Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...