹಿಕ ಘರ್ಷಣೆ ಕೂಡಾ ನಡೆದಿತ್ತು.

ರ‍್ಯಾಪಿಡೋ ಬೈಕ್ ಸವಾರರ ಮೇಲೆ ದಾಳಿ ಮಾಡುವ, ಬೆದರಿಸುವ ಅಥವಾ ಕಿರುಕುಳ ನೀಡುವ ಆಟೋರಿಕ್ಷಾ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಏಪ್ರಿಲ್‌ನಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ದಿ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ​​ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಹೈಕೋರ್ಟ್‌ ಈ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...